ಮನೆಮದ್ದಾಗಿ ತುಳಸಿಯ ಬಳಕೆ

ಸ್ಪಲ್ಪ ಬೆಲ್ಲವನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಮೂಲವ್ಯಾಧಿ ಗುಣಮುಖವಾಗುತ್ತದೆ.

Team Udayavani, Jul 17, 2021, 2:32 PM IST

ಮನೆಮದ್ದಾಗಿ ತುಳಸಿಯ ಬಳಕೆ

ಆರೋಗ್ಯವೇ ಭಾಗ್ಯ ಎಂಬ ಸಾಲುಗಳು ಹೇಳುವಂತೆ ನಮ್ಮ ದೇಹದ ಚೆನ್ನಾಗಿದ್ದರೆ ಅದು ನಮ್ಮ ಬದುಕಿನ ಭಾಗ್ಯವೇ ಸರಿ. ಉತ್ತಮ ಆರೋಗ್ಯವನ್ನು ಹೊಂದಿರುವವರು ತಮ್ಮ ಬದುಕಿನಲ್ಲಿ ಯಾವದೇ ರೀತಿಯ ಸಮಸ್ಯೆಗಳು ಎದುರಾದರೂ ಅದನ್ನು ಅತ್ಯಂತ ಸುಲಭವಾಗಿ ನಿವಾರಿಸುತ್ತಾರೆ. ಪುರಾತನ ಕಾಲದಿಂದಲೂ ಮನುಷ್ಯ ತನ್ನ ಆರೋಗ್ಯಕ್ಕೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡುತ್ತಾ ಬಂದಿದ್ದು, ನಮ್ಮ ಸುತ್ತಮುತ್ತಲಿನ ಸಸ್ಯ ಸಂಕುಲ ಇದಕ್ಕೆ ತನ್ನದೆ ಆದ ಮಹತ್ವದ ಕೊಡುಗೆಯನ್ನು ನೀಡುತ್ತಾ ಬಂದಿದೆ.

ಸಾಮಾನ್ಯವಾಗಿ ಪೂಜಾ ಕೈಂಕರ್ಯಗಳಲ್ಲಿ ಅತೀ ಹೆಚ್ಚಾಗಿ ಬಳಸುವ, ದೇವತೆಗಳಿಗೆ ಅತ್ಯಂತ ಪ್ರಿಯವಾದ ತುಳಸಿ ಮನುಷ್ಯನ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ತುಳಸಿಯನ್ನು ನಾನಾ ವಿಧವಾದ ಔಷಧಿಗಳಲ್ಲಿ ಬಳಸಲಾಗುತ್ತಿದ್ದು, ಇದು ಮನುಕುಲದ ಆರೋಗ್ಯಕ್ಕೆ ಆದಾರವಾಗಿ ತನ್ನನ್ನು ತಾನು ಗುರುತಿಸಿಕೊಂಡಿದೆ.

ತುಳಸಿಯ ಉಪಯೋಗಗಳು
ಜ್ವರ ನಿವಾರಕ
ಒಂದು ಹಿಡಿಯಷ್ಟು ತುಳಸಿಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಬೇಕು. ಹೀಗೆ ಕುದಿಸಿ ಅದು ಅರ್ದ ಲೋಟದಷ್ಟು ಆದ ಮೇಲೆ ಅದಕ್ಕೆ ಬೆಲ್ಲ ಬೆರೆಸಿ ಪ್ರತಿ ಬಾರಿ ನಾಲ್ಕು ಚಮಚದಂತೆ ದಿನಕ್ಕೆ ಮೂರು ಬಾರಿ ಕುಡಿದರೆ ಜ್ವರ ಗುಣಮುಖವಾಗುತ್ತದೆ. ಮಕ್ಕಳಿಗೆ ಜ್ವರ ಬಂದಿದ್ದರೆ ಒಂದು ಸಲಕ್ಕೆ ಎರಡು ಚಮಚ ಕುಡಿಸಿದರೆ ಸಾಕಾಗುತ್ತದೆ.

ಗಂಟಲು ನೋವು ನಿವಾರಕ
ತುಳಸಿ ಎಲೆ ಮತ್ತು ದೊಡ್ಡ ಪತ್ರೆ ಎಲೆಗಳನ್ನು ಜಜ್ಜಿ ಅರ್ಧ ಲೀಟರ್ ನೀರಿನಲ್ಲಿ ಬೆರೆಸಿ ಕುದಿಸಬೇಕು.ಈ ನೀರು ಅರ್ಧಕ್ಕಿಳಿದ ನಂತರ ಸ್ವಲ್ಪ ಉಪ್ಪು ಬೆರೆಸಿ ದಿನಕ್ಕೆ ಮೂರು ಬಾರಿ ಊಟಕ್ಕೆ ಮುನ್ನ ಕುಡಿದರೆ ಗಂಟಲು ನೋವು ಅತ್ಯಂತ ಬೇಗ ನಿವಾರಣೆಯಾಗುತ್ತದೆ.

