ರಸ್ತೆಯಲ್ಲಿ ಸಿಕ್ಕಿದ 10ಸಾವಿರ ರೂ. ಮರಳಿಸಿದ ವಿದ್ಯಾರ್ಥಿನಿಯರು :ಶಿಕ್ಷಣ ಸಚಿವರಿಂದ ಪ್ರಶಂಸೆ
Team Udayavani, Jan 7, 2022, 8:15 AM IST
ಬಸ್ರೂರು : ಕೋಣಿ ಪ್ರೌಢಶಾಲೆಯ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ರೂ. ಹಣವನ್ನು ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರು ಹಣ ಕಳೆದುಕೊಂಡ ಸುಲೇಖಾ ಅವರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಮುಖ್ಯೋಪಾಧ್ಯಾಯ ವಿದ್ವಾನ್ ಮಾಧವ ಅಡಿಗ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಹಣ ಕಳೆದುಕೊಂಡ ಸುಲೇಖಾ ಅವರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿತಿಂಡಿ ಕೊಟ್ಟು ಕೃತಜ್ಞತೆ ಅರ್ಪಿಸಿದ್ದಾರೆ.
ಶಿಕ್ಷಣ ಸಚಿವರ ಪ್ರಶಂಸೆ
ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲಕರಿಗೆ ಹಿಂದಿರುಗಿಸಿದ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರ ಪ್ರಾಮಾಣಿಕತೆ ಪ್ರಶಂಸನೀಯ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟರ್ನಲ್ಲಿ ಅಭಿನಂದಿಸಿದ್ದಾರೆ.
ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲೀಕರಿಗೆ ಹಿಂತಿರುಗಿಸಿದ ಕುಂದಾಪುರ ತಾಲ್ಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ರವರ ಪ್ರಾಮಾಣಿಕತೆ ಪ್ರಶಂಸನೀಯ. https://t.co/D98NKA7grp
— B.C Nagesh (@BCNagesh_bjp) January 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