ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಚಾರ್ಮಾಡಿ ಘಾಟ್
Team Udayavani, Feb 1, 2023, 3:59 PM IST
ಮೂಡಿಗೆರೆ: ಬೆಂಗಳೂರಿನಲ್ಲಿ ಯುವಕನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯ ಮತ್ತಿಕೆರೆ ನಿವಾಸಿ ಗೋವಿಂದರಾಜು (19)ಕೊಲೆಯಾದ ವ್ಯಕ್ತಿ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏನಿದು ಪ್ರಕರಣ :
ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸುತ್ತಿದ್ದ, ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಮತ್ತಿತರ ಇಬ್ಬರು ಸೇರಿಕೊಂಡು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿದ್ದಾರೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು.
ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಈ ವೇಳೆ ಭರತ್ ಮತ್ತಿತರ ಇಬ್ಬರು ಸೇರಿಕೊಂಡು ಅಪಹರಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