ಚರ್ಮಕ್ಕೆ ಪ್ರಯೋಜನಕಾರಿ…ಸೌಂದರ್ಯದ ಪ್ರತೀಕ ರೋಸ್ ವಾಟರ್ ನಿಂದ ಹಲವು ಪ್ರಯೋಜನಗಳಿವೆ…

ರೋಸ್ ವಾಟರ್ ಹೆಚ್ಚಿನ ಎಲ್ಲಾ ಮಹಿಳೆಯರ ಸೌಂದರ್ಯದ ಗುಟ್ಟು ಎಂದರೆ ತಪ್ಪಲ್ಲ.

Team Udayavani, Jan 3, 2023, 5:45 PM IST

ಚರ್ಮಕ್ಕೆ ಪ್ರಯೋಜನಕಾರಿ…ಸೌಂದರ್ಯದ ಪ್ರತೀಕ ರೋಸ್ ವಾಟರ್ ನಿಂದ ಹಲವು ಪ್ರಯೋಜನಗಳಿವೆ…

ರೋಸ್ ವಾಟರ್ (ಗುಲಾಬಿ ದಳ)… ಪ್ರಾಚೀನ ಕಾಲ ಎಂದರೆ ರಾಜ ರಾಣಿಯವರ ಕಾಲದಿಂದಲೂ ಉಪಯೋಗಿಸಿಕೊಂಡು ಬಂದಿರುವ ಸೌಂದರ್ಯ ವರ್ಧಕವಾಗಿದೆ. ಇದರ ಬಳಕೆಯಿಂದ ಅನೇಕ ಸೌಂದರ್ಯವರ್ಧಕ ಗುಣಗಳನ್ನು ಪಡೆಯಬಹುದು.

ರೋಸ್ ವಾಟರ್ ಹೆಚ್ಚಿನ ಎಲ್ಲಾ ಮಹಿಳೆಯರ ಸೌಂದರ್ಯದ ಗುಟ್ಟು ಎಂದರೆ ತಪ್ಪಲ್ಲ. ಇಂದಿನ ಮಹಿಳೆಯರು ರೋಸ್ ವಾಟರ್ ಹೆಚ್ಚಾಗಿ ಬಳಸುತ್ತಾರೆ. ಎಣ್ಣೆ ತ್ವಚೆ, ಒಣ ತ್ವಚೆ, ಸೆನ್ಸಿಟಿವ್ ಸ್ಕಿನ್ ಹೀಗೆ ಯಾವ ರೀತಿಯ ಚರ್ಮ ಹೊಂದಿರುವವರು ಕೂಡಾ ರೋಸ್ ವಾಟರ್ ಬಳಸಬಹುದು. ರೋಸ್ ವಾಟರ್ ಚರ್ಮವನ್ನು ಕಾಂತಿಯುತಗೊಳಿಸಲು ಸಹಾಯ ಮಾಡುತ್ತದೆ. ಬ್ಯಾಕ್ಟೀರಿಯ ಸೋಂಕಿನಿಅದ ರಕ್ಷಿಸುತ್ತದೆ. ಗಾಯಗಳು, ಸುಟ್ಟ ಗಾಯಗಳನ್ನು ಗುಣಪಡಿಸುತ್ತದೆ. ಮುಖ, ತ್ವಚೆ, ಕೂದಲು, ಆರೋಗ್ಯ ಹೀಗೆ ವಿವಿಧ ರೀತಿಯ ಸಮಸ್ಯೆಗಳಿಗೂ ರೊಸ್ ವಾಟರ್ ಉತ್ತಮ ಪರಿಹಾರ. ಇದರ ಉಪಯೋಗ ಹಾಗೂ ಮನೆಯಲ್ಲೇ ತಯಾರಿಸುವ ವಿಧಾನವನ್ನೂ ತಿಳಿದುಕೊಳ್ಳೋಣ.

ಕ್ಲೆನ್ಸಿಂಗ್ ಮಿಲ್ಕ್ ನಂತೆ ಕಾರ್ಯ ನಿರ್ವಹಿಸುವ ರೋಸ್ ವಾಟರ್‌ನಿಂದ ಚರ್ಮಕ್ಕೆ ಹಲವು ರೀತಿಯ ಉಪಯೋಗಗಳಿವೆ. ಅವುಗಳೆಂದರೆ:

ರೋಸ್ ವಾಟರ್ ಕಣ್ಣಿಗೆ ಒಳ್ಳೆಯದು. ಕಣ್ಣನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಅನೇಕರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಡಾರ್ಕ್ ಸರ್ಕಲ್ಸ್ ತೆಗೆದುಹಾಕುತ್ತದೆ. ಇಡೀ ದಿನ ಕಂಪ್ಯೂಟರ್, ಮೊಬೈಲ್ ನೋಡಿ ಕಣ್ಣುಗಳಿಗೆ ಸುಸ್ತಾಗಿದ್ದರೆ ಕಣ್ಣುರಿ ಕಾಣಿಸಿಕೊಳ್ಳುತ್ತದೆ. ಇದನ್ನು ನಿವಾರಿಸಲು ರೋಸ್ ವಾಟರ್ ಸಹಾಯ ಮಾಡುತ್ತದೆ.

