ಧಾರವಾಡ ವಿ.ವಿ.ಗೆ ಬಸವಣ್ಣನ ಹೆಸರು : ಶಾಲಾ-ಕಾಲೇಜು ಪಠ್ಯದಲ್ಲಿ ಶರಣ ಜೀವನ ಪರಿಚಯ


Team Udayavani, Feb 17, 2020, 7:30 AM IST

sharana

ಬೆಂಗಳೂರು: ವಚನ ಸಾಹಿತ್ಯ ಮತ್ತು ಶರಣರ ಜೀವನ ಕುರಿತು ಪಠ್ಯ ಸೇರ್ಪಡೆ, ಧಾರವಾಡ ವಿಶ್ವವಿದ್ಯಾಲಯಕ್ಕೆ ವಿಶ್ವಗುರು ಬಸವಣ್ಣನ ಹೆಸರಿಡಬೇಕು ಎಂದು ಅಸಂಖ್ಯ ಪ್ರಮಥರ ಗಣಮೇಳ ತೀರ್ಮಾನಿಸಿದೆ.
ಇಲ್ಲಿನ ನೈಸ್‌ ರಸ್ತೆ ಬಳಿಯ ನಂದಿ ಮೈದಾನದಲ್ಲಿ ರವಿವಾರ ನಡೆದ ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಏಳು ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೆ ಅವುಗಳ ಅನುಷ್ಠಾನಕ್ಕಾಗಿ ಸರಕಾರವನ್ನು ಒತ್ತಾಯಿಸುವುದಕ್ಕೂ ತೀರ್ಮಾನಿಸಲಾಯಿತು.

ಪ್ರಮುಖವಾಗಿ ವಚನ ಚಳವಳಿಯನ್ನು ಮುಂಬರುವ ಪೀಳಿಗೆಗಳಿಗೆ ಪರಿಚಯಿಸುವ ದೃಷ್ಟಿಯಿಂದ ಶಾಲಾ- ಕಾಲೇಜು ಹಂತಗಳಲ್ಲಿ ಶರಣ ಸಾಹಿತ್ಯ ಕುರಿತ ಪಠ್ಯವನ್ನು ಸೇರಿಸಬೇಕು. ಜತೆಗೆ ಧಾರವಾಡ ವಿ.ವಿ.ಗೆ ವಿಶ್ವಗುರು ಬಸವಣ್ಣನ ಮತ್ತು ಕಲಬುರಗಿ ವಿ.ವಿ.ಗೆ ಡಾ| ಬಿ.ಆರ್‌. ಅಂಬೇಡ್ಕರ್‌ ಹೆಸರಿಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

ಇದಲ್ಲದೆ ಸಮಾಜಕ್ಕೆ ಸೇವೆ ಸಲ್ಲಿಸಿದ ಸ್ವಾಮೀಜಿಗಳ ಸ್ಮಾರಕಗಳ ಸಂರಕ್ಷಣೆಗೆ ಸರಕಾರ ಮುಂದಾಗಬೇಕು. ಕೇಂದ್ರ- ರಾಜ್ಯ ಸರಕಾರಿ ಹು¨ªೆಗಳ ಭರ್ತಿಯಲ್ಲಿ ಕನ್ನಡಿಗ ರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಬೇಕು. ಬಸವ ಕಲ್ಯಾಣದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು. ಮುರುಘಾ ಮಠದಲ್ಲಿ ನಿರ್ಮಾಣವಾಗುತ್ತಿರುವ 325 ಅಡಿ ಎತ್ತರದ ಬಸವಣ್ಣನವರ ಮೂರ್ತಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

ಮೇಳದ ಸ್ವಾಗತ ಸಮಿತಿ ಉಪಾಧ್ಯಕ್ಷ ಅರುಣ್‌ ಕುಮಾರ್‌ ಸೋಮಣ್ಣ ಗಣಮೇಳದ ನಿರ್ಣಯ ಮಂಡಿಸಿದರು. ಇದಕ್ಕೆ ನೆರೆದ ಭಕ್ತಸಮೂಹ ಒಕ್ಕೊರಲಿನಿಂದ ಸಮ್ಮತಿಸಿತು.

