ನೀವು ಬೀದಿ ಸುತ್ತಿ ಪೊಲೀಸರು ಕ್ರಮಕೈಗೊಂಡರೆ ನನ್ನನ್ನು ದೂರಬೇಡಿ: ಬಿಎಸ್ ವೈ ಎಚ್ಚರಿಕೆ
Team Udayavani, Mar 24, 2020, 9:57 AM IST
ಬೆಂಗಳೂರು: ಕರ್ನಾಟಕ ಲಾಕ್ ಡೌನ್ ಆದೇಶವಿದ್ದರೂ ಜನರು ನಿಯಮಗಳನ್ನು ಗಾಳಿಗೆ ತೂರಿರುವುದನ್ನು ಕಂಡು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬೈಕ್ ಗಳಲ್ಲಿ, ಕಾರುಗಳಲ್ಲಿ ರಸ್ತೆಯಲ್ಲಿ ಸಂಚರಿಸುವುದು ಕಂಡು ಬಂದರೆ ಪೊಲೀಸರು ಕ್ರಮಕೈಗೊಂಡರೆ ನನ್ನನ್ನು ದೂರಬೇಡಿ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಜನರು ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ. ಎಂಟು ದಿನಗಳ ಕಾಲ ಸಹಕಾರ ನೀಡಿ ಎಂದು ಮನವಿ ಮಾಡಿದರು.
ಬೆಂಗಳೂರಿನ ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡಲಾಗುವುದು ಎಂದು ಸೋಮವಾರ ಸರಕಾರ ತಿಳಿಸಿತ್ತು. ಆದರೆ ಇಂದು ಆ ಉಚಿತ ಉಟ ವ್ಯವಸ್ಥೆಯನ್ನು ರದ್ದುಗೊಳಿಸಿದ ಬಿಎಸ್ ವೈ ಜನರು ಗುಂಪಾಗಿ ಸೇರುವ ಕಾರಣ ಇಂದಿರಾ ಕ್ಯಾಂಟೀನ್ ಮುಚ್ಚಲಾಗುವುದು ಎಂದರು.
ಹೊಟೇಲ್ ಗಳಿಂದ ಮನೆಗೆ ಪಾರ್ಸೆಲ್ ತರಿಸಿಕೊಳ್ಳಿ. ಒಂದು ವೇಳೆ ಹೊಟೇಲಿಗರು ದುಬಾರಿ ಹಣ ಪಡೆಯುವುದು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್ ವೈ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil