ಗೋವಾದಲ್ಲಿ ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನ: ಪಿ.ಚಿದಂಬರಂ
Team Udayavani, Dec 10, 2021, 4:58 PM IST
ಪಣಜಿ: ಬಿಜೆಪಿಯನ್ನು ಸೋಲಿಸುವ ಸಾಮಥ್ರ್ಯ ಕಾಂಗ್ರೆಸ್ ಪಕ್ಷಕ್ಕಿದ್ದು, 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸುವುದು ಖಚಿತ. ಪ್ರತಿಪಕ್ಷಗಳು ಒಗ್ಗೂಡಬೇಕು. ಬಿಜೆಪಿಯನ್ನು ಸೋಲಿಸಲು ಮತ್ತು ದೇಶದ ಹಿತದೃಷ್ಠಿಯಿಂದ ಎಲ್ಲರೂ ಒಗ್ಗೂಡುವುದು ಮುಖ್ಯ. ಇದಕ್ಕಾಗಿ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಗೋವಾ ಚುನಾವಣಾ ಪ್ರಭಾರಿ ಪಿ.ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಗೋವಾಕ್ಕೆ ಪಕ್ಷಾಂತರ ಕಳಂಕ ಬಂದಿದೆ. ಯಾವುದೇ ಸಂದರ್ಭದಲ್ಲಿಯೂ ಪಕ್ಷಾಂತರಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಫರ್ಧಿಸಲು ಅವಕಾಶ ನೀಡುವುದಿಲ್ಲ. ಇಂತಹ ಪಕ್ಷಾಂತರಿಗಳನ್ನು ಸ್ಮರಿಸಿ ಸೋಲಿಸಬೇಕು. ಒಂದು ಪಕ್ಷದ ಟಿಕೆಟ್ನಲ್ಲಿ ಸ್ಫರ್ಧಿಸಿ ಆಯ್ಕೆಯಾಗಿ ಮತ್ತೊಂದು ಪಕ್ಷಕ್ಕೆ ಸೇರುವುದು ಸಾರ್ವಜನಿಕ ಅಭಿಪ್ರಾಯಕ್ಕೆ ಅಗೌರವ ತಂದಂತೆ ಎಂದು ನುಡಿದರು.
ಪಕ್ಷಾಂತರ ಕಾನೂನು ದೋಷಪೂರಿತವಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೊಸ ಪಕ್ಷಾಂತರ ವಿರೋಧಿ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್