ರೈತನ ನೆಮ್ಮದಿ ಬಜೆಟ್‌ ಗುರಿ
ಈ ಬಾರಿಯ ರಾಜ್ಯ ಬಜೆಟ್‌ ರೈತನ ನೆಮ್ಮದಿಯನ್ನು ಗುರಿ ಯಾಗಿಸಿಕೊಂಡಿದ್ದು, ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು. ರೈತರು ಸ್ವಾಭಿಮಾನ ಮತ್ತು ನೆಮ್ಮದಿಯಿಂದ ಬದುಕು ನಡೆಸಬೇಕಾಗಿದೆ. ಇದಕ್ಕಾಗಿ ಈ ಬಾರಿ ಮಾ.5ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಡಲಾಗುವುದು. ಪ್ರಮುಖವಾಗಿ ನೀರಾವರಿಗೆ ಆದ್ಯತೆ ನೀಡುವ ಜತೆಗೆ ಬೆಳೆಗಳಿಗೆ ಹೆಚ್ಚು ಬೆಂಬಲ ಬೆಲೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 500 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಈ ಪೈಕಿ 100 ಕೋಟಿ ರೂಪಾಯಿಗಳನ್ನು ಇದೇ ವರ್ಷದಲ್ಲಿ ವಿನಿಯೋಗಿಸಲಾಗುವುದು. ಈ ಮೂಲಕ ದೇಶವೇ ಕಲ್ಯಾಣ ಕರ್ನಾಟಕದತ್ತ ತಿರುಗಿ ನೋಡುವಂತೆ ಅಭಿವೃದ್ಧಿ ಮಾಡಲಾಗುವುದು. ರಾಜ್ಯದಲ್ಲಿ ಮಠಮಂದಿರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು. ಈಗಾಗಲೇ ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವ ಮೂರ್ತಿಗೆ ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು.

ಮುರುಘಾಶ್ರೀಗೆ ಕರ್ನಾಟಕ ರತ್ನ
ಗಣಮೇಳದ ನಿರ್ಣಯಗಳಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘ ರಾಜೇಂದ್ರ ಸ್ವಾಮೀಜಿಗೆ “ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎನ್ನುವುದೂ ಸೇರಿದೆ. ಇದಕ್ಕೆ ಭಕ್ತರು ಕರತಾಡನದ ಮೂಲಕ ಒಪ್ಪಿಗೆ ಸೂಚಿಸಿದರು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತಿಗಿಳಿದಾಗಲೂ ಮುರುಘಾಶ್ರೀಗಳಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂಬ ಕೂಗು ಭಕ್ತರಿಂದ ತೂರಿಬಂತು.

ಸಮರಸದ ಬದುಕಿಗೆ ಮತ್ತಷ್ಟು ಶಕ್ತಿ
ಮುರುಘಾ ಶರಣರು ನಡೆಸಿದ ಈ ಜಾತ್ಯತೀತ ಗಣಮೇಳದ ಫಲಿತಾಂಶವು ನಾಡಿನಲ್ಲಿ ಸಾಮರಸ್ಯ ಬದುಕಿಗೆ ಮತ್ತಷ್ಟು ಶಕ್ತಿ ನೀಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಮಥರಗಣ ಮೇಳದಲ್ಲಿ ಮಾತನಾಡಿದ ಅವರು, 12ನೇ ಶತಮಾನದ ಅನುಭವ ಮಂಟಪದಲ್ಲಿ ಶರಣರು ಜಾತಿ, ಮತ, ಧರ್ಮದ ಚೌಕಟ್ಟಿಲ್ಲದೆ ವೈಚಾರಿಕತೆಯಲ್ಲಿ ನಡೆದು ಬಂದಿದ್ದರು. ಆ ದಿನಗಳಲ್ಲಿಯೇ ಬಸವಣ್ಣ ನವರು 1.96 ಲಕ್ಷ ಜನರನ್ನು ಒಗ್ಗೂಡಿಸಿ ಜಾತ್ಯತೀತ ವೈಚಾರಿಕ ಗಣಮೇಳ ನಡೆಸಿದ್ದರು ಎಂದು ದಾಖಲಾಗಿದೆ. ಈಗ ಮತ್ತೂಮ್ಮೆ ಮುರುಘಾ ಮಠದ ಶ್ರೀಗಳು ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಗಣಮೇಳ ನಡೆಸುವ ಮೂಲಕ ಅನುಭವ ಮಂಟಪದ ದಿನಗಳನ್ನು ಮರುಕಳಿಸಿದ್ದಾರೆ. ಈ ಮೇಳವು ನಾಡಿನಲ್ಲಿ ವೈಚಾರಿಕತೆ ಮೂಡಿಸಿ ಸಾಮರಸ್ಯ ಬದುಕಿಗೆ ಶಕ್ತಿ ನೀಡಲಿದೆ ಎಂದರು.

ಟಾಪ್ ನ್ಯೂಸ್

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.