ಈತನ ಕಳ್ಳತನಕ್ಕೆ ತಂದೆ ತಾಯಿಯೇ ಪ್ರೇರಣೆ : ಬರೋಬ್ಬರಿ ಎರಡು ವರ್ಷದ ಬಳಿಕ ಸೆರೆ


Team Udayavani, Apr 18, 2022, 10:05 PM IST

ಈತನ ಕಳ್ಳತನಕ್ಕೆ ತಂದೆ ತಾಯಿಯೇ ಪ್ರೇರಣೆ : ಬರೋಬ್ಬರಿ ಎರಡು ವರ್ಷದ ಬಳಿಕ ಸೆರೆ

ಬೆಂಗಳೂರು: ತಂದೆ-ತಾಯಿಯಿಂದ ಕಳ್ಳತನ ಮಾಡುವುದನ್ನು ಕಲಿತು ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು 2 ವರ್ಷದ ಬಳಿಕ ಬಂಧಿಸುವಲ್ಲಿ ಯಲಹಂಕ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶ ಗಾಜಾಯಾಬಾದ್‌ನ ಅಕ್ಬರ್ (36) ಬಂಧಿತ. ಆರೋಪಿಯಿಂದ 7.2 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ಬರ್ ತಂದೆ ಸುಲ್ತಾನ್‌ ಸೈಫಿ ವೃತ್ತಿಪರ ಕಳ್ಳನಾಗಿದ್ದ. ಆತನ ತಂದೆ ಕಳ್ಳತನ ಮಾಡಿದ ವಸ್ತುಗಳನ್ನು ತಾಯಿ ರಜಿಯಾ ಮಾರಾಟ ಮಾಡುತ್ತಿದ್ದಳು. ಸದ್ಯ ಇಬ್ಬರು ಮೃತಪಟ್ಟಿದ್ದಾರೆ.

ದೆಹಲಿಯಿಂದ ಮಹಾರಾಷ್ಟ್ರದ ಮುಂಬೈನ ಅಂಧೇರಿ ಮಾಡಲ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ 5ನೇ ತರಗತಿ ವ್ಯಾಸಂಗ ಮಾಡಿ ಅರ್ಧಕ್ಕೆ ವ್ಯಾಸಂಗ ಮೊಟಕುಗೊಳಿಸಿ, ಪಾಲಕರನ್ನು ನೋಡಿ ಕಳ್ಳತನಕ್ಕೆ ಇಳಿದಿದ್ದ. ದೇಶದ ಪ್ರಮುಖ ನಗರಗಳಿಗೆ ರೈಲಿನಲ್ಲಿ ಹೋಗಿ ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿ ರೈಲಿನಲ್ಲಿ ಉತ್ತರ ಪ್ರದೇಶಕ್ಕೆ ವಾಪಾಸ್ಸಾಗುತ್ತಿದ್ದ.

ಇದನ್ನೂ ಓದಿ : ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಅನುಮತಿಸಿ ಹೈಕೋರ್ಟ್‌ ಆದೇಶ

ಬೆರಳಚ್ಚು ಕೊಟ್ಟ ಸುಳಿವು: ಯಲಹಂಕ ಉಪನಗರದ ನಿವಾಸಿಯೊಬ್ಬರು 2020 ಫೆ.13ರಂದು ಸಂಜೆ ಮನೆಗೆ ಬೀಗ ಹಾಕಿ ಮಕ್ಕಳನ್ನು ಟೂಷನ್‌ಗೆ ಬಿಡಲು ಹೋಗಿದ್ದರು. ಆ ವೇಳೆ ಇವರ ಮನೆಯ ಬಾಗಿಲು ಒಡೆದು ಮನೆಯೊಳಗೆ ನುಗ್ಗಿದ್ದ ಅಕ್ಬರ್, 400 ಗ್ರಾಂ. ಚಿನ್ನದ ಒಡವೆಗಳು, 2 ಲಕ್ಷ ರೂ.ನಗದು ದೋಚಿದ್ದ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಯಲಹಂಕ ಉಪನಗರ ಠಾಣೆ ಪೊಲೀಸರು, ಕೃತ್ಯ ನಡೆದ ಸ್ಥಳದಲ್ಲಿ ಪತ್ತೆಯಾದ ಬೆರಳಚ್ಚು ಸಂಗ್ರಹಿಸಿದ್ದರು. ಹಳೆ ಆರೋಪಿಗಳ ಬೆರಳಚ್ಚಿಗೆ ಹೋಲಿಕೆ ಮಾಡಿ ನೋಡಿದಾಗ ಅಕºರ್‌ ಸುಳಿವು ಸಿಕ್ಕಿತ್ತು. ಪ್ರಕರಣದ ನಡೆದ 2 ವರ್ಷಗಳ ಬಳಿಕ ಆತ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಇರುವುದನ್ನು ಪತ್ತೆಹಚ್ಚಿದ ಪೊಲೀಸರು, ಅಲ್ಲಿಗೆ ತೆರಳಿ ಆತನನ್ನು ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.