ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ


Team Udayavani, Sep 23, 2020, 3:53 PM IST

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಬೀದರ: ಕೋವಿಡ್ ಸೋಂಕಿಗೆ ಒಳಗಾಗಿರುವ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ (65) ಅವರ ಆರೋಗ್ಯ ಸ್ಥಿತಿ ತೀವ್ರ  ಚಿಂತಾಜನಕವಾಗಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಶಾಸಕರು, ಕಳೆದ ರಾತ್ರಿಯಿಂದ ದಿಢೀರ್ ಆರೋಗ್ಯ ಹದಗೆಟ್ಟಿದ್ದು ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದ ಕಾರಣ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಖಚಿತಪಡಿಸಿದ್ದಾರೆ.

ಶಾಸಕ ನಾರಾಯಣರಾವ್ ಅವರಿಗೆ ಆ.31ರಂದು ಕೋವಿಡ್ ಸೋಂಕು ಪತ್ತೆಯಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸೆ.1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಪಿ ಮತ್ತು ಶುಗರ್ ಹೊಂದಿರುವ ಶಾಸಕರಿಗೆ ಆರಂಭದಲ್ಲೇ ಶ್ವಾಸಕೋಶಕ್ಕೆ ಸೋಂಕು, ನ್ಯೂಮೋನಿಯಾ ಹಿನ್ನಲೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹಾಗಾಗಿ ಅವರಿಗೆ ಆಸ್ಪತ್ರೆಗೆ ದಾಖಲಾದ ಮರು ದಿನವೇ ವೆಂಟಿಲೇಟೆರ್ ವ್ಯವಸ್ಥೆ ಮಾಡಲಾಗಿತ್ತು.

ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್ ಸಹ ತೆಗೆಯಲಾಗಿತ್ತು. ಶೀಘ್ರ ಗುಣಮುಖರಾಗಿ ಬೇಗ ಹೊರಬರಲಿದ್ದಾರೆ ಎಂದೆನ್ನಲಾಗಿತ್ತು. ಆದರೆ, ಈಗ ಮತ್ತೆ ನಾರಾಯಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಬಿಗಡಾಯಿಸಿದೆ. ಮತ್ತೆ ಅವರನ್ನು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಶಾಸಕ ಖಂಡ್ರೆ ಅವರು ವಿಡಿಯೋ ಕಾಲ್ ಮೂಲಕ ಆಸ್ಪತ್ರೆ ಐಸಿಯುನಲ್ಲಿರುವ ಶಾಸಕ ನಾರಾಯಣರಾವ್ ಅವರ ಸ್ಥಿತಿಯನ್ನು ವೀಕ್ಷಿಸಿದ್ದು, ಆಸ್ಪತ್ರೆ ಮುಖ್ಯಸ್ಥ ಡಾ. ಮಹೇಶ ಅವರೊಂದಿಗೆ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.