ಬನಹಟ್ಟಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನ ಕಾಮಗಾರಿ ಶರವೇಗದಲ್ಲಿ ಪ್ರಾರಂಭ


Team Udayavani, Jul 25, 2022, 9:27 PM IST

ಬನಹಟ್ಟಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನ ಕಾಮಗಾರಿ ಶರವೇಗದಲ್ಲಿ ಪ್ರಾರಂಭ

ರಬಕವಿ-ಬನಹಟ್ಟಿ: ಜಮಖಂಡಿಯ ಪ್ರಾದೇಶಿಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಡೆಂಪೋ ಡೈರಿಯ ಮುಂಭಾಗದಲ್ಲಿರುವ ಅಂದಾಜು 42 ಎಕರೆ ಭೂ ಪ್ರದೇಶದಲ್ಲಿ ಸಾರ್ವಜನಿಕರ ಮತ್ತು ಮಕ್ಕಳ ಅನುಕೂಲಕ್ಕಾಗಿ ವೃಕ್ಷ ಉದ್ಯಾನ ವನವನ್ನು ಕಳೆದ ತಿಂಗಳು ಚಾಲನೆ ನೀಡಲಾಗಿತ್ತು. ಈ ಕಾಮಗಾರಿ ವೃಕ್ಷೋದ್ಯಾನಕ್ಕೆ 2 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದ್ದು, ಈಗ ರೂ. 25 ಲಕ್ಷ ವೆಚ್ಚದ ಮೊದಲ ಹಂತದ ಕಾಮಗಾರಿ ಅತೀ ಶರವೇಗದಲ್ಲಿ ಪ್ರಾರಂಬಿಸಿದ್ದು ತಾಲೂಕಿನ ಜನರಲ್ಲಿ ಸಂತಸವನ್ನುಂಟು ಮಾಡಿದೆ.

ಈ ಮೊದಲು ಇಲ್ಲಿ ಬಿಸಿಲು ಬಿಸಿ ನೋಡಲಾಗುತ್ತಿರಲಿಲ್ಲ, ಈಗ ಇಲ್ಲಿ ಗಿಡಗಳನ್ನು ನೆಡುತ್ತಿರುವುದರಿಂದ ತಂಪು ಗಾಳಿ ಬಿಸುವ ಮತ್ತು ಅನುಭವಿಸುವ ಅವಕಾಶ ಇಲ್ಲಿನ ಜನರಿಗೆ ದೊರಕಲಿದೆ.

