ಬಿಹಾರಕ್ಕೆ ಮಿಡಿಯುವ ಪ್ರಧಾನಿ ರಾಜ್ಯದ ವಿಚಾರದಲ್ಲಿ ಸುಮ್ಮನಿರುವುದೇಕೆ?

ಕೇಂದ್ರ ನಾಯಕರ ವಿರುದ್ಧ ಬಸವನ ಗೌಡ ಪಾಟೀಲ್ ಯತ್ನಾಳ್ ಗರಂ

Team Udayavani, Oct 1, 2019, 2:17 PM IST

yatnal

ಬೆಂಗಳೂರು: ನೆರೆ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡುತ್ತಿರುವ ಕೇಂದ್ರದ ವಿರುದ್ಧ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ವಿಜಯಪುರ ನಗರ ಕ್ಷೇತ್ರದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ಪಕ್ಷದ ಕೇಂದ್ರ ನಾಯಕರ ವಿರುದ್ಧ ನೇರ ವಾಗ್ದಾಳಿ ನಡೆಸಿದ ಯತ್ನಾಳ್, ಕೇಂದ್ರ ಬಿಜೆಪಿ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ನೇರ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಗಂಭೀರವಾದ ಆರೋಪವನ್ನು ಮಾಡಿದರು.

ಉತ್ತರ ಕರ್ನಾಟಕ ಸಹಿತ ಬಹುಪಾಲು ಕರ್ನಾಟಕ ನೆರೆ ಹಾವಳಿಗೆ ತತ್ತರಿಸಿದ್ದರೂ ಕೇಂದ್ರದಿಂದ ಸಮರ್ಪಕ ಅನುದಾನ ಲಭಿಸಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಚುನಾವಣೆ ಇಲ್ಲ ಎಂಬ ಭಾವನೆಯಲ್ಲಿ ಕೇಂದ್ರ ಸರಕಾರ ಇರುವಂತಿದೆ ಆದರೆ ಈ ಭಾವನೆ ಸರಿಯಲ್ಲ ಮತ್ತು ನೆರೆ ಪೀಡಿತರ ವಿಚಾರದಲ್ಲಿ ಈ ರೀತಿಯ ರಾಜಕಾರಣ ಮಾಡುವುದನ್ನು ಜನ ಸಹಿಸಿಕೊಳ್ಳುವುದಿಲ್ಲ ಎಂದು ಯತ್ನಾಳ್ ಅವರು ಕೇಂದ್ರ ನಾಯಕರಿಗೆ ಎಚ್ಚರಿಕೆ ರೂಪದ ಸಂದೇಶ ನೀಡಿದರು.

ಕಳೆದ ಬಾರಿಯ ಸಂಸತ್ ಚುನಾವಭೆಯಲ್ಲಿ ರಾಜ್ಯದ ಜನ ಬಿಜೆಪಿಗೆ 25 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ದಕ್ಷಿಣ ಭಾರತದ ಯಾವುದೇ ರಾಜ್ಯದಲ್ಲಿ ಇಷ್ಟು ಸಂಖ್ಯೆಯ ಬಿಜೆಪಿ ಶಾಸಕರು ಆಯ್ಕೆಯಾದ ದಾಖಲೆ ಇಲ್ಲ ಹಾಗಿರುವಾಗ ರಾಜ್ಯದ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ಈ ನಿರ್ಲಕ್ಷ್ಯ ಧೋರಣೆ ತಪ್ಪು ಎಂದು ಯತ್ನಾಳ್ ಅವರು ಅಭಿಪ್ರಾಯಪಟ್ಟರು.

ಕೇಂದ್ರ ಸರಕಾರದ ನಿರ್ಲಕ್ಷ್ಯಧೋರಣೆ ಇದೇ ರೀತಿಯಲ್ಲಿ ಮುಂದುವರೆದರೆ ರಾಜ್ಯದ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಯತ್ನಾಳ್ ಅವರು ಎಚ್ಚರಿಕೆ ನೀಡಿದರು. ಎಂತೆಂಥವರನ್ನೋ ಜನ ಮನೆಗೆ ಕಳುಹಿಸಿದ್ದಾರೆ ಹಾಗಿರುವಾಗ ಇವರೆಲ್ಲಾ ಯಾವ ಲೆಕ್ಕ? ನಾವು ಇವರನ್ನು ಕೆಳಗಿಳಿಸೋದಲ್ಲ ಬದಲಾಗಿ ಜನರೇ ಕೆಳಗಿಳಿಸುತ್ತಾರೆ ಎಂದು ಯತ್ನಾಳ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಹಳ್ಳಿ ಹಳ್ಳಿಗಳಿಗೆ ಹೋಗಿ ಪಕ್ಷವನ್ನು ಸಂಘಟನೆ ಮಾಡಿದ್ದು ನಾವು ಹಾಗಾಗಿ ಜನರಿಗೆ ನಾವು ಉತ್ತರ ಕೊಡಬೇಕು. ಇವತ್ತು ಉತ್ತರ ಕರ್ನಾಟಕದ ಜನ ಪರದಾಡ್ತ ಇದ್ದಾರೆ. ಬಿಹಾರದ ನೆರೆ ಸಂತ್ರಸ್ತರ ಬಗ್ಗೆ ಟ್ವೀಟ್ ಮಾಡ್ತಾರೆ, ಆದ್ರೆ ನಮ್ಮ ಜನ ಇವರಿಗೆ ಏನು ಮಾಡಿದ್ದಾರೆ? ಜನರಿಗೆ ನಾವೇನು ಉತ್ತರ ಕೊಡಬೇಕು? ಸಾಮಾಜಿಕ ಜಾಲತಾಣಗಳಲ್ಲಿ ಜನ ನಮ್ಮ ವಿರುದ್ಧ ಪ್ರಶ್ನೆ ಮಾಡ್ತಿದ್ದಾರೆ? ಎಂದು ಯತ್ನಾಳ್ ಅವರು ಕೇಂದ್ರ ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಗೈದರು.

ನಮ್ಮ ಒಂದು ನಿಯೋಗವನ್ನು ಪ್ರಧಾನಿಯವರ ಬಳಿಗೆ ಕೊಂಡುಹೋಗಿ, ನಾವು ಮಾತನಾಡುತ್ತೇವೆ. ನನಗೂ ಸಂಸದನಾಗಿ ಕೆಲಸ ಮಾಡಿದ ಅನುಭವ ಇದೆ ಎಂದೂ ಬಸವರಾಜ ಪಾಟೀಲ್ ಯತ್ನಾಳ್ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.