ಬೆಂಗಳೂರು ಉತ್ತರ: ಹೊರ ಊರಿನವರಿಗೇ ಮಣೆ ಹಾಕಿದ ಘಟಾನುಘಟಿಗಳ ಕೇತ್ರ

ಬರೋಬ್ಬರಿ 7 ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದವರು ಸಿ.ಕೆ. ಜಾಫ‌ರ್‌ ಷರೀಫ್

Team Udayavani, Mar 22, 2024, 10:21 AM IST

ಬೆಂಗಳೂರು ಉತ್ತರ: ಹೊರ ಊರಿನವರಿಗೇ ಮಣೆ ಹಾಕಿದ ಘಟಾನುಘಟಿಗಳ ಕೇತ್ರ

ಉದಯವಾಣಿ ಸಮಾಚಾರ
ಬೆಂಗಳೂರು: ಹಲವು ಬಾರಿ ಹೆಸರು ಬದಲಾವಣೆ ಹಾಗೂ ಪುನರ್ವಿಂಗಡಣೆಗೆ ಒಳಗಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಮೂವರು ಕೇಂದ್ರ ಮಂತ್ರಿಗಳನ್ನು ಕೊಟ್ಟಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಸಂಸದರಾಗುವ ಅವಕಾಶ ಮಾಡಿಕೊಟ್ಟ ಕ್ಷೇತ್ರ. ಘಟಾನುಘಟಿಗಳ ಸೋಲು ಹಾಗೂ ಗೆಲುವಿಗೆ ಕಾರಣವಾದ ಈ ಕ್ಷೇತ್ರದಲ್ಲಿ 2004 ರಿಂದ ಬಿಜೆಪಿ ಪಾರುಪತ್ಯ ಸಾಧಿಸಿದೆ.

1952ರ ಮೊದಲ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ನ ಕೇಶವ ಐಯ್ಯಂಗಾರ್‌ ಈ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರೆ, ವಿಧಾನಸೌಧ ನಿರ್ಮಾತೃ, ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರು ಇದೇ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದಲ್ಲದೆ, ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದರು. ಅದರಲ್ಲೂ ರೈಲ್ವೆ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಅದೇ ರೀತಿ ಬರೋಬ್ಬರಿ 7 ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದ ಸಿ.ಕೆ. ಜಾಫ‌ರ್‌ ಷರೀಫ್ ಕೂಡ ಕೇಂದ್ರದಲ್ಲಿ ರೈಲ್ವೆ ಸೇರಿ ವಿವಿಧ ಖಾತೆಗಳನ್ನು ನಿಭಾಯಿಸಿದ್ದರು. 1996 ರಲ್ಲಿ ಮಾತ್ರ ಜೆಡಿಎಸ್‌ನ ಸಿ.ನಾರಾಯಣಸ್ವಾಮಿ ಗೆದ್ದಿದ್ದು ಬಿಟ್ಟರೆ, ಸುಮಾರು 46 ವರ್ಷಗಳ ಕಾಲ ಕಾಂಗ್ರೆಸ್‌ ಭದ್ರವಾಗಿ ನೆಲೆಯೂರಿತ್ತು. 2004ರಲ್ಲಿ ಎಚ್‌.ಟಿ. ಸಾಂಗ್ಲಿಯಾನ ಗೆಲ್ಲುವ ಮೂಲಕ ಬಿಜೆಪಿಯ ಖಾತೆ ತೆರೆದರಲ್ಲದೆ, ಅಂದಿನಿಂದ ಈವರೆಗೆ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಡಿ.ಬಿ. ಚಂದ್ರೇಗೌಡರ ನಂತರ ಎರಡು ಬಾರಿ ಬಿಜೆಪಿಯಿಂದಲೇ ಗೆದ್ದ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಇತ್ತೀಚಿನವರೆಗೆ ಕೇಂದ್ರ ಮಂತ್ರಿಯಾಗಿಯೂ ಇದ್ದರು.

ವಲಸಿಗರ ಕೈ ಹಿಡಿದದ್ದೇ ಹೆಚ್ಚು: ಬಹುತೇಕ ವಲಸಿಗರನ್ನೇ ಗೆಲ್ಲಿಸಿರುವ ಇಲ್ಲಿನ ಮತದಾರರು ಸ್ಥಳೀಯರನ್ನು ಕೈ ಹಿಡಿದದ್ದು ಕಡಿಮೆ. ಮಾಜಿ ಸಿಎಂ ಕೆಂಗಲ್‌ ಹನುಮಂತಯ್ಯ ಅವರು ಮೂಲತಃ ರಾಮನಗರದವರಾದರೆ, ಜಾಫ‌ರ್‌ ಷರೀಫ್ ಚಳ್ಳಕೆರೆ ಮೂಲದವರು. ಚಿಕ್ಕಮಗಳೂರು ಮೂಲದ ಡಿ.ಬಿ. ಚಂದ್ರೇಗೌಡ, ದಕ್ಷಿಣ ಕನ್ನಡ ಜಿಲ್ಲೆಯ ಡಿ.ವಿ. ಸದಾನಂದಗೌಡ ಸೇರಿ ವಲಸಿಗರನ್ನೇ ಅಪ್ಪಿಕೊಂಡಿದ್ದು ಹೆಚ್ಚು. ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಗೆದ್ದಿದ್ದರೆ, ಮೂರರಲ್ಲಿ ಕಾಂಗ್ರೆಸ್‌ ಬಲವಿದೆ. ಆದರೆ, ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದು, ಬಿಜೆಪಿಯಿಂದ ಹೊರಬಂದಂತಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಯಶವಂತಪುರದಲ್ಲಿ ಉಪಚುನಾವಣೆ ಎದುರಿಸುವುದು ಕಷ್ಟವಿದೆ. ಅದರ ಬದಲು ಲೋಕಸಭೆಗೇ ಸ್ಪರ್ಧಿಸುವ ಅವಕಾಶವನ್ನು ಕಾಂಗ್ರೆಸ್‌ ನೀಡಲು ಚಿಂತನೆ ನಡೆಸಿದೆ. ಸೋಮಶೇಖರ್‌ ಕೂಡ ಇದಕ್ಕೆ ತಯಾರಾಗುತ್ತಿದ್ದಾರೆ. ಚುನಾವಣೆ ಕಾವೇರಿದ ನಂತರ ಕ್ಷೇತ್ರದ ರಾಜಕೀಯ ಪರಿಸ್ಥಿತಿಯಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆಗಳಿವೆ.

*ಸಾಮಗ ಶೇಷಾದ್ರಿ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.