ಮನೆಗಳಲ್ಲೇ ಇದ್ದು ಸಂಭ್ರಮಿಸಿದ ಜನತೆ


Team Udayavani, Aug 6, 2020, 7:04 AM IST

ಮನೆಗಳಲ್ಲೇ ಇದ್ದು ಸಂಭ್ರಮಿಸಿದ ಜನತೆ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕೆಂಬ ಹಲವು ವರುಷಗಳ ಕನಸು ನನಸಾದರೂ, ಕೋವಿಡ್ 19 ಸೋಂಕಿನ ಭೀತಿಯಿಂದಾಗಿ ಐತಿಹಾಸಿಕ ನಗರಕ್ಕೆ ಭೇಟಿ ಕೊಟ್ಟು ಭೂಮಿಪೂಜೆಯನ್ನು ಕಣ್ತುಂಬಿಕೊಳ್ಳಲು ಅನೇಕರಿಗೆ ಸಾಧ್ಯವಾಗಲಿಲ್ಲ.

ಹಾಗಂತ, ಯಾರೂ ನೊಂದುಕೊಂಡಿಲ್ಲ. ಬದಲಿಗೆ, ತಮ್ಮ ತಮ್ಮ ಮನೆಗಳಲ್ಲೇ ಹಬ್ಬದ ಸಂಭ್ರಮವನ್ನು ಮೂಡಿಸುವ ಮೂಲಕ ಭೂಮಿಪೂಜೆಯ ಖುಷಿಯನ್ನು ಅನುಭವಿಸಿದ್ದಾರೆ.

ದೇಶವಾಸಿಗಳು ಮನೆಗಳಲ್ಲೇ ಇದ್ದು, ವಿಶೇಷ ಪೂಜೆ ಪ್ರಾರ್ಥನೆ ಕೈಗೊಳ್ಳುವ ಮೂಲಕ ಆಧ್ಯಾತ್ಮಿಕವಾಗಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಮನೆಗಳನ್ನು ತಳಿರು ತೋರಣಗಳಿಂದ ಸಿಂಗಾರಗೊಳಿಸಿ, ಹಣತೆಗಳನ್ನು ಹಚ್ಚಿ ದೀಪಾವಳಿ ಹಬ್ಬದ ಮಾದರಿಯಲ್ಲೇ ಸಂಭ್ರಮ ಪಟ್ಟಿದ್ದಾರೆ.

ಕೆಲವರು 108 ಬಾರಿ ಶ್ರೀರಾಮನ ಹೆಸರನ್ನು ಬರೆಯುವ ಮೂಲಕ ಪರಿಕ್ರಮ ನೆರವೇರಿಸಿದರೆ, ಇನ್ನು ಕೆಲವರು ರಾಮಜಪ, ಭಜನೆಯನ್ನು ಹಮ್ಮಿಕೊಂಡಿದ್ದರು. ಕೆಲವೆಡೆ ಸಂಘ-ಸಂಸ್ಥೆಗಳು ಸಾಮೂಹಿಕ ಪೂಜೆಗಳನ್ನು ಹಮ್ಮಿಕೊಂಡಿದ್ದವು.

ಮುಸ್ಲಿಂ ಭಕ್ತಾದಿಗಳೂ ಭಾಗಿ: ಭಗವಾನ್‌ ಶ್ರೀರಾಮನನ್ನು ‘ಇಮಾಮ್‌-ಎ-ಹಿಂದ್‌’ ಎಂದು ಕರೆದಿರುವ ಅಯೋಧ್ಯೆಯ ಮುಸ್ಲಿಂ ಭಕ್ತಾದಿಗಳು ತಮ್ಮ ಮನೆಗಳ ಟಿವಿ ಮುಂದೆ ಕುಳಿತು ಇಡೀ ಭೂಮಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ವೀಕ್ಷಿಸಿದ್ದಾರೆ.

ಕೋವಿಡ್ 19 ಸೋಂಕಿನ ಪ್ರಭಾವ ತಗ್ಗಿದ ಬಳಿಕ ನಾವೂ ರಾಮ ಜನ್ಮಭೂಮಿಗೆ ತೆರಳಿ ಪೂಜೆ ಸಲ್ಲಿಸುತ್ತೇವೆ ಎಂದೂ ಅವರು ಹೇಳಿದ್ದಾರೆ. ನಮಗೆಲ್ಲರಿಗೂ ಈ ದಿನ ಸಂತಸ ತಂದಿದೆ. ನಾವು ಕೂಡ ಕರಸೇವಕರು.

ಶ್ರೀರಾಮನನ್ನು ಇಮಾಮ್‌-ಎ-ಹಿಂದ್‌ ಎಂದು ಪರಿಗಣಿಸುವವರು ಎಂದು ಸುನ್ನಿ ಸಾಮಾಜಿಕ ಫೋರಂ ಅಧ್ಯಕ್ಷ ರಜಾ ರಯೀಸ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸುವಾಗ ನಾವು ಡ್ರಮ್‌ಗಳನ್ನು ಬಾರಿಸಿ, ಹಾರ್ಮೋ ನಿಯಂ ನುಡಿಸಿ ಸಂಭ್ರಮಿಸಿದೆವು.

ಶ್ರೀರಾಮ ನಮ್ಮ ಪೈಗಂಬರರಿದ್ದಂತೆ ಎಂದೂ ಅವರು ಹೇಳಿದ್ದಾರೆ. ಜತೆಗೆ, ರಾಮಮಂದಿರವು ಸಹೋದರತ್ವದ ಸಂಕೇತವಾಗಲಿ ಎಂದೂ ಆಶಿಸಿದ್ದಾರೆ.

ಸಿಎಂ ಕಚೇರಿಯಲ್ಲಿ ದೀಪೋತ್ಸವ
ಭೂಮಿಪೂಜೆ ಬಳಿಕ ಬುಧವಾರ ಸಂಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರ ಲಕ್ನೋದ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಗಿದೆ. ಝಾರ್ಖಂಡ್‌ನ‌ಲ್ಲಿ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲೂ ದೀಪಗಳನ್ನು ಹಚ್ಚಲಾಗಿದೆ. ಕೇಂದ್ರ ಸಚಿವ ಡಾ| ಹರ್ಷವರ್ಧನ್‌ ಅವರು ತಮ್ಮ ಮನೆಯಲ್ಲೇ ಎಲ್ಲ ಸಿಬಂದಿಗೂ ಸಿಹಿ ಹಂಚಿದ್ದಾರೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.