ಪೇಟಿಎಂ ಕ್ಯಾಶ್ಬ್ಯಾಕ್ ನೀಡುವುದಾಗಿ ವಂಚನೆ : ಪೇಟಿಎಂ ಮಾಜಿ ಉದ್ಯೋಗಿ ಬಂಧನ
Team Udayavani, Mar 3, 2022, 11:12 AM IST
ಬೆಂಗಳೂರು: ಪೇಟಿಎಂನಿಂದ ಕ್ಯಾಶ್ಬ್ಯಾಕ್ ನೀಡುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಟ್ಟಹಲಸೂರಿನ ನಿವಾಸಿ ದೀಪನ್ ಚಕ್ರವರ್ತಿ (24) ಬಂಧಿತ. ಆರೋಪಿಯಿಂದ ಕೃತ್ಯಕ್ಕೆ ಬಳಿಸಿದ್ದ ಎರಡು ಸಿಮ್ ಕಾರ್ಡ್ಗಳು, ಒಂದು ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಈ ಹಿಂದೆ ಪೇಟಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅಂಗಡಿಗಳು ಹಾಗೂ ಸಾರ್ವಜನಿಕರ ಬಳಿ ತೆರಳಿ ಪೇಟಿಎಂ ಬ್ಯುಸಿನೆಸ್ ಅಪ್ಲಿಕೇಶನ್ ಅನ್ನು ಇನ್ ಸ್ಟಾಲ್ ಮಾಡಿದರೆ ಅದರಿಂದ ಸಿಗುವ ಲಾಭಗಳ ಬಗ್ಗೆ ವಿವರಿಸುತ್ತಿದ್ದ. ಇನ್ಸ್ಟಾಲ್ ಮಾಡುವ ಬಗ್ಗೆ ಮಾಹಿತಿ ಇಲ್ಲದವರ ಮೊಬೈಲ್ ಪಡೆದು ತಾನೇ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿ, ಪಾಸ್ವರ್ಡ್ ನೀಡುತ್ತಿದ್ದ. ಅವರ ಮೊಬೈಲ್ ನಂಬರ್ಗಳನ್ನು ಹಾಗೂ ಆéಪ್ಗೆ ಕೊಟ್ಟಿ ರುವ ಪಾಸ್ ವರ್ಡ್ಗಳನ್ನು ಸಂಗ್ರಹಿಸಿಟ್ಟಿಕೊಂಡಿದ್ದ. ಒಂದು ವರ್ಷದ ಹಿಂದೆ ಪೇಟಿಎಂ ಕಂಪನಿಯಲ್ಲಿ ಕೆಲಸ ತೊರೆದಿದ್ದ. ಈ ಹಿಂದೆ ತಾನು ಸಂಗ್ರಹಿಸಿಟ್ಟುಕೊಂಡಿದ್ದ ಮೊಬೈಲ್ ನಂಬರ್ಗೆ ಕರೆ ಮಾಡಿ ಪೇಟಿಎಂ ಆ್ಯಪ್ನಲ್ಲಿ ಪೇಟಿಎಂ ಫಾರ್ ಬ್ಯುಸಿನೆಸ್ ಆ್ಯಪ್ ಡೌನ್ಲೋಡ್ ಮಾಡಿಕೊಂಡರೆ ಕ್ಯಾಶ್ಬ್ಯಾಕ್
ಬರುವುದಾಗಿ ನಂಬಿಸುತ್ತಿದ್ದ. ಕ್ಯಾಶ್ಬ್ಯಾಕ್ ಬರಲು ಕನಿಷ್ಠ ಡಿಪಾಸಿಟ್ ಇಡಬೇಕು ಎನ್ನುತ್ತಿದ್ದ. ಆತನ ಮಾತಿಗೆ ಮರುಳಾಗಿ ಹಣ ಡಿಪಾಸಿಟ್ ಇಟ್ಟರೆ, ಪಾಸ್ ವರ್ಡ್ ಬಳಸಿ ಅವರ ಖಾತೆಯಿಂದ ಕೂಡಲೇ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ.
ಇದನ್ನೂ ಓದಿ : ಪಾಲಿಕೆಯಲಿ ಸಹಸ್ರಾರು ಕೋಟಿ ರೂ.ಅಕ್ರಮ ಪತ್ತೆ : ಎಸಿಬಿಯ 35 ತಂಡಗಳೊಂದಿಗೆ ಶೋಧನೆ
ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
2021 ಡಿ.11ರಂದು ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ್ದ ಆರೋಪಿ ತಾನು ಪೇಟಿಎಂ ಎಕ್ಸಿಕ್ಯೂಟಿವ್ ರಾಜೇಶ್ ಎಂದು ಪರಿಚಯ ಮಾಡಿಕೊಂಡಿದ್ದ. ಪೇಟಿಎಂ ಫಾರ್ ಬ್ಯುಸಿನೆಸ್ ಆ್ಯಪ್ ಡೌನ್ಲೋಡ್ ಮಾಡಿಕೊಂಡರೆ ಕ್ಯಾಷ್ಬ್ಯಾಕ್ ಬರುತ್ತದೆ. ಇದಕ್ಕೆ 20 ಸಾವಿರ ರೂ. ಡೆಪಾಸಿಟ್ ಮಾಡಬೇಕು ಎಂದಿದ್ದ. ಇದನ್ನು ನಂಬಿದ ದೂರುದಾರರು ಆಧಾರ್ ಕಾರ್ಡ್, ಪಾನ್ ಕಾರ್ಡ್ ಮಾಹಿತಿಯನ್ನು ಆರೋಪಿಗೆ ಕೊಟ್ಟಿದ್ದಾರೆ. ಈ ಮಾಹಿತಿ ಮೂಲಕ ದೂರುದಾರರ ಬ್ಯಾಂಕ್ ಖಾತೆಯಿಂದ 19 ಸಾವಿರ ರೂ.ನ್ನು ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ನಂತರ ದೂರುದಾರರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹಣ ಕಳೆದುಕೊಂಡವರು ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಾಂತ್ರಿಕ ಕಾರ್ಯಾಚರಣೆ ನಡೆಸಿದ ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