ಆಟಗಾರರ ಬಾಕಿ ಪಾವತಿಸಿದ ಬಿಸಿಸಿಐ

ಬ್ರಿಟನ್‌ ಸರಕಾರವು ಶೇ. 20ರಷ್ಟು ವೇತನ ಕಡಿತಕ್ಕೆ ಸಿದ್ಧ ; ದೇಶೀಯ ಕ್ರಿಕೆಟ್‌ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲು ಅವಕಾಶವಿಲ್ಲ

Team Udayavani, Apr 11, 2020, 5:45 AM IST

ಆಟಗಾರರ ಬಾಕಿ ಪಾವತಿಸಿದ ಬಿಸಿಸಿಐ

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಜತೆ ವಾರ್ಷಿಕ ಒಪ್ಪಂದ ಮಾಡಿ ಕೊಂಡಿರುವ ಆಟಗಾರರ ತ್ತೈಮಾಸಿಕ ಪಾವತಿಯನ್ನು ಮಾಡಿದೆ. ಕೋವಿಡ್‌ 19 ಸೃಷ್ಟಿಸಿದ ಅನಿಶ್ಚಿತತೆಯ ನಡುವೆ ಆಟಗಾರರು ಆರ್ಥಿಕ ಸಂಕಷ್ಟ ಅನುಭವಿಸ ಬಾರದು ಎನ್ನುವುದು ತನ್ನ ಉದ್ದೇಶ ಎಂದು ತಿಳಿಸಿದೆ.

ಜಗತ್ತಿನಾದ್ಯಂತ 90 ಸಾವಿರಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕೋವಿಡ್ 19 ಮಹಾಮಾರಿ, ವಿಶ್ವದ ಆರ್ಥಿಕತೆಗೂ ಬಹುದೊಡ್ಡ ಹೊಡೆತ ನೀಡಿದೆ.

ಮಾರ್ಚ್‌ 24ರಿಂದ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದೆ. ಬಿಸಿಸಿಐ ಎಲ್ಲ ಬಗೆಯ ಸನ್ನಿವೇಶಗಳಿಗೂ ಸನ್ನದ್ಧವಾಗಿದೆ. ಇದರ ಭಾಗವಾಗಿ ವಾರ್ಷಿಕ ಗುತ್ತಿಗೆ ಒಪ್ಪಂದಕ್ಕೆ ಸಹಿ ಮಾಡಿರುವ ಆಟಗಾರರಿಗೆ ತ್ತೈಮಾಸಿಕ ಮೊತ್ತವನ್ನು ಪಾವತಿಸಿದೆ. ಭಾರತ ಹಾಗೂ “ಎ’ ತಂಡಗಳ ಪರವಾಗಿ ಆಡಿದ ಎಲ್ಲ ಆಟಗಾರರಿಗೂ ಪಂದ್ಯ ಶುಲ್ಕ ಹಾಗೂ ಇತರ ಭತ್ಯೆಗಳನ್ನು ಪಾವತಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯವಾದ ಮಾರ್ಚ್‌ 31ಕ್ಕೆ ಅನುಸಾರವಾಗಿ ಆಟಗಾರರಿಗೆ ಸಲ್ಲಬೇಕಾಗಿದ್ದ ಹಣವನ್ನು ನೀಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯದಂತಹ ಪ್ರಮುಖ ಕ್ರಿಕೆಟ್‌ ಮಂಡಳಿಗಳು ಆಟಗಾರರು ವೇತನ ಕಡಿತಕ್ಕೆ ಸಿದ್ಧರಾಗ ಬೇಕಾದೀತು ಎನ್ನುವ ಮುನ್ಸೂಚನೆ ನೀಡಿವೆ. ಇದನ್ನು ತಾವೂ ನಿರೀಕ್ಷಿಸಿದ್ದಾಗಿ ಆಟಗಾರರೂ ತಿಳಿಸಿದ್ದಾರೆ. ಬ್ರಿಟನ್‌ ಸರಕಾರವು ಶೇ. 20ರಷ್ಟು ವೇತನ ಕಡಿತಕ್ಕೆ ಸಿದ್ಧವಾಗಿದೆ. ಅಂದರೆ, ಗರಿಷ್ಠ 2,500 ಪೌಂಡ್‌ ವೇತನ ಕಡಿತವನ್ನು ಅಲ್ಲಿನ ಆಟಗಾರರು ಅಂದಾಜಿಸಬಹುದಾಗಿದೆ.

