ಬಾಳು ಬಂಗಾರವಾಗಿಸಿದ `ಬಾಳೆ’: ಬಾಳೆಗೆ ಬಂಗಾರದ ಬೆಲೆ…….!


Team Udayavani, Jul 15, 2022, 2:35 PM IST

14

ರಬಕವಿ-ಬನಹಟ್ಟಿ: ರಾಜ್ಯವಷ್ಟೇ ಅಲ್ಲದೆ ಈ ಬಾರಿ ದೇಶಾದ್ಯಂತ ಬಾಳೆ ಬೆಳೆಯ ಇಳುವರಿ ಕ್ಷೀಣಿಸಿದ್ದರ ಹಿನ್ನಲೆಯಲ್ಲಿ ಜವಾರಿಯಷ್ಟೇ ಹೈಬ್ರೀಡ್ ತಳಿಯ ಬಾಳೆಗೂ ಬಾರಿ ಬೇಡಿಕೆ ಬಂದಿದ್ದು, ಐತಿಹಾಸಿಕ ದಾಖಲೆ ಬರೆಯುವಂತಾಗಿದೆ.

ಹೌದು, ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಪ್ರತಿ ಕೆಜಿ ಬಾಳೆಗೆ 2 ರಿಂದ 3 ರೂ. ಇದ್ದದ್ದು, ಇದೀಗ 22 ರಿಂದ 23 ರೂ. ಗಳವರೆಗೆ ಏರಿಕೆ ಕಂಡಿದ್ದು, ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ.

ಜವಾರಿ, ರಸಬಾಳೆ, ಏಲಕ್ಕಿ ಬಾಳೆ ಹಣ್ಣಿನಷ್ಟೇ ಹೈಬ್ರೀಡ್ ತಳಿಯ ಜಿ-9 ಬಾಳೆಯೂ ಸಮನಾದ ಬೆಲೆಗೆ ಮಾರುಕಟ್ಟೆಯಲ್ಲಿ ದುಬಾರಿಯಾಗಿದ್ದು, ಜನರು ಹೆಚ್ಚು ಕಡಿಮೆ ಸೇಬು, ಮಾವಿನ ಹಣ್ಣಿಗೆ ನೀಡುವಷ್ಟು ಹಣ ಕೊಟ್ಟು ಬಾಳೆ ಹಣ್ಣು ಖರೀದಿಸುವದು ಅನಿವಾರ್ಯವಾಗಿದೆ.

ರಾಜ್ಯದಲ್ಲಿ ಬೆಳೆಯವ ಬಾಳೆ ಬೆಳೆ ಉತ್ಪನ್ನದಲ್ಲಿ ಕೊರತೆ ಕಾಣಿಸಿಕೊಂಡಿದೆ. ಹೀಗಾಗಿ ಈಗ ತಮಿಳುನಾಡು, ಆಂಧ್ರ ರಾಜ್ಯಗಳಿಂದ ಬಾಳೆ ಆಮದು ಮಾಡಿಕೊಳ್ಳಲಾಗುತ್ತಿದ್ದರೂ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಹಜವಾಗಿ ಬಾಳೆಹಣ್ಣಿನ ಬೆಲೆ ಗಗನಕ್ಕೇರಿದೆ. ಕೆಲವಡೆ ಬಾಳೆಹಣ್ಣು ಮಾರಾಟಕ್ಕೆ ಸಿಗುತ್ತಿಲ್ಲ. ರಾಜ್ಯದ ಸಗಟು ಮಾರುಕಟ್ಟೆಯಲ್ಲಿ ಜಿ-9 ಬಾಳೆಯು ಕ್ವಿಂಟಲ್‌ಗೆ 2,200 ರಿಂದ 2,500 ರೂ.ವರೆಗೆ ಮಾರಾಟವಾಗುತ್ತಿದೆ.

