ಎಂಪಿಎಂ ಕಾರ್ಖಾನೆ ಪುನರಾರಂಭಕ್ಕೆ ಯತ್ನ: ಶೆಟ್ಟರ್
Team Udayavani, Jul 2, 2020, 6:20 PM IST
ಭದ್ರಾವತಿ: ವಿಶ್ವೇಶ್ವರಯ್ಯನವರ ಪರಿಶ್ರಮದಿಂದ ಸ್ಥಾಪಿತವಾದ ಎಂಪಿಎಂ ಕಾರ್ಖಾನೆಯನ್ನು ಪುನರಾರಂಭಿಸುವ ನಿಟ್ಟಿಲ್ಲಿ ಸರ್ವ ಪ್ರಯತ್ನಗಳು ನಡೆದಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ನೌಕರರ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಖಾನೆಗೆ ಸೇರಿದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸುವಂತೆ ಕೋರಲಾಗಿತ್ತು.
ಈ ಕುರಿತು ಚರ್ಚಿಸಲು ಏರ್ಪಡಿಸಿದ್ದ ಸಭೆಯಲ್ಲಿ ಅರಣ್ಯ ಭೂಮಿಯನ್ನು ಕಾರ್ಖಾನೆಯ ಅಧಿಧೀನದಲ್ಲೇ ಉಳಿಸಿಕೊಳ್ಳುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕಾರ್ಖಾನೆ ಉಳಿದರೆ ಈ ಭಾಗದ ರೈತರು, ಕಾರ್ಮಿಕರು ಬದುಕು ಕಟ್ಟಿಕೊಳ್ಳುವಂತಾಗುವುದು.
ಕಾರ್ಖಾನೆಯನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದ್ದಾರೆ.