ನನ್ನ ಹಣೆಬರಹದಲ್ಲಿ ಸಿಎಂ ಆಗೋದು ಬರೆದಿದ್ರೆ 2024 ರಲ್ಲಿ ಸಿಎಂ ಆಗೋದು ಖಚಿತ


Team Udayavani, Dec 31, 2019, 4:18 PM IST

yatnal

ವಿಜಯಪುರ : ಯಾರ ಹಣೆ ಬರಹದಲ್ಲಿ ಏನಿದೆ ಯಾರಿಗೆ ಗೊತ್ತು, ಲಕ್ಷ್ಮಣ ಸವದಿ ಹಣೆ ಬರಹದಲ್ಲಿ ಡಿಸಿಎಂ ಬರೆದಿದೆ ಆಗಿದ್ದಾರೆ. 2024 ರಲ್ಲಿ ನಾನು ಸಿಎಂ ಆಗೋದಿದ್ರೆ ಯಾರು ಕಸಿದುಕೊಳ್ತಾರಾ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೀಗೆ ಹೇಳುವ‌ ಮೂಲಕ ಹಳೆ ವರ್ಷ ಕೊನೆಯಲ್ಲಿ, ಹೊಸ ವರ್ಷದ‌ ಹೊಸ್ತಿಲಲ್ಲಿ ಮುಖ್ಯಮಂತ್ರಿ ಕನಸು ಬಿತ್ತಿದ್ದಾರೆ.

ಮಂಗಳವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಭವಿಷ್ಯದಲ್ಲಿ ತಾವು ಕೇವಲ ಮಂತ್ರಿ ಆಕಾಂಕ್ಷಿಯಲ್ಲ‌ ಸಿಎಂ ಅಭ್ಯರ್ಥಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಯತ್ನಾಳ, ನನ್ನ ಹಣೆಬರಹದಲ್ಲಿ ಸಿಎಂ ಆಗೋದು ಬರೆದಿದ್ರೆ ನಾನು 2024 ರಲ್ಲಿ ಸಿಎಂ ಆಗೋದು ಖಚಿತ ಎಂದರು.

ಸಚಿವ ಸ್ಥಾನಕ್ಕಾಗಿ ಉಮೇಶ ಕತ್ತಿ ಲಾಭಿ ಮಾಡಲು ಸಿಎಂ ಸುತ್ತ ಗಿರಕಿ ಹೊಡೆಯುವ ಅವಶ್ಯಕತೆ ಇಲ್ಲ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ, ಅವರು ಸಚಿವ ಸ್ಥಾನ ಖಚಿತ.

ಅಥಣಿ, ಕಾಗವಾಡ ಗೆಲ್ಲಿಸಿದ್ರೆ ಸಚಿವ ಸ್ಥಾನ ಸಿಗುತ್ತೆ ಅಂತ ನಾಯಕರು, ನಾವೆಲ್ಲ ಹೇಳಿದ್ದೆವು. ಹಾಗಾಗಿ ಕತ್ತಿ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

ಇನ್ನು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮರಾಠರ ಪರವಾದ ಹೆಳಿಕೆ ರಾಜಕೀಯ ಅನಿವಾರ್ಯತೆ ಯಿಂದ ಕೂಡಿದೆ. ಇತರೆ ಕಡೆಗಿಂತ ಬೆಳಗಾವಿ ರಾಜಕಾರಣ ಬೇರೆ ಇದೆ.

ಚುನಾವಣೆಯಲ್ಲಿ ಮರಾಠ ಮತ ಸೆಳೆಯಲು ಅವರ ಪರವಾದ ಮಾತನಾಡುತ್ತಾರೆ. ಮರಾಠರ ಪರ ಮಾತಾಡದಿದ್ದರೆ ಎಲೆಕ್ಷನ್ ಸೋಲುತ್ತಾರೆ. ಹೀಗಾಗಿ ಮನಸ್ಸಿನಿಂದ ಅಲ್ಲದಿದ್ದರೂ ಮತಕ್ಕಾಗಿ ಮಾತನಾಡುತ್ತಾರೆ ಎಂದರು.

ಮಹಾರಾಷ್ಟ್ರ ರಾಜ್ಯ ಗಡಿ ಕ್ಯಾತೆ ವಿಚಾರವನ್ನು ವಿವಾದ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಆದ್ಯತೆ ನೀಡಬೇಕು.

ಮರಾಠರು ಬೆಳಗಾವಿ ತಮ್ಮದು ಎಂದ‌ ಮಾತ್ರಕ್ಕೆ ಕನ್ನಡಿಗರಾದ ನಾವು ಬಿಡೋಕಾಗುತ್ತ. ಕನ್ನಡಿಗರೇನು ಕೈಯಲ್ಲಿ ಬಳೆ ತೊಟ್ಟುಕೊಂಡಿಲ್ಲ, ತಾಕತ್ತಿದ್ದರೆ ಬೆಳಗಾವಿಯನ್ನು ಪಡೆಯಲಿ ನೋಡೋಣ ಎಂದು ತಿರುಗೇಟು ನೀಡಿದರು.

ಇನ್ನು ಐದು ವರ್ಷ‌ ಮಾತ್ರವಲ್ಲ ಯಾರೇ ಹುಟ್ಟಿದರೂ ಬೆಳಗಾವಿಯನ್ನು ಕರ್ನಾಟಕ ದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ‌ ಎಂದರು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.