ಹೊಟ್ಟೆ ನೋವು ಉಪಶಮನ
ತುಳಸಿ ರಸಕ್ಕೆ ಹಸಿ ಶುಂಠಿ ಸೇರಿಸಿ ಬಿಸಿ ಮಾಡಿ ನಾಲ್ಕು ಚಮಚದಂತೆ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದಾಗಿ ಹೊಟ್ಟೆ ನೋವು ಗುಣಮುಖವಾಗುತ್ತದೆ.

ಅಜೀರ್ಣ ಸಮಸ್ಯೆ
ತುಳಸಿ ಎಲೆಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಬೆರೆಸಿಟ್ಟು ಮೂರರಿಂದ ನಾಲ್ಕು ಗಂಟೆಯ ಬಳಿಕ ಸೇವಿಸಿದರೆ ಅಜೀರ್ಣದ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ.

ಬಾಯಿ ದುರ್ನಾತ ನಿವಾರಕ
ತುಳಸಿ ಎಲೆಯನ್ನು ಬೆಳಿಗ್ಗೆ ಹಾಗೂ ರಾತ್ರಿ ಆಹಾರದ ನಂತರ ಸೇವನೆ ಮಾಡುವುದರಿಂದ ಬಾಯಿಯಿಂದ ಬರುವ ದುರ್ನಾತ ನಿವಾರಣೆಯಾಗುತ್ತದೆ.

ಕೀಲುನೋವಿಗೆ ರಾಮಬಾಣ
ಸುಮಾರು 20 ರಿಂದ 30 ತುಳಸಿ ಎಲೆಗಳನ್ನು ಮತ್ತು 5 ಕಾಳಮೆಣಸನ್ನು ಸೇರಿಸಿ ಅರೆದು ಈ ಮಿಶ್ರಣಕ್ಕೆ ಒಂದು ಚಮಚ ತುಪ್ಪ ಸೇರಿಸಿ ಬೆಳಿಗ್ಗೆ ಮತ್ತು ರಾತ್ರಿ ವೇಳೆ ಸೇವನೆ ಮಾಡುವುದರಿಂದಾಗಿ ಕೀಲುನೋವು ನಿವಾರಣೆಯಾಗುತ್ತದೆ.

ಉಬ್ಬಸ ಉಪಶಮನ
ತುಳಸಿ ಎಲೆಯನ್ನು ಜಜ್ಜಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಕುದಿಸಿ, ಅದನ್ನು ಆಗಾಗ ಕುಡಿಯುತ್ತಿದ್ದರೆ ಉಬ್ಬಸದ ಸಮಸ್ಯೆ ಪರಿಹಾರವಾಗುತ್ತದೆ.

ಮೂಲವ್ಯಾಧಿ ನಿವಾರಕ
ಸುಮಾರು 10 ಗ್ರಾಂ ತುಳಸಿ ಬೀಜದ ಪುಡಿಗೆ ಒಂದು ಚಮಚ ಬೆಣ್ಣೆ, ಸ್ಪಲ್ಪ ಬೆಲ್ಲವನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಮೂಲವ್ಯಾಧಿ ಗುಣಮುಖವಾಗುತ್ತದೆ.

ಹುಳುಕಡ್ಡಿ ನಿವಾರಕ
ತುಳಸಿ ಮತ್ತು ಬ್ರಾಹ್ಮಿ ಎಲೆಗಳನ್ನು ಸೇರಿಸಿ ಅರೆದು ಅದನ್ನು ಹುಳುಕಡ್ಡಿ ಇರುವ ಜಾಗಕ್ಕೆ ಲೇಪನ ಮಾಡುವುದರಿಂದ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ. ಅಲ್ಲದೆ ತುಳಸಿ ಎಲೆಯನ್ನು ಅರೆದು ಅದಕ್ಕೆ ಸ್ಪಲ್ಪ ಉಪ್ಪನ್ನು ಸೇರಿಸಿ ಹುಳುಕಡ್ಡಿ ಇರುವ ಜಾಗಕ್ಕೆ ಲೇಪನ ಮಾಡುವುದರಿಂದಲೂ ಸಮಸ್ಯೆ ನಿವಾರಣೆಯಾಗುತ್ತದೆ.

*ಆದರ್ಶ

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.