ರೈತರನ್ನು ಹೇಡಿ ಅಂದಿಲ್ಲ, ಆತ್ಮಹತ್ಯೆಯಂತ ಕೆಲಸ ಹೇಡಿತನದ್ದು ಎಂದಿದ್ದೆ: B.C.ಪಾಟೀಲ್
Team Udayavani, Dec 3, 2020, 6:09 PM IST
ಬೆಂಗಳೂರು : ನಾನು ರೈತರನ್ನು ಹೇಡಿ ಎಂದು ಎಂದಿಗೂ ಸಂಬೋಧಿಸಿಲ್ಲ.ಆತ್ಮಹತ್ಯೆಯಂತಹ ಕೆಲಸ ಹೇಡಿತನದ್ದು ಎಂದಿದ್ದೇನೆ. ಯಾರೇ ಆಗಲೀ ಆತ್ಮಹತ್ಯೆಯಂತಹ ಹೇಡಿತನದ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಹೇಳಿಕೆಗೆ ಸಮರ್ಥನೆಯನ್ನು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು ರೈತರು ಕಷ್ಟನಷ್ಟಗಳನ್ನು ಈಜಿ ಜಯಿಸಬೇಕು.ಕಷ್ಟಗಳು ಇಂದಿದ್ದಂತೆ ನಾಳೆ ಇರುವುದಿಲ್ಲ.ಕತ್ತಲಾದ ಮೇಲೆ ಬೆಳಕು ಬಂದೇ ಬರುತ್ತದೆ.
ಕೋಲಾರ ಜಿಲ್ಲೆಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಸಮಗ್ರ ಕೃಷಿ ನೀತಿಯನ್ನು ಅಳವಡಿಸಿಕೊಂಡು ಮಾದರಿಯಾಗಿದ್ದಾರೆ. ಕೋಲಾರ ರೈತರು ಮಾದರಿ ಎಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆಯ ಮನಸ್ಥಿತಿ, ಎರಡೂ ಒಂದೇ: ಬಿಜೆಪಿ
ರೈತರ ಆತ್ಮಹತ್ಯೆ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.ಸಮಗ್ರ ಕೃಷಿ ನೀತಿಯನ್ನು ರೈತರು ಹೆಚ್ಚೆಚ್ಚು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444