ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ; ರಾಗ ಬದಲಿಸಿದ ನಾಯಕರು?


Team Udayavani, Jul 25, 2021, 9:54 PM IST

ಸಿಎಂ ಪರ ಹೇಳಿಕೆ; ರಾಗ ಬದಲಿಸಿದ ನಾಯಕರು?

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬೇರೆ ಬೇರೆ ಸಚಿವರ ರಾಗ ಬದಲಾಗಿದೆ. ಸಿಎಂ ಯಡಿಯೂರಪ್ಪ “ರಾಜೀನಾಮೆ’ ಕುರಿತು ನೀಡಿದ ಹೇಳಿಕೆ ಬಳಿಕ “ಎಲ್ಲವೂ ಹೈಕಮಾಂಡ್‌ ನಿರ್ಧಾರಕ್ಕೆ ಬಿಟ್ಟಿದೆ’ ಎನ್ನುತ್ತಿದ್ದವರು ಈಗ “ಯಡಿಯೂರಪ್ಪ ಅವರು ಕೊನೇ ಕ್ಷಣವರೆಗೂ ಕರ್ತವ್ಯ ನಿರ್ವಹಿಸುತ್ತಾರೆ’ ಎಂದು ಹೇಳುತ್ತಿದ್ದಾರೆ.
ಜತೆಗೆ, ರಾಜೀನಾಮೆ ವಿಷಯ ಮಾಧ್ಯಮಗಳ ಸೃಷ್ಟಿ ಎನ್ನುವ ಮೂಲಕ ರಾಜೀನಾಮೆ ವಿಷಯವನ್ನು ತೆರೆಗೆ ಸರಿಸುವ ಪ್ರಯತ್ನ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಾಗಿದ್ದು, ಇಂತಹ ಪಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈಗಾಗಲೇ ಹೈಕಮಾಂಡ್‌ ಏನು ಹೇಳುತ್ತದೆ ಅದನ್ನು ಪಾಲನೆ ಮಾಡುವುದಾಗಿ ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಏನು ಹೇಳಿಕೆ ನೀಡಿದ್ದಾರೋ ಅದು ಬಹಳ ಮಹತ್ವದ್ದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸಕ್ಕೆ ಸೌಹಾರ್ದತಯುತವಾಗಿ ಭೇಟಿ ನೀಡಿದ್ದೇನೆ. ಸಿಎಂ ಹುದ್ದೆಗೆ ನನ್ನ ಹೆಸರು ಕೇಳಿ ಬರುತ್ತಾ ಇರುವುದು ಕೇವಲ ಊಹಾಪೋಹ ಎಂದೂ ಬೊಮ್ಮಾಯಿ ಹೇಳಿದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, 75 ವರ್ಷ ಮೇಲ್ಪಟ್ಟವರು ರಾಜಕೀಯವಾಗಿ ನಿವೃತ್ತಿ ಹೊಂದಬೇಕು ಎಂಬುದಾಗಿ ಮತ್ತು ಯಾವುದೇ ಹುದ್ದೆಯಲ್ಲಿ ಇರಬಾರದು ಎಂದು ಬಿಜೆಪಿ ಸಂವಿಧಾನದಲ್ಲಿಲ್ಲ. ಯಡಿಯೂರಪ್ಪ ಅವರು ಸಹ ಮುಖ್ಯಮಂತ್ರಿ ಆಗಿದ್ದು 75 ವರ್ಷ ಆದ ಮೇಲೆಯೇ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಯಡಿಯೂರಪ್ಪ ಪರ ಬ್ಯಾಟಿಂಗ್‌ ನಡೆಸಿದರು.

ಇದನ್ನೂ ಓದಿ :ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಚಿನ್ನದ ಆಮದು ಏರಿಕೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ. ಯಡಿಯೂರಪ್ಪರಿಗೂ ಈ ಬಗ್ಗೆ ಸೂಚನೆ ಬಂದಂತಿಲ್ಲ. ಅವರು ಸಹ ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುವುದಾಗಿ ಹೇಳಿದ್ದಾರೆ. ಸಿಎ ಹುದ್ದೆ ಖಾಲಿಯಿಲ್ಲದಿರುವಾಗ ಅದರ ಬಗ್ಗೆ ಚರ್ಚಿಸುವ ಅವಶ್ಯಕತೆಯಿಲ್ಲ. ಯಡಿಯೂರಪ್ಪ ಅವರೇ ಹೈಕಮಾಂಡ್‌ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಇದುವರೆಗೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ನಿರ್ದಿಷ್ಟ ಸೂಚನೆ ಕೊಟ್ಟಿಲ್ಲ ಎಂದು ಹೇಳಿದರು.

ಸಿಎಂ ಜತೆಗೆ ಬೆಳಗಾವಿಗೆ ಹೋಗುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್‌, ಹೈಕಮಾಂಡ್‌ ನಿಂದ ಸಂದೇಶ ಬರುವ ಬಗ್ಗೆ ಗೊತ್ತಿಲ್ಲ, ಆ ಥರದ ಸಂದೇಶದ ಬಗ್ಗೆ ಗೊತ್ತಿಲ್ಲ ಎಂದರು. ಕೇಂದ್ರದ ನಿರ್ಧಾರದ ಬಗ್ಗೆ ನನ್ನ ಗಮನವಿಲ್ಲ, ನಮ್ಮ ಗಮನ ಪರಿಹಾರ ಕ್ರಮಗಳತ್ತ ಮಾತ್ರ. ಜನರ ಪರ ನಿಲ್ಲೋದು ಯಡಿಯೂರಪ್ಪನವರಿಗೆ ರಕ್ತಗತವಾಗಿ ಬಂದಿದೆ. ಏನೇ ಬಂದರೂ ಯಡಿಯೂರಪ್ಪ ನಿತ್ಯದ ಜನಪರ ಕೆಲಸ ಮಾಡೋದನ್ನು ನಿಲ್ಲಿಸುವುದಿಲ್ಲ ಎಂದು ಕೊಂಡಾಡಿದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.