ಐಪಿಎಲ್‌ ಅನಿವಾರ್ಯ
ಐಪಿಎಲ್‌ ನಡೆಯದಿದ್ದರೆ ಹಲವು ಪಾಲುದಾರರು ಸಾಕಷ್ಟು ನಷ್ಟ ಅನುಭವಿ ಸಲಿದ್ದಾರೆ. ಈ ನಿಟ್ಟಿನಲ್ಲಿ ಈ ವರ್ಷದ ದ್ವಿತೀಯಾರ್ಧದಲ್ಲಾದರೂ ಐಪಿಎಲ್‌ ನಡೆಸುವುದು ಅನಿವಾರ್ಯವಾಗಲಿದೆ ಎಂದೂ ಈ ಅಧಿಕಾರಿ ಒಪ್ಪಿಕೊಂಡಿದ್ದಾರೆ.
ಕೋವಿಡ್ 19 ಆತಂಕದಲ್ಲಿ ಯಾವುದೇ ಪಂದ್ಯಾವಳಿ ನಡೆಸುವ ಸ್ಥಿತಿ ಇಲ್ಲ. ಸಪ್ಟೆಂಬರ್‌ನಲ್ಲಿ ಏಷ್ಯ ಕಪ್‌ ಹಾಗೂ ಅಕ್ಟೋಬರ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ತವರು ನೆಲದಲ್ಲಿ ಸರಣಿ ನಡೆಯಲಿದ್ದು, ವಿಶ್ವ ಟಿ20 ಪಂದ್ಯಾ ವಳಿಯೂ ಇದೇ ಅವಧಿಯಲ್ಲಿ ನಡೆಯುವ ನಿರೀಕ್ಷೆಯಿದೆ. ಎಲ್ಲವೂ ಯಾವಾಗ ಸಹಜ ಸ್ಥಿತಿಗೆ ಮರಳುತ್ತದೆ ಎನ್ನುವುದು ಗೊತ್ತಿಲ್ಲದಿರುವಾಗ ಐಪಿಎಲ್‌ನಂತಹ ಮಹತ್ವದ ಕೂಟ ಯಾವಾಗ ನಡೆಯುತ್ತದೆ ಎಂದು ಹೇಳುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.

ಇದರ ಜತೆಗೆ, ದೇಶೀಯ ಪಂದ್ಯಾವಳಿಗಳಿಗೂ ವೇಳಾಪಟ್ಟಿ ಸಿದ್ಧ ಪಡಿಸುವ ಸಮಸ್ಯೆಯನ್ನೂ ಬಿಸಿಸಿಐ ನಿಭಾಯಿಸಬೇಕಿದೆ. ಐಪಿಎಲ್‌ ನಡೆಯುವ ಅವಧಿಯಲ್ಲಿ ಯಾವುದೇ ದೇಶೀಯ ಕ್ರಿಕೆಟ್‌ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲು ನಿಯಮಗಳಲ್ಲಿ ಅವಕಾಶವಿಲ್ಲ. ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಐಪಿಎಲ್‌ ನಡೆಯುವ ಸಾಧ್ಯತೆ ಇದ್ದರೆ ದೇಶೀಯ ಪಂದ್ಯಾವಳಿಗಳನ್ನು ಮುಂದಕ್ಕೆ ಹಾಕಲೇಬೇಕಾಗುತ್ತದೆ. ಸಾಮಾನ್ಯವಾಗಿ ಆಗಸ್ಟ್‌ ತಿಂಗಳಲ್ಲಿ ದೇಶೀಯ ಪಂದ್ಯಾ ವಳಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಅಂತಿಮಗೊಳಿಸುತ್ತದೆ. ಈ ಬಾರಿ ಐಪಿಎಲ್‌ ಯಾವಾಗ ನಡೆಯಲಿದೆ ಎನ್ನುವುದನ್ನು ಆಧರಿಸಿ, ಮುಂದಿನ ಪಂದ್ಯಾವಳಿಗಳ ದಿನಾಂಕಗಳು ನಿಗದಿಯಾಗಲಿವೆ ಎಂಬ ಸುಳಿವನ್ನು ಬಿಸಿಸಿಐ ಅಧಿಕಾರಿ ನೀಡಿದ್ದಾರೆ.

ಸಮಸ್ಯೆಯಾಗಲು ಬಿಡುವುದಿಲ್ಲ
ಒಂದು ದೇಶದ ಕ್ರಿಕೆಟ್‌ ಮಂಡಳಿಯು ಆಟಗಾರರ ವೇತನ ಪಾವತಿಗಾಗಿ ಸರಕಾರ ದ ಸಹಾಯವನ್ನು ಎದುರು ನೋಡುತ್ತಿದೆ. ಎಲ್ಲ ಕಡೆಯಲ್ಲೂ ವೇತನ ಕಡಿತದ ಮಾತು ಗಳೇ ಕೇಳಿಬರುತ್ತಿವೆ. ಆದರೂ ಬಿಸಿಸಿಐ ತನ್ನ ಆಟಗಾರರ ಹಿತರಕ್ಷಣೆಗೆ ಮುಂದಾಗಿದೆ. ದೇಶದ ಯಾವುದೇ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟಿಗನಿಗೂ ಸಮಸ್ಯೆಯಾಗಲು ಬಿಡುವುದಿಲ್ಲ ಎಂದು ಮಂಡಳಿ ಭರವಸೆ ನೀಡಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.