ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ: ಸಚಿವ ನಾಗೇಶ್‌

ರಾಷ್ಟ್ರೀಯ ಶಿಕ್ಷಣ ನೀತಿ ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ

Team Udayavani, Nov 3, 2021, 8:30 PM IST

ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ: ಸಚಿವ ನಾಗೇಶ್‌

ಸುಬ್ರಹ್ಮಣ್ಯ : ಕಳೆದ ಎರಡು ವರ್ಷ ಕೋವಿಡ್‌ನಿಂದಾಗಿ ಶಿಕ್ಷಕರ ನೇಮಕಾತಿ ಆಗದ ಕಾರಣ ರಾಜ್ಯಾದ್ಯಂತ ಶಿಕ್ಷಕರ ಕೊರತೆ ತಲೆದೋರಿದೆ. ಈ ಹಿಂದೆ ಸುಮಾರು 10 ಸಾವಿರ ಶಿಕ್ಷಕರ ನೇಮಕಾತಿಗಾಗಿ ಟಿಇಟಿ ಮತ್ತು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ ಕೇವಲ 3 ಸಾವಿರ ಮಂದಿ ಮಾತ್ರ ತೇರ್ಗಡೆ ಹೊಂದಿದ್ದರು. ಈ ಕಾರಣದಿಂದ ತತ್‌ಕ್ಷಣವೇ ಮತ್ತೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ಸಿಇಟಿ ಪರೀಕ್ಷೆ ನಡೆಸಿ ಶಿಕ್ಷಕರ ಆಯ್ಕೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದರು.

ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಅಭ್ಯುದಯಕ್ಕೆ ಪೂರಕವಾಗಿದ್ದು ಮುಂದಿನ 2022-2023ರ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ, 3ನೇ ತರಗತಿ ಮತ್ತು 9 ನೇ ತರಗತಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆರಂಭದಲ್ಲಿ ಅನುಷ್ಠಾನಗೊಳಿಲಾಗುವುದು ಎಂದರು.

ಕೋವಿಡ್‌-19ನ ನಂತರ ಶಾಲೆಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಬಹಳ ಸಂತೋಷ ಮತ್ತು ಲವಲವಿಕೆಯಿಂದ ಶಾಲೆಗೆ ಬರುತ್ತಿದ್ದಾರೆ. ರಾಜ್ಯದ ಅನೇಕ ಶಾಲೆಗಳಲ್ಲಿ 100ಕ್ಕೆ ಶೇಕಡಾ 100ರಷ್ಟು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಸರಕಾರಿ ಶಾಲೆಯತ್ತ ಮಕ್ಕಳು
ಕೊರೊನಾ ಅನಂತರ ಮಕ್ಕಳು ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆಗಳತ್ತ ಹೆಜ್ಜೆ ಇಡುತ್ತಿದ್ದಾರೆ. ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಇದೀಗ ಅನುದಾನಿತ ಶಾಲೆಗಳಲ್ಲಿ ಹೆಚ್ಚಿನ ಮಕ್ಕಳು ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.

ಇದನ್ನೂ ಓದಿ : ಪಾದಚಾರಿ ಮತ್ತು ಟ್ರಾಕ್ಟರ್ ಗೆ ಬೈಕ್ ಸವಾರ ಢಿಕ್ಕಿ: ಸ್ಥಳದಲ್ಲೇ ಸಾವು

ಪಠ್ಯಗಳಲ್ಲಿ ಕಡಿತವಿಲ್ಲ
ಈ ವರ್ಷ ಪಠ್ಯಗಳನ್ನು ಕಡಿತಗೊಳಿಸುವ ಯಾವುದೇ ನಿರ್ಧಾರಗಳಿಲ್ಲ. ಪಠ್ಯ ಕಡಿತಗೊಳಿಸಿದರೆ ಮುಂದಿನ ವರ್ಷದ ಶಿಕ್ಷಣದ ಮೇಲೆ ತೀವ್ರವಾದ ಪರಿಣಾಮ ಬೀರುವ ಕಾರಣ ಈ ನಿರ್ಧಾರ ಮಾಡಲಾಗಿದೆ. ಉಪನ್ಯಾಸಕರು ಮತ್ತು ಶಿಕ್ಷಕರು ಈ ಬಾರಿ ವಿಶೇಷ ತರಗತಿಗಳನ್ನು ಮಾಡುವ ಮೂಲಕ ಪಠ್ಯವಸ್ತುಗಳನ್ನು ನಿಗದಿತ ಸಮಯದೊಳಗೆ ಮುಗಿಸುವಲ್ಲಿ ಶ್ರಮ ವಹಿಸಲಿದ್ದಾರೆ ಎಂದರು.

ಬಿಸಿಯೂಟ ಸೇರಿದಂತೆ ಮಕ್ಕಳಿಗೆ ದೊರಕಬೇಕಾದ ಸೌಲಭ್ಯಗಳನ್ನು ಆರಂಭಿಸಲಾಗಿದೆ. ಮುಂದೆ ಶಾಲೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುವುದು. ಮಕ್ಕಳಿಗೆ ಕೋವಿಡ್‌-19 ವ್ಯಾಕ್ಸಿನ್‌ ನೀಡಲು ಪರೀಕ್ಷೆಗಳು ನಡೆಯುತ್ತಿವೆ. ವ್ಯವಸ್ಥಿತ ಪರೀಕ್ಷೆಗಳ ನಂತರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್‌ ಅನ್ನು ನೀಡಲಾಗುವುದು ಎಂದರು.
ಈ ಸಂದರ್ಭ ಮೀನುಗಾರಿಕೆ ಸಚಿವ ಎಸ್‌.ಅಂಗಾರ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.