ಶಾಲೆಯ ಜಾಗ ಅತಿಕ್ರಮಣ: 6 ಎಕರೆ 18ಗುಂಟೆ ಜಾಗದಲ್ಲಿ ಈಗ ಉಳಿದಿರುವುದು ಕೇವಲ 3 ಎಕರೆ ಮಾತ್ರ

ಅಧಿಕಾರಿಗಳ ನಿರ್ಲಕ್ಷದಿಂದ ಜಾಗ ಅತಿಕ್ರಮಣ

Team Udayavani, Apr 16, 2022, 8:05 PM IST

ಶಾಲೆಯ ಜಾಗ ಅತಿಕ್ರಮಣ : 6 ಎಕರೆ 18 ಗುಂಟೆ ಜಾಗದಲ್ಲಿ ಉಳಿದಿರುವುದು ಕೇವಲ ಮೂರು ಎಕರೆ ಮಾತ್ರ

ರಬಕವಿ-ಬನಹಟ್ಟಿ: ತಾಲ್ಲೂಕಿನ ಹನಗಂಡಿ ಗ್ರಾಮದ ಸರ್ಕಾರಿ ತೋಟದ ಶಾಲೆ ನಂ 1ಕ್ಕೆ ಮಂಜೂರಾದ ಸ್ಥಳವನ್ನು ಶಾಲೆಯ ಸುತ್ತ ಮುತ್ತಲಿನ ಜನರು ಅತಿಕ್ರಮಣ ಮಾಡುತ್ತಿದ್ದಾರೆ ಎಂದು ಶಾಲಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ  ಶಿವಾನಂದ ಕುಂಟಶೆಟ್ಟಿ ಆರೋಪಿಸಿದ್ದಾರೆ.

ಅವರು ಶನಿವಾರ ಹನಗಂಡಿ ಗ್ರಾಮದ ಶಾಲಾ ಆವರಣದಲ್ಲಿ ಪತ್ರಿಕೆಯ ಜೊತೆಗೆ ಮಾತನಾಡಿ, ಅತಿಕ್ರಮಣದ ಕುರಿತು ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ, ಜಮಖಂಡಿ ಉಪವಿಭಾಗಾಧಿಕಾರಿಗಳಿಗೆ, ತಾಲ್ಲೂಕಿನ ತಹಶೀಲ್ದಾರ್, ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಸರ್ವೆ ಅಧಿಕಾರಿಗಳಿಗೆ 2019 ರಿಂದ ದಿ. 8.04. 2022 ರವರೆಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಯಾವುದೆ ಪ್ರಯೋಜನವಾಗಿಲ್ಲ. ಈ ಕುರಿತು ಸರ್ವೆ ಅಧಿಕಾರಿಯನ್ನು ಶಾಲೆಯ ಜಾಗದ ಸರ್ವೆ ಮಾಡಿ ಎಂದು ಕೇಳಿದರೆ ಅವರು ನಾನು ಮಾಡುವುದಿಲ್ಲ ಎನ್ನುತ್ತಾರೆ ಎಂದು ಶಿವಾನಂದ ಕುಂಟಶೆಟ್ಟಿ ತಿಳಿಸಿದರು.

ಈ ಶಾಲೆಗೆ ಒಟ್ಟು 6 ಎಕರೆ 18 ಗುಂಟೆಯಷ್ಟು ಜಾಗ ಕಟ್ಟಡ ಮತ್ತು ಆಟದ ಮೈದಾನಕ್ಕೆ ನೀಡಲಾಗಿದೆ. ಆದರೆ ಸುತ್ತ ಮುತ್ತಲಿನ ಒತ್ತುವರೆಯಿಂದಾಗಿ ಈಗ ಕೇವಲ 3 ಎಕರೆಯಷ್ಟು ಜಾಗ ಮಾತ್ರ ಉಳಿದುಕೊಂಡಿದೆ. ಈ ಶಾಲೆಯಲ್ಲಿ ಹನಗಂಡಿ ಹಾಗೂ ಸುತ್ತ ಮುತ್ತಲಿನ ತೋಟದ ಪ್ರದೇಶದ 1 ನೇ ತರಗತಿಯಿಂದ 8 ನೇ ವರ್ಗದವರೆಗೆ 304 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎನ್‌ಎನ್‌ಎಂಎಸ್ ಪರೀಕ್ಷೆ ಪಾಸು ಮಾಡಿದ್ದಾರೆ.

ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ಸಿಕ್ಕಿದೆ: ಸಿದ್ದರಾಮಯ್ಯ

ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಅದಷ್ಟು ಬೇಗನೆ ಸರ್ವೆ ಕಾರ್ಯ ನಡೆಸಿ ಅತಿಕ್ರಮಣವಾದ ಜಾಗವನ್ನು ಶಾಲೆಗೆ ಮರಳಿಸದೆ ಇದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಜೊತೆಗೂಡಿ ತಹಶೀಲ್ದಾರ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಸ್ಡಿಎಂಸಿ ಸದಸ್ಯ ಸುಭಾಸ ಮುರಗುಂಡಿ ತಿಳಿಸಿದರು.

ಶಾಲೆಯ ಜಾಗ ಅತಿಕ್ರಮಣವಾಗಿದೆ. ಆದಷ್ಟು ಬೇಗನೆ ಸರ್ವೆ ಕಾರ್ಯವನ್ನು ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳಿಗೆ ತಿಳಿಸುತ್ತೇನೆ.
– ಸಿದ್ದು ಸವದಿ, ಶಾಸಕರು ತೇರದಾಳ

ಅತಿಕ್ರಮಣ ಕುರಿತು ತಹಶೀಲ್ದಾರ್ ಕಾರ್ಯಾಲಯಕ್ಕೆ ಎಸ್ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಸರ್ವೆ ಕಾರ್ಯಕ್ಕೆ ಆಗ್ರಹಿಸಿ ಮನವಿ ನೀಡಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರ ಗಮನಕ್ಕೂ ತರಲಾಗಿದೆ. ಆದಷ್ಟು ಬೇಗನೆ ಸರ್ವೆ ಕಾರ್ಯ ನಡೆಸಬೇಕು ಮತ್ತು ಶಾಲೆ ಪ್ರದೇಶಕ್ಕೆ ಬೌಂಡರಿಗಳನ್ನು ಹಾಕಿಕೊಡಬೇಕು ಎಂದು ತಹಶೀಲ್ದಾರ್ ಅವರಿಗೆ ಒತ್ತಾಯಿಸುತ್ತೇನೆ.
– ಸಿ.ಎಂ.ನ್ಯಾಮಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಜಮಖಂಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.