Hubli; ಮುಸ್ಲಿಂ ಮತ ಗಳಿಕೆಗೆ ಬಜರಂಗದಳ ನಿಷೇಧ ಹೇಳಿಕೆ; ಬಸನಗೌಡ ಪಾಟೀಲ ಯತ್ನಾಳ

ಕಾಂಗ್ರೆಸ್‌ನಲ್ಲಿ ಎರಡು ಪ್ರಿಯಾಂಕಗಳಿವೆ. ಇವುಗಳಲ್ಲಿ ಯಾವುದು ಪುಲ್ಲಿಂಗ, ಯಾವುದೂ ಸ್ತ್ರೀಲಿಂಗ

Team Udayavani, May 3, 2023, 10:18 AM IST

Hubli; ಮುಸ್ಲಿಂ ಮತ ಗಳಿಕೆಗೆ ಬಜರಂಗದಳ ನಿಷೇಧ ಹೇಳಿಕೆ; ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಅಧಿಕಾರಕ್ಕೆ ಬರದೇ ಇರುವವರು ಬಜರಂಗದಳ ನಿಷೇಧ ಮಾಡಲು ಹೇಗೆ ಸಾಧ್ಯ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ನವರು ಆರೆಸ್ಸೆಸ್‌, ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳನ್ನು ನಿಷೇಧಿಸುತ್ತೇವೆ ಎಂದು ಹೇಳುತ್ತಾರೆ.

ಕೇವಲ ಮುಸ್ಲಿಮರ ಮತಕ್ಕಾಗಿ ಈ ರೀತಿ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ. ಅವರು ಯಾವತ್ತೂ ಹಿಂದೂಗಳ ಪರವಾಗಿಲ್ಲ ಹಾಗೂ ಅವರಿನ್ನು ಅಧಿಕಾರದ ಆಸೆ ಸಹ ಬಿಡಬೇಕು. ಕಾಂಗ್ರೆಸ್‌ ಭಾರತದಲ್ಲಿರುವ ಪಾಕಿಸ್ತಾನದ ಮುಸ್ಲಿಂ ಲೀಗ್‌ ಇದ್ದಂತೆ. ಅವರು ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.

ಹೀಗಾಗಿ ಬಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದರು. ಮುಸ್ಲಿಮರು ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ಪಡೆಯುತ್ತಿದ್ದರು. ಅದನ್ನು ನಮ್ಮ ಸರ್ಕಾರ ರದ್ದು ಮಾಡಿದೆ. ಅವರಿಗೆ ಮತ್ತೆ ಮೀಸಲಾತಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ.
ಹಿಂದೂ ವಿರೋಧಿ ನೀತಿಯಿಂದಾಗಿ ಕೇಂದ್ರದಲ್ಲಿ ಅಧಿಕೃತ ವಿರೋಧ ಪಕ್ಷವಾಗಲು ಸಾಧ್ಯವಾಗಿಲ್ಲ. ಎಲ್ಲ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಸೋಲುತ್ತಿದೆ. ಕಾಂಗ್ರೆಸ್‌ನವರ ಪ್ರಣಾಳಿಕೆಯನ್ನು ಎಂದಿಗೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಾಗಿಯೇ ಈ ರೀತಿ ಗ್ಯಾರಂಟಿಗಳನ್ನು ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ.

ರಾಜ್ಯದ ಜನ ಇವುಗಳನ್ನು ಒಪ್ಪುವುದಿಲ್ಲ. ಅವರ ವಾರೆಂಟಿಯೇ ಮುಗಿದು ಹೋಗಿದೆ. ಉದ್ಯೋಗ ಸೃಷ್ಟಿಸುವ ಯಾವ ಘೋಷಣೆಗಳನ್ನೂ ಅವರು ಮಾಡಿಲ್ಲ. ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವೆಲ್ಲ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡುವ ಯೋಜನೆಗಳು. ಜನರಿಗೆ ಒಳ್ಳೆಯದಾಗುವುದಿಲ್ಲ ಎಂದರು.

ಯಾವುದು ಪುಲ್ಲಿಂಗ, ಯಾವುದು ಸ್ತ್ರೀಲಿಂಗ?
ಕಾಂಗ್ರೆಸ್‌ನಲ್ಲಿ ಎರಡು ಪ್ರಿಯಾಂಕಗಳಿವೆ. ಇವುಗಳಲ್ಲಿ ಯಾವುದು ಪುಲ್ಲಿಂಗ, ಯಾವುದೂ ಸ್ತ್ರೀಲಿಂಗ ಎಂಬುದು ಗೊತ್ತಿಲ್ಲ.
ಒಂದು ಪ್ರಿಯಾಂಕ ಡೂಪ್ಲಿಕೇಟ್‌ ಗಾಂಧಿ. ಇವರು ಮೋದಿ ಬಗ್ಗೆ ಹಗುರವಾಗಿ  ಮಾತನಾಡುತ್ತಾರೆ. ಇನ್ನೊಂದು ಪ್ರಿಯಾಂಕ
ನಾಲಾಯಕ್‌ ಎನ್ನುವ ಶಬ್ದ ಬಳಕೆ ಮಾಡುತ್ತಾರೆ. ಅವರಪ್ಪ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪ ಎಂದಿದ್ದರು. ಇವರಿಗೆ
ಪ್ರಧಾನಿ ಬೈಯದಿದ್ದರೆ ಆಗುವುದಿಲ್ಲ. ಇಂತಹವರೇ ನಮ್ಮ ಪಕ್ಷದ ಸೀಟು ಹೆಚ್ಚಿಸುತ್ತಾರೆ. ಪ್ರಿಯಾಂಕ ಹಾಗೂ ರಾಹುಲ್‌ ಇವರಿಬ್ಬರಿಂದ ನಾವು 150 ಸೀಟುಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಯತ್ನಾಳ ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.