ಬೆಳಗಾವಿ ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷ ಸಭೆ ; ಸಿಎಂ ಬೊಮ್ಮಾಯಿ
Team Udayavani, Nov 25, 2022, 7:40 AM IST
ಬೆಂಗಳೂರು: ಬೆಳಗಾವಿ ಗಡಿ ಬಗ್ಗೆ ಮಹಾರಾಷ್ಟ್ರ ಕಾಲು ಕೆದರುತ್ತಿರುವಂತೆಯೇ ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.
“ವಿವಾದವನ್ನು ಮಾತುಕತೆ ಮೂಲಕವೂ ಬಗೆಹರಿಸಿಕೊಳ್ಳುವ ಚಿಂತನೆ ಇದೆ’ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿರುವುದನ್ನು ಗಮನಿಸಿದ್ದೇನೆ. ಈ ವಿಚಾರವೂ ಸೇರಿದಂತೆ ಗಡಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗುರುವಾರ ಬೊಮ್ಮಾಯಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆದು ಚರ್ಚಿಸುವಂತೆ ಹೇಳಿದ್ದರು.
ಗಡಿ ವಿವಾದಕ್ಕೆ ಸಂಬಂಧಿಸಿ ಮಹಾ ಸಿಎಂ ಶಿಂಧೆ ಸಭೆ ನಡೆಸಿದ್ದಲ್ಲದೆ, ಸುಪ್ರೀಂ ಕೋರ್ಟ್ನಲ್ಲಿರುವ ದಾವೆಯ ಬಗ್ಗೆಯೂ ಉಲ್ಲೇಖೀಸಿದ್ದಾರೆ. ಇದರ ಮಧ್ಯೆ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವ ಚಿಂತನೆ ಇದೆ ಎಂದೂ ಹೇಳಿರುವುದು ಗಮನಕ್ಕೆ ಬಂದಿದೆ. ಆದರೆ ದಾವೆ ಹೂಡಿದ್ದು ಅವರೇ, ಮಾತುಕತೆಯ ಚಿಂತನೆ ಬಗ್ಗೆಯೂ ಅವರೇ ಹೇಳಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಕಾನೂನು ಹೋರಾಟಕ್ಕೆ ಸಿದ್ಧತೆ :
ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸುವ ಬಗ್ಗೆ ಹಿಂದಿನ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದಕ್ಕಾಗಿ ನಾವು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಮುಖ್ಯವಾಗಿ ನಮಗೆ ಬಲವಾದ ನೆಲೆಗಟ್ಟು ಇದೆ. ಹೀಗಾಗಿ ಸದ್ಯ ನಮ್ಮ ಮುಂದಿರುವುದು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸುವ ವಿಚಾರ ಮಾತ್ರ ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
MUST WATCH
ಹೊಸ ಸೇರ್ಪಡೆ
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