ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್
Team Udayavani, Jan 24, 2021, 6:02 PM IST
ಗಂಗಾವತಿ: ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ ರವಿವಾರ ತಾಲೂಕಿನ ಇತಿಹಾಸ ಪ್ರಸಿದ್ದ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಆಂಜನೇಯಸ್ವಾಮಿ ದರ್ಶನ ಪಡೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಸಮಾಜಕ್ಕೆ 2ಎ ಕೆಟಗರಿಯ ಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆ ಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು ಸಂದರ್ಭದಲ್ಲಿ ಹನುಮಂತನ ಜನ್ಮ ಸ್ಥಳ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕಾಗಿ ಆಗಮಿಸಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಿಲ್ಲ. ಯುವಕರು ಹನುಮಂತನಂತೆ ಸದೃಢ ಆರೋಗ್ಯ ಪಡೆಯಬೇಕು. ದುಶ್ಚಟಗಳನ್ನು ತ್ಯಜಿಸಬೇಕು. ಅಂಜನಾದ್ರಿ ವಿಶ್ವದ ಹಿಂದೂಗಳ ಶಕ್ತಿಕೇಂದ್ರ ಪ್ರತಿಯೊಬ್ಬರು ಇಲ್ಲಿಗೆ ಭೇಟಿ ಕೊಡುವಂತೆ ಮನವಿ ಮಾಡಿದರು.
ಪಂಚಮಸಾಲಿ ಸಮಾಜದ ಮುಖಂಡ ಕಳಕನಗೌಡ ಪಾಟೀಲ್ ಸೇರಿ ಸ್ಥಳೀಯ ಬಿಜೆಪಿ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು