ಕೇವಲ 500 ರೂ.ಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ವೃದ್ಧನನ್ನೇ ಕೊಲೆಗೈದ ಬಸ್‌ ಕ್ಲೀನರ್‌


Team Udayavani, Mar 24, 2022, 12:16 PM IST

ಕೇವಲ 500 ರೂ.ಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ವೃದ್ಧನನ್ನೇ ಕೊಲೆಗೈದ ಬಸ್‌ ಕ್ಲೀನರ್‌

ಬೆಂಗಳೂರು : ಮದ್ಯದ ಅಮಲಿನಲ್ಲಿ ಮಲಗಿದ್ದ ವೃದ್ಧನನ್ನು ಕೇವಲ 500 ರೂ.ಗೆ ಕೊಲೆಗೈದಿದ್ದ ಬಸ್‌ ಕ್ಲೀನರ್‌ನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್‌ ಮೂಲದ ಪ್ರಶಾಂತ್‌(27) ಬಂಧಿತ. ಈತ ಮಾ.15ರಂದು ತಡರಾತ್ರಿ 11.30ರ ಸುಮಾರಿಗೆ ಮದ್ಯದ ಅಮಲಿನಲ್ಲಿ ಪೀಣ್ಯ 2ನೇ ಹಂತದ ಬಸ್‌ ನಿಲ್ದಾಣದ ಸಮೀಪದಲ್ಲಿ ಮಲಗಿದ್ದ ವೃದ್ಧ ಹನುಮಂತರಾಯಪ್ಪ(64)ನನ್ನು ಕೊಲೆಗೈದು, ಅವರ ಜೇಬಿನಲ್ಲಿದ್ದ 500 ರೂ. ಕದ್ದು ಪರಾರಿಯಾಗಿದ್ದನು.

ಕುಣಿಗಲ್‌ನಲ್ಲಿ ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್‌, ಕಾರ್ಖಾನೆ ರಜಾ ದಿನಗಳಲ್ಲಿ ಬೆಂಗಳೂರು-ಕುಣಿಗಲ್‌ ಬಸ್‌ಗಳಲ್ಲಿ ಕ್ಲೀನರ್‌ ಆಗಿ ಹಾಗೂ ಸಮೀಪದ  ಟ್ರೋಲ್‌ ಬಂಕ್‌ನ ವಾಹನಗಳಿಗೆ ಗಾಳಿ ತುಂಬುವ ಕೆಲಸ ಮಾಡುತ್ತಿದ್ದ. ಮಾ.13ರಂದು ಬೆಂಗಳೂರಿಗೆ ಬಂದಿದ್ದ ಪ್ರಶಾಂತ್‌, ಬೆಳಗ್ಗೆ ವೇಳೆ ಕೆಲಸ ಮಾಡಿ, ರಾತ್ರಿ ವೇಳೆ ಕಂಠಪೂರ್ತಿ ಮದ್ಯ ಸೇವಿಸಿ ನಂತರ ಬಸ್‌ನಲ್ಲಿ ಮಲಗುತ್ತಿದ್ದ.

ಇದನ್ನೂ ಓದಿ : ಕಾಣಿಯೂರಿನಲ್ಲಿ ಅಡಿಕೆ, ಸಿಲಿಂಡರ್ ಕಳವು : ನಿರಂತರವಾಗಿ ಕಳ್ಳತನ ನಡೆದರೂ ಪತ್ತೆಯಾಗದ ಕಳ್ಳರು

ಮಾ.15ರಂದು ಪೀಣ್ಯ ಬಸ್‌ ನಿಲ್ದಾಣದ ಸಮೀಪದ ಕಟ್ಟೆಯೊಂದರ ಮೇಲೆ ಮದ್ಯ ಸೇವಿಸಿ ಮಲಗಿದ್ದ. ಅದೇ ವೇಳೆ ಹನುಮಂತರಾಯಪ್ಪ ಕೂಡ ಕಂಠಪೂರ್ತಿ ಮದ್ಯ ಸೇವಿಸಿ ಜ್ಞಾನವಿಲ್ಲದೆ, ರಸ್ತೆ ಬದಿ ಬಿದ್ದಿದ್ದರು. ಮತ್ತೂಂದೆಡೆ ಸೊಳ್ಳೆ ಕಾಟಕ್ಕೆ ಪದೇ ಪದೆ ಎಚ್ಚರಗೊಳ್ಳುತ್ತಿದ್ದ ಪ್ರಶಾಂತ್‌, ಹನುಮಂತರಾಯಪ್ಪ ಬಿದ್ದಿರುವುದನ್ನು ಗಮನಿಸಿದ್ದಾನೆ. ಬಳಿಕ ಆತನ ಬಳಿ ಹೋಗಿ ಒಂದೆರಡು ಬಾರಿ ಎಚ್ಚರಗೊಳಿಸಲು ಮುಂದಾಗಿದ್ದಾನೆ. ಆದರೆ, ವೃದ್ಧ ಎಚ್ಚರಗೊಂಡಿಲ್ಲ. ಆಗ ಜೇಬಿಗೆ ಕೈ ಹಾಕಿದ್ದಾಗ, ಎಚ್ಚರಗೊಂಡ ವೃದ್ಧ ತಡೆದಿದ್ದು, ನಂತರ ಜ್ಞಾನವಿಲ್ಲದೆ ಮತ್ತೆ ಮಲಗಿದ್ದಾನೆ. ಬಳಿಕ ಅಲ್ಲೇ ಪಕ್ಕದಲ್ಲಿದ್ದ ಸಿಮೆಂಟ್‌ ಇಟ್ಟಿಗೆ ಕಲ್ಲುನ್ನು ವೃದ್ಧನ ಮೇಲೆ ಎತ್ತಿ ಹಾಕಿ ಕೊಲೆಗೈದು, ಜೇಬಿನಲ್ಲಿದ್ದ 500 ರೂ. ಕದ್ದು ಪರಾರಿಯಾಗಿದ್ದ. ನಂತರ ಪ್ರಕರಣ ದಾಖಲಿಸಿಕೊಂಡ ರಾಜಗೋಪಾಲನಗರ ಠಾಣೆ ಇನ್‌ಸ್ಪೆಕ್ಟರ್‌, ಬಿ.ಆರ್‌.ಜಗದೀಶ್‌, ಪಿಎಸ್‌ಐ ಹನುಮಂತ ಹಾದಿಮನಿ, ಬಸವಲಿಂಗಪ್ಪ, ರಾಘವೇಂದ್ರ ಉಪರಿ, ರೋಹಿಣಿ ರೆಡ್ಡಿ ನೇತೃತ್ವದ ತಂಡ ಘಟನಾ ಸ್ಥಳದ ಸುತ್ತ-ಮುತ್ತಲ 100 ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.