ಕೇಂದ್ರದಿಂದ ಪರಿಹಾರ ತರಲಾಗದ ಯಡಿಯೂರಪ್ಪ ದುರ್ಬಲ ಸಿಎಂ: ಎಚ್.ಡಿ. ಕುಮಾರಸ್ವಾಮಿ ಆರೋಪ
Team Udayavani, Jan 2, 2020, 5:44 PM IST
ಬೆಂಗಳೂರು: ಕೇಂದ್ರದಿಂದ ಬರ ಪರಿಹಾರ , ಅನುದಾನ ದಿಟ್ಟತನದಿಂದ ಕೇಳುವ ಶಕ್ತಿ ಇಲ್ಲದ ಯಡಿಯೂರಪ್ಪ ಅವರು ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರಮಾಣ ವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದರೀಗ ಪರಿಸ್ಥಿತಿ ವಿಷಮವಾಗಿದೆ.
ರಾಜ್ಯದ ಕೇಂದ್ರದಿಂದ ಬರಬೇಕಾದ ಬರ ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಯಡಿಯೂರಪ್ಪ ಅವರಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್ನೂ ಪಡೆಯಲಾಗದ ಯಡಿಯೂರಪ್ಪ ಆವರು ದುರ್ಬಲ ಮುಖ್ಯಮಂತ್ರಿ.
ರಾಜ್ಯದಿಂದ 25 ಸಂಸದರನ್ನು ಪಡೆದಿರುವ ನರೇಂದ್ರ ಮೋದಿಯವರು ಕೇಂದ್ರದ ಚಂದಮಾಮನನ್ನು ತೋರಿಸುತ್ತಿದ್ದಾರೆ. ‘ಅನರ್ಹ ಸರ್ಕಾರ’ ರಚಿಸಿಕೊಂಡ ಬಿ.ಎಸ್.ಯಡಿಯುರಪ್ಪ ಅವರು ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?