ತಲೆಹೊಟ್ಟು ನಿವಾರಿಸಲು ರೋಸ್ ವಾಟರ್ ತಲೆ ಬುಡಕ್ಕೆ ಹಚ್ಚಿದರೆ ಉತ್ತಮ ಕಂಡೀಷನರ್‌ನಅತೆ ಕೆಲಸ ಮಾಡುತ್ತದೆ. ಎರಡು ಚಮಚ ಗ್ಲಿಸರಿನ್ ಮತ್ತು ಎರಡು ಚಮಚ ರೋಸ್ ವಾಟರ್ ಬೆರೆಸಿ ತಲೆಗೆ ಹಚ್ಚಿ ಐದು ನಿಮಿಷ ಚೆನ್ನಾಗಿ ಮಸಾಜ್ ಮಾಡಿದರೆ ಇಣ ಕೂದಲು ಮೃದುವಾಗುತ್ತದೆ. ಕೂದಲು ಬೆಳವಣಿಗೆಗೆ ಹಾಗೂ ಉದುರಿದ ಕೂದಲಿನ ಜಾಗದಲ್ಲಿ ಮತ್ತೆ ಕುದಲು ಬೆಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.

ಮೊಡವೆ ಸಮಸ್ಯೆ ನಿವಾರಣೆಗೆ:
1) ಒಂದು ಚಮಚ ಗುಲಾಬಿ ದಳಕ್ಕೆ ನಿಂಬೆರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ, ಅರ್ಧ ಗಂಟೆಯ ಬಳಿಕ ಮುಖ ತೊಳೆಯಿರಿ. ಇದು ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಕಲೆಯೂ ಉಳಿಯುವುದಿಲ್ಲ.

2) ಒಂದು ಚಮಚ ಲವಂಗ ಪುಡಿಯನ್ನು ಒಂದು ಚಮಚ ಗುಲಾಬಿ ದಳ ಚೆನ್ನಾಗಿ ಮಿಶ್ರಣ ಮಾಡಿ, ಆ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ಮೊಡವೆಗಳ ಮೇಲೆ ಹಚ್ಚಿ, ಇಣಗಿದ ಬಳಿಕ ತೊಳೆಯಿರಿ. ಇದರಿಂದ ಮೊಡವರಗಳು ನಿವಾರಣೆಯಾಗುತ್ತದೆ. ಗುಲಾಬಿ ದಳದೊಂದಿಗೆ ಜೇನುತುಪ್ಪ ಮಿಶ್ರಣ ಮಾಡಿ ಮುಖಕ್ಕೆ ಹಚ್ಚುವುದರಿಂದಲೂ ಮುಖದ ಕಾಂತಿ ಹೆಚ್ಚಾಗುತ್ತದೆ. ಉತ್ತಮ ಫಲಿತಾಂಶಕ್ಕಾಗಿ ವಾರಕ್ಕೆರಡು ಬಾರಿ ರೋಸ್ ವಾಟರ್ ಬಳಸುವುದು ಸಹಕರಿಯಾಗಲಿದೆ.

ರೋಸ್ ವಾಟರ್ ತಯಾರಿಸುವ ವಿಧಾನ 1:
ತಾಜಾ ಗುಲಾಬಿಗಳನ್ನು ಆರಿಸಿಕೊಳ್ಳಿ. ರಾಸಾಯನಿಕ ಪದಾರ್ಥಗಳನ್ನು ಸಿಂಪಡನೆ ಮಾಡದ ಗುಲಾಬಿ ಸಿಕ್ಕಿದರೆ ಇನ್ನೂ ಒಳ್ಳೆಯದು. ಮೊದಲಿಗೆ ಗುಲಾಬಿ ಎಸಳುಗಳನ್ನು ಬಿಡಿಸಿಕೊಂಡು, ಅದನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು ತೆಗೆದುಕೊಂಡು ಗುಲಾಬಿ ಎಸಳುಗಳನ್ನು ಆ ನೀರಿಗೆ ಹಾಕಿ ನೀರು ಕುದಿಯಲು ಬಿಡಿ. ಕಡಿಮೆ ಉರಿಯಲ್ಲಿ ಸುಮಾರು 10- 15 ನಿಮಿಷ ಕಾಲ ನೀರು ಕುದಿಯುತ್ತಿದ್ದಂತೆ ಗುಲಾಬಿ ದಳಗಳು ಬಣ್ಣ ಕಳೆದುಕೊಳ್ಳುತ್ತಿರುತ್ತದೆ. ದಳಗಳು ರಸ ಬಿಟ್ಟ ನಂತರ ನೀರು ಸೋಸಿಕೊಳ್ಳಿ. ನಂತರ ಅದನ್ನು ತಣ್ಣಗಾದ ಮೇಲೆ ಫ್ರಿಡ್ಜ್ ನಲ್ಲಿ ಇಟ್ಟರೆ ಹಲವು ದಿನಗಳವರೆಗೆ ಉಪಯೋಗಿಸಿಕೊಳ್ಳಬಹುದು.

ರೋಸ್ ವಾಟರ್ ತಯಾರಿಸುವ ವಿಧಾನ 2:
ನೈಸರ್ಗಿಕ ಗುಲಾಬಿ ದಳ ಆರಿಸಿಕೊಂಡು ಶುದ್ಧವಾಗಿ ತೊಳೆದು ಇಟ್ಟುಕೊಳ್ಳಿ. ಒಂದು ಪಾತ್ರೆಯಲ್ಲಿ ನೀರು ಚೆನ್ನಾಗಿ ಕುದಿಸಿ, ಆರಿಸಿ ನಂತರ ತೊಳೆದಿಟ್ಟಿದ್ದ ಗುಲಾಬಿ ದಳಗಳನ್ನು ಹಾಕಿ ಮುಚ್ಚಳ ಮುಚ್ಚಿ ಅರ್ಧ ಗಂಟೆ ಹಾಗೆ ಬಿಡಿ. ಅರ್ಧ ಗಂಟೆಯ ಬಳಿಕ ನೀರನ್ನು ಸೋಸಿ ಒಂದು ಬಾಟಲಿಯಲ್ಲಿ ಶೇಖರಿಸಿಡಿ.

*ಕಾವ್ಯಶ್ರೀ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.