ಬೆಳೆಗಾರರ ಸಂಖ್ಯೆ ಕ್ಷೀಣ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಪ್ರತಿ ವರ್ಷ ಸಾವಿರ ಎಕರೆಯಷ್ಟು ಬಾಳೆ ಬೆಳೆಯುತ್ತಿದ್ದರು. ಕಳೆದೆರಡು ವರ್ಷಗಳಿಂದ ಸತತ ಹಾನಿಯಿಂದಾಗಿ ಅನ್ಯ ಬೆಳೆಗೆ ರೈತರು ಮೊರೆ ಹೋದ ಕಾರಣ ಸುಮಾರು 200 ಎಕರೆಯಷ್ಟು ಬಾಳೆ ಮಾತ್ರ ದೊರಕುವಂತಾಗಿದೆ.

ಶ್ರಾವಣ ಸೇರಿದಂತೆ ಸಾಕಷ್ಟು ಹಬ್ಬಗಳು ಸರದಿಯಲ್ಲಿದ್ದು, ಇನ್ನೂ ಬೆಲೆ ಹೆಚ್ಚಾಗುವ ನಿರೀಕ್ಷೆಯಿದ್ದು, ಬಾಳೆ ಬೆಳೆದ ರೈತನಿಗೆ ನಿಜವಾಗಿಯೂ ಬಂಗಾರವಾಗಿದ್ದರೆ, ಖರೀದಿ ಮಾಡುವ ಗ್ರಾಹಕನಿಗೆ ಮಾತ್ರ ಬಾಳೆ ಬಿಸಿ ತುಪ್ಪವಾಗಿದೆ.

ಸಸಿಗಳ ಕೊರತೆ: ಮೂರ‍್ನಾಲ್ಕು ವರ್ಷಗಳಿಂದ ನರ್ಸರಿಗಳಿಗೆ ಬಾಳೆ ಸಸಿಯಿಂದ ಹಾನಿ ಅನುಭವಿಸಿರುವ ಕಾರಣ ಈ ಬಾರಿ ಸಸಿಗಳನ್ನು ಕಡಿಮೆ ಪ್ರಮಾಣದಲ್ಲಿ ಉತ್ಪಾದನೆಗೆ ಕಾರಣವಾಗಿತ್ತು. ಇದೀಗ ಸಸಿ ಸಮಸ್ಯೆ ಎದುರಿಸುತ್ತಿರುವ ಹಿನ್ನಲೆ ರೈತರೂ ಸಸಿಗಳಿಗಾಗಿ ಅಲೆದಾಟ ತಪ್ಪಿಲ್ಲ.

ಜಿ-9 ತಳಿಯ ಬಾಳೆ ಈ ಬಾರಿ ಕೈ ಹಿಡಿದಿದೆ. ಹಿಂದೆಂದೂ ದೊರಕದಷ್ಟು ದಾಖಲೆಯ ಬೆಲೆ ಬಂದಿರುವದು ಸಂತಸ ತಂದಿದೆ. –ಗುರು ಉಳ್ಳಾಗಡ್ಡಿ, ಜಗದಾಳ ರೈತ.

ಬಾಳೆ ಹಣ್ಣಿನ ಬೆಲೆ ಒಂದೆರಡು ತಿಂಗಳಲ್ಲಿ ದುಪ್ಪಟ್ಟಾಗಿದೆ. ಬೇಡಿಕೆಗೆ ತಕ್ಕಂತೆ ಬಾಳೆಹಣ್ಣು ಸಿಗುತ್ತಿಲ್ಲ. ಹೀಗಾಗಿ ಗ್ರಾಹಕರಿಗೆ ಉತ್ತರಿಸುವದೂ ಕಷ್ಟವಾಗಿದೆ. –ಬಸವರಾಜ ಬೆಳಗಲಿ, ಬಾಳೆ ವ್ಯಾಪಾರಿ, ಬನಹಟ್ಟಿ.

-ಕಿರಣ್‌ ಎಸ್. ಅಳಗಿ 

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.