ರಿಕ್ಷಾದಲ್ಲಿ ಮಹಿಳೆ ಬಿಟ್ಟುಹೋದ 50 ಸಾವಿರ ರೂ. ಹಿಂದಿರುಗಿಸಿ ಮಾನವೀಯತೆ ಮೆರೆದ ರಿಕ್ಷಾ ಚಾಲಕ
Team Udayavani, Oct 14, 2020, 3:41 PM IST
ಉಡುಪಿ ; ಮಹಿಳೆಯೊಬ್ಬರು ರಿಕ್ಷಾದಲ್ಲಿ ಮರೆತು ಬಿಟ್ಟುಹೋದ 50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ ಅಂಬಲಪಾಡಿಯ ಜಯ ಶೆಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ.
ಘಟನೆ ವಿವರ ;
ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.
ಮಹಿಳೆಯನ್ನು ಬಸ್ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ ಶೆಟ್ಟಿ ಎಂಬವರು ಸೀಟ್ನಲ್ಲಿ ಪ್ಲಾಸ್ಟಿಕ್ ಇರುವುದನ್ನು ಗಮನಿಸಿದ್ದಾರೆ. ಏನೆಂದು ತೆರೆದಾಗ ಅದರಲ್ಲಿ 50ಸಾವಿರ ಹಣವಿದ್ದದ್ದು ಪತ್ತೆಯಾಗಿದೆ. ಆ ಕೂಡಲೇ ಉಡುಪಿಯಿಂದ ಕಟಪಾಡಿಗೆ ಬಂದು ಕುರ್ಕಾಲಿನ ಮಹಿಳೆಯನ್ನು ಸಂಪರ್ಕಿಸಿದ ಜಯ ಶೆಟ್ಟಿಯವರು 50ಸಾವಿರ ರೂಪಾಯಿ ಹಣವನ್ನು ಮರಳಿಸುವ ಮೂಲಕ ಮಾನವೀಯತೆ ಮೆರೆದರು.
ಆಟೋ ರಿಕ್ಷಾ ಚಾಲಕರ ಮಾನವೀಯ ಗುಣವನ್ನು ಹಾಗೂ ಅವರು ಮಾಡಿದ ಉಪಕಾರವನ್ನು ಮಹಿಳೆ ಹಾಗೂ ಕಟಪಾಡಿಯ ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. ಆಟೋರಿಕ್ಷಾ ಚಾಲಕ ಜಯ ಶೆಟ್ಟಿ ಅವರ ಈ ಕೆಲಸ ಇತರರಿಗೂ ಮಾದರಿಯಾಗಲಿ ಎಂಬುದೇ ಆಶಯ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