ಬಿಇ ಕನ್ನಡ ಮಾಧ್ಯಮಕ್ಕೆ ಶೂನ್ಯ ಪ್ರವೇಶ : 90 ಸೀಟುಗಳಲ್ಲಿ ಒಂದು ಸೀಟೂ ಭರ್ತಿಯಾಗಿಲ್ಲ


Team Udayavani, Dec 28, 2021, 7:55 AM IST

ಬಿಇ ಕನ್ನಡ ಮಾಧ್ಯಮಕ್ಕೆ ಶೂನ್ಯ ಪ್ರವೇಶ : 90 ಸೀಟುಗಳಲ್ಲಿ ಒಂದು ಸೀಟೂ ಭರ್ತಿಯಾಗಿಲ್ಲ

ಬೆಂಗಳೂರು: ಮಾತೃಭಾಷೆ ಕನ್ನಡ ದಲ್ಲಿಯೇ ಎಂಜಿನಿಯರಿಂಗ್‌ ಶಿಕ್ಷಣ ನೀಡಬೇಕು ಎಂಬ ಸದುದ್ದೇಶದಿಂದ ರಾಜ್ಯ ಸರಕಾರ ಮೊದಲ ಬಾರಿಗೆ ಆರಂಭಿಸಿದ ಕೋರ್ಸ್‌ ಗಳಿಗೆ ಆರಂಭಿಕ ಹಿನ್ನಡೆ ಉಂಟಾ ಗಿದೆ. ಪ್ರಥಮ ವರ್ಷ ಕನ್ನಡದಲ್ಲಿ ಸಿವಿಲ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯ ರಿಂಗ್‌ ಕೋರ್ಸ್‌ ಗಾಗಿ 90 ಸೀಟುಗಳನ್ನು ಮೀಸ ಲಿಟ್ಟರೂ, ಯಾವೊಬ್ಬ ವಿದ್ಯಾರ್ಥಿಯೂ ಇದನ್ನು ಆಯ್ಕೆ ಮಾಡಿ ಕೊಂಡಿಲ್ಲ.

ಕನ್ನಡದಲ್ಲಿ ಎಂಜಿನಿಯರಿಂಗ್‌ ಮಾಡಿದರೆ ಕರ್ನಾಟಕದಲ್ಲಿಯೇ ಉಳಿದು ಬಿಡುತ್ತೇವೆ ಅಥವಾ ಬೇರೆ ರಾಜ್ಯಗಳಲ್ಲಿ ಹಾಗೂ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗ ಸಿಗದಿದ್ದರೆ ಏನು ಮಾಡುವುದು ಎಂಬ ಆತಂಕ ಇದಕ್ಕೆ ಕಾರಣ. ಹೀಗಾಗಿ, ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ಆಯ್ಕೆ ಮಾಡಿಕೊಂಡು ಕೊನೆಗೆ ಇಂಗ್ಲಿಷ್‌ ಮಾಧ್ಯಮಕ್ಕೆ ಬದಲಾಯಿಸಿಕೊಳ್ಳುತ್ತಿದ್ದಾರೆ. ತಮಿಳು ನಾಡು ಸಹಿತ ಹಲವು ರಾಜ್ಯಗಳಲ್ಲಿ ಆಯಾ ರಾಜ್ಯಭಾಷೆಗಳಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲಾಗುತ್ತಿದೆ. ನಮ್ಮಲ್ಲೂ ಅದೇ ವ್ಯವಸ್ಥೆ ಬೇಕು ಎಂದು ಕನ್ನಡ ಮಾಧ್ಯಮದ ಕೋರ್ಸ್‌ ಆರಂಭಿಸಲಾಗಿತ್ತು.

ಕನ್ನಡ ಮಾಧ್ಯಮಕ್ಕೆ ಸಿದ್ಧತೆ
ರಾಜ್ಯ ಸರಕಾರದ ನಿರ್ದೇಶನದಂತೆ ವಿಟಿಯು ಮತ್ತು ಎಐಸಿಟಿಇ ಸಹಯೋಗದಲ್ಲಿ ಪಠ್ಯಕ್ರಮ ರಚಿಸಲಾಗಿದೆ. ಕನ್ನಡ ಮಾಧ್ಯಮದಲ್ಲಿ ಬೋಧಿಸಲು ಪ್ರಾಧ್ಯಾಪಕರಿಗೂ ತರಬೇತಿ ನೀಡಲಾಗಿದೆ. ಹೆಚ್ಚುವರಿ ಅಧ್ಯಯನಕ್ಕಾಗಿ ಪುಸ್ತಕಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸುವ ಕೆಲಸಗಳೂ ನಡೆಯುತ್ತಿವೆ. ಶಾಲೆ ಮತ್ತು ಕಾಲೇಜು ಹಂತದಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಪ್ರಾಥಮಿಕ ಹಂತದಿಂದಲೇ ವಿಜ್ಞಾನ ಮತ್ತು ಗಣಿತವನ್ನು ಕನ್ನಡದಲ್ಲಿಯೇ ಬೋಧಿಸಬೇಕು ಎಂದಿದ್ದಾರೆ ಮೈಸೂರು ಮಹಾರಾಜ ತಾಂತ್ರಿಕ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ| ಮುರಳಿ.

ಯಾವ ಕಾಲೇಜುಗಳಲ್ಲಿ?
2021-22ನೇ ಸಾಲಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಸಿವಿಲ…), ಚಿಕ್ಕಬಳ್ಳಾಪುರದ ಎಸ್‌.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯ (ಸಿವಿಲ್), ಮೈಸೂರಿನ ಮಹಾರಾಜ ತಾಂತ್ರಿಕ ಮಹಾವಿದ್ಯಾನಿಲಯ (ಮೆಕ್ಯಾನಿಕಲ್‌) ದಲ್ಲಿ ತಲಾ 30 ಸೀಟುಗಳಂತೆ 90 ಸೀಟುಗಳನ್ನು ಕನ್ನಡ ಮಾಧ್ಯಮದಲ್ಲಿ ಪ್ರಕಟಿಸಿದೆ. ಸಿಇಟಿ ಮೊದಲ ಸುತ್ತಿನಲ್ಲಿ ಒಬ್ಬ ಮೆಕ್ಯಾನಿಕಲ್‌ ಹಾಗೂ ಎರಡನೇ ಸುತ್ತಿನಲ್ಲಿ ಇಬ್ಬರು ಸಿವಿಲ್‌ ಸೀಟುಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಕೊನೆಗೆ ಮೂವರೂ ತಮ್ಮ ಸೀಟುಗಳನ್ನು ರದ್ದು ಮಾಡಿಸಿಕೊಂಡಿದ್ದಾರೆ.

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಸಹಿತ ವಿದ್ಯಾರ್ಥಿ ಗಳಿಗಿರುವ ಅವಕಾಶಗಳನ್ನು ಸರಕಾರ ಘೋಷಿಸಿದರೆ, ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ದಲ್ಲಿ ವ್ಯಾಸಂಗ ಮಾಡಲು ಮುಂದಾಗುತ್ತಾರೆ. –

 – ಡಿ.ಟಿ. ರಾಜು, ಪ್ರಾಂಶುಪಾಲರು, ಎಸ್‌ಜೆಸಿಐಟಿ, ಚಿಕ್ಕಬಳ್ಳಾಪುರ

- ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.