ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರ ಯಾವುದೇ ಉಲ್ಲಂಘನೆ ಮಾಡಿಲ್ಲ : ಗೃಹ ಸಚಿವ ಬೊಮ್ಮಾಯಿ
Team Udayavani, Jun 18, 2021, 6:24 PM IST
ಬೆಂಗಳೂರು: ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ. ಯಾವುದೇ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದೆ ಎಂದರು.
ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆ ನಡೆಸಿತ್ತು. ನ್ಯಾಯಾಲಯದ ಈ ಕ್ರಮವನ್ನು ನಮ್ಮ ಸರ್ಕಾರ ಪ್ರಶ್ನಿಸಿತ್ತು. ಈ ಪ್ರಕರಣದ ಕುರಿತು ವಿಚಾರಣೆ ನೆನ್ನೆ ನಡೆದಿದೆ. ನಮ್ಮ ಸರ್ಕಾರದ ಪರವಾಗಿ ವಕೀಲರು ಈ ಪ್ರಕರಣದಲ್ಲಿ ಅತ್ಯುತ್ತಮ ರೀತಿಯಲ್ಲಿ ವಾದ ಮಂಡಿಸಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ :ಕೋವಿಡ್ ಸೋಂಕಿನ 2ನೇ ಅಲೆಯಿಂದಾಗಿ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ : ಆರ್ ಬಿ ಐ
ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಉಲ್ಲಂಘನೆಗಳನ್ನು ಮಾಡಿಲ್ಲ. ನಮಗೆ ತೊಂದರೆ ಆಗುವುದಿಲ್ಲ ಎಂಬ ವಿಶ್ವಾಸವಿದೆ.
– ಬಸವರಾಜ್ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