ಅದರಂತೆ ಕಳೆದ ಒಂದು ವಾರದಿಂದ ಅರಣ್ಯ ಇಲಾಖೆ ಜಾಗೆಯಲ್ಲಿ ಮೊದಲ ಹಂತದಲ್ಲಿ 2600 ಕ್ಕೂ ಅಧೀಕ ಗಿಡಗಳನ್ನು ನೆಡಲಾಗಿದೆ. ಇಲ್ಲಿ ಬೆಳಗ್ಗೆ ಮತ್ತು ಸಂಜೆ ವಾಯು ವಿಹಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಸಿ ರಸ್ತೆ ನಿರ್ಮಾಣ, ಮಕ್ಕಳು ಆಡುವ ಸಲಕರಣೆಗಳು, ಜೊತೆಗೆ ಇಲ್ಲಿ ಇರುವ ಬಾಂದಾರವನ್ನು ಅಭಿವೃದ್ಧಿಗೊಳಿಸಿ ಅಲ್ಲಿ ದೋಣಿ ವಿಹಾರಕ್ಕೂ ಅವಕಾಶವನ್ನು ನೀಡುವ ಯೋಜನೆ ಕೂಡಾ ಅತಿ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ನೆಟ್ಟ ಗಿಡಗಳಿಗೆ ಹನಿ ನೀರಾವರಿಯ ಮೂಲಕ ನೀರು ನೀಡುವ ಸೌಕರ್ಯವನ್ನು ಕೂಡಾ ಮಾಡಲಾಗುವುದು. ಹಂತ ಹಂತವಾಗಿ ಈ ವೃಕ್ಷೋದ್ಯಾನವನ್ನು ಅಭಿವೃದ್ಧಿ ಪಡಿಸಲಾಗುವುದು. ಅದೇ ರೀತಿಯಾಗಿ ಬನಹಟ್ಟಿಯ ಕೆಎಚ್‌ಡಿಸಿ ರಸ್ತೆಯಲ್ಲಿರುವ ನಾಲ್ಕು ಅರಣ್ಯ ಪ್ರದೇಶದ ಭೂಮಿಯಲ್ಲಿಯೂ ಕೂಡಾ ಅರಣ್ಯೀಕರಣಗೊಳಿಸಿ ಅಲ್ಲಿಯೂ ಮಕ್ಕಳಿಗೆ ಅನುಕೂಲವಾಗುವು ನಿಟ್ಟಿನಲ್ಲಿ ಅಭಿವೃದ್ಧಿಗೊಳಿಸುವ ಯೋಜನೆ ಕೂಡಾ ಇದರಲ್ಲಿ ಅಳವಡಿಸಲಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಗಿಡ ಮರಗಳನ್ನು ರಕ್ಷಿಸುವುದರ ಜೊತೆಗೆ ಸುಂದರ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳು ಅಗತ್ಯವಾಗಿವೆ. ಮುಂದಿನ ಪಿಳಿಗೆಯ ಅರೋಗ್ಯದ ಹಿತದೃಷ್ಟಿಯಿಂದು ನಾವೆಲ್ಲರು ಗಿಡಮರಗಳನ್ನು ಬೆಳೆಸಿದರೆ ಅದೆ ಅವರಿಗೆ ಕೊಡುವ ಕೊಡುಗೆ.
– ಸಿದ್ದು ಸವದಿ. ಶಾಸಕರು ತೇರದಾಳ ಮತಕ್ಷೇತ್ರ.

ಈ ಪ್ರದೇಶದಲ್ಲಿ ಈಗಾಗಲೇ 10 ಸಾವಿರಕ್ಕೂ ಅಧೀಕ ಬೇವಿನ ಮರಗಳನ್ನು ನೆಟ್ಟಿದ್ದು, ಅವೆಲ್ಲ ಈಗ ಆಳೆತ್ತರಕ್ಕೆ ಬೆಳೆದು ನಿಂತಿವೆ. ಸಾರ್ವಜನಿಕರು ಈ ಜಾಗೆಯನ್ನು ಒತ್ತುವರಿಮಾಡಬಾರದು, ಮತ್ತು ಅರಣ್ಯದಲ್ಲಿರುವ ಗಿಡಮರಗಳಗೆ ಹಾನಿ ಮಾಡಬಾರದು.
– ವಾಸಿಂ ತೇನಗಿ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಮಖಂಡಿ.

ಈ ಪ್ರದೇಶವನ್ನು ಜಿಲ್ಲೆಯಲ್ಲಿಯೇ ಅತೀ ಸುಂದರವಾದ ವೃಕ್ಷೋಧ್ಯಾನವನವನ್ನಾಗಿಸಲಾಗುವುದು. ಮಕ್ಕಳು ವಯೋವರದ್ದರು ಇಲ್ಲಿ ಸುತ್ತಾಡಿದರೆ ಮನಸ್ಸಿಗೆ ಮದುನೀಡುವಂತಾಗಬೇಕು. ಹಾಗೆ ಈ ಪ್ರದೇಶದಲ್ಲಿ ಅಬಿವೃದ್ಧಿ ಪಡಿಸಲಾಗುತ್ತಿದೆ. ಎನ್ನುತ್ತಾರೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಕಾಳಪ್ಪನವರ ಹಾಗೂ ತೇರದಾಳ ವಲಯ ಅರಣ್ಯ ಅಧಿಕಾರಿ ಮಲ್ಲು ನಾವಿ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.