Bengaluru-Chennai ಎಕ್ಸ್ ಪ್ರೆಸ್ ವೇ ನಿರ್ಮಾಣ ಅಂತಿಮ ಹಂತಕ್ಕೆ: 17 ಸಾವಿರ ಕೋಟಿ ವೆಚ್ಚ
Team Udayavani, Dec 18, 2023, 12:53 PM IST
ಬೆಂಗಳೂರು: 262 ಕಿಲೋ ಮೀಟರ್ ಉದ್ದದ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ (ನ್ಯಾಷನಲ್ ಎಕ್ಸ್ ಪ್ರೆಸ್ 7) ಮೂರು ಹಂತದಲ್ಲಿ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಯೋಜನೆ ಪೂರ್ಣಗೊಂಡರೆ ಪ್ರಸ್ತುತ 6ರಿಂದ 7ಗಂಟೆವರೆಗಿನ ಪ್ರಯಾಣದ ದೂರ 2ರಿಂದ 3ಗಂಟೆಗೆ ಇಳಿಕೆಯಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Mandya: ಕಬ್ಬಿಣ ಹಾಕಲು ನಿರ್ಮಾಣ ಮಾಡಿದ್ದ ಶೆಡ್ ನಲ್ಲಿ ರಾಶಿ ರಾಶಿ ಗೋವಿನ ಮೂಳೆಗಳು ಪತ್ತೆ
ಈ ಬೆಳವಣಿಗೆ ಜೊತೆಯಲ್ಲಿ ಸರ್ಕಾರವು ಇತ್ತೀಚೆಗೆ ಎಕ್ಸ್ ಪ್ರೆಸ್ ವೇ ಮತ್ತು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸಮಗ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ನೀಡುವ ಸೂಚನೆಯಾಗಿದೆ ಎಂದು ವರದಿ ವಿವರಿಸಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅನುಮೋದಿಸಿದ ಈ ಮಾರ್ಗಸೂಚಿ ಜಾಗತಿಕ ಮಟ್ಟದ ಅಧ್ಯಯನದೊಂದಿಗ ವಿನ್ಯಾಸಗೊಳಿಸಲಾಗಿದೆ. ಎಕ್ಸ್ ಪ್ರೆಸ್ ವೇ ಸ್ಪಷ್ಟ ಗೋಚರತೆ ಮತ್ತು ಚಾಲಕರಿಗೆ ಯಾವುದೇ ಗೊಂದಲಗಳಿಲ್ಲದೆ ಮಾರ್ಗದರ್ಶನ ನೀಡಲು ಸಹಕಾರಿಯಾಗಲಿದೆ ಎಂದು ಸಾರಿಗೆ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ತಿಳಿಸಿದೆ.
ಗ್ರೀನ್ ಫೀಲ್ಡ್ ಕಾರಿಡಾರ್ ಅಂದಾಜು 17,000 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು-ಚೆನ್ನೈ ನಡುವೆ ಸಂಪರ್ಕ ಮತ್ತು ಆರ್ಥಿಕ ಅಭಿವೃದ್ಧಿ ಹೆಚ್ಚಿಸುವ ಗುರಿ ಹೊಂದಿರುವ ಪ್ರಮುಖ ಮೂಲಸೌಕರ್ಯದ ಹೂಡಿಕೆಯಾಗಿದೆ.
ಎಕ್ಸ್ ಪ್ರೆಸ್ ವೇಯಲ್ಲಿ ಬಹುಭಾಷಾ ವಿಧಾನ ಅಳವಡಿಸಿಕೊಳ್ಳಲಾಗಿದೆ. ಇದರಲ್ಲಿ ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗಳಲ್ಲೂ ಮಾಹಿತಿ ಒಳಗೊಂಡಿರುತ್ತದೆ. ಈ ಕ್ರಮದಿಂದಾಗಿ ವಾಹನ ಸವಾರರಿಗೆ ಉತ್ತಮವಾದ ಸಂವಹನ ಮತ್ತು ಅರಿವು ಮೂಡಿಸಲು ನೆರವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 2023ರ ಜನವರಿಯಲ್ಲಿ ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದ್ದರು. ಇದೀಗ 2024ರ ಅಕ್ಟೋಬರ್ ನಲ್ಲಿ ಈ ಮಾರ್ಗ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್