ಕನ್ನಡ ಭಾಷೆಯ ಕಡೆಗಣನೆ : ಸೂಕ್ತ ವಿವರಣೆ ನೀಡಲು ಬೆಂಗಳೂರು ಮೆಟ್ರೋಗೆ ಸಚಿವರಿಂದ ನೋಟಿಸ್
Team Udayavani, Sep 1, 2021, 12:20 PM IST
ಬೆಂಗಳೂರು : ಇತ್ತೀಚೆಗೆ ನಡೆದ ಮೆಟ್ರೋ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಅವರು ಬೆಂಗಳೂರು ಮೆಟ್ರೋ ಗೆ ನೋಟಿಸ್ ನೀಡಿದ್ದಾರೆ.
ಈ ಕುರಿತು ಮೆಟ್ರೋ ಅಧಿಕಾರಿಗಳಿಗೆ ನೀಡಿದ ನೋಟಿಸ್ ನಲ್ಲಿ : ಆಗಸ್ಟ್ 29 ರಂದು ನಾಯಂಡಹಳ್ಳಿ – ಕೆಂಗೇರಿ ನಡುವಿನ ಮೆಟ್ರೋ ರೈಲು ಸಂಚಾರದ ಉದ್ಘಾಟನಾ ಸಮಾರಂಭದ ಮುಖ್ಯ ವೇದಿಕೆಯ ಫಲಕಗಳಲ್ಲಿ ಹಾಗೂ ಹಿಂಬದಿಯ ಪರದೆಯಲ್ಲಿ ಕನ್ನಡ ಭಾಷೆಯನ್ನು ಬಳಸದಿರುವುದು ನಿಜಕ್ಕೂ ಗಂಭೀರವಾದ ಸಂಗತಿಯಾಗಿದೆ, ರಾಜ್ಯ ರಾಜಧಾನಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯದ ಅಧಿಕೃತ ಆಡಳಿತ ಭಾಷೆಯನ್ನು ಕಡೆಗಣಿಸಿದ್ದು ಗಂಭೀರವಾದ ಲೋಪವಾಗಿದೆ ಎಂದಿದ್ದಾರೆ.
ಈಗಾಗಲೇ ಆಡಳಿತ ಭಾಷೆಯಾಗಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದರೂ ಇಂತಹ ಕರ್ತವ್ಯ ಲೋಪವಾಗಿರುವುದು ದುರದೃಷ್ಟಕರ ಈ ಬಗ್ಗೆ ಗಮನಹರಿಸುವುದು ನಿಮ್ಮ ಹಾಗೂ ನಮ್ಮ ಅಧೀನದಲ್ಲಿರುವ ಅಧಿಕಾರಿಗಳ ಕರ್ತವ್ಯವಾಗಿದೆ. ಆದರೂ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರುವುದನ್ನು ಸಹಿಸಲಾಗದು, ಭಾಷೆ ಒಂದು ಭಾವನಾತ್ಮಕ ವಿಚಾರ, ಅದರಲ್ಲಿಯೂ ಆಡಳಿತ ಭಾಷೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದೇ ಆದರೆ ಅದು ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕಾದ ಸರಕಾರದ ಇಲಾಖೆಗಳು ಈ ರೀತಿಯ ಲೋಪವೆಸಗುವುದು ಗಂಭೀರ ಕರ್ತವ್ಯಲೋಪವೆಂದು ಪರಿಗಣಿಸಲ್ಪಡುತ್ತದೆ.
ಇದನ್ನೂ ಓದಿ :ಕುಟುಂಬದ ಜೊತೆ ಮಾಲ್ಡೀವ್ಸ್ ಪ್ರವಾಸ : ಬ್ಲೂ ಬಿಕಿನಿಯಲ್ಲಿ ಸನ್ನಿ ಲಿಯೋನ್
ಆದುದರಿಂದ ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಸೂಕ್ತ ವಿವರಣೆಯನ್ನು ನೀಡಬೇಕೆಂದು ಬೆಂಗಳೂರು ಮೆಟ್ರೋ ಗೆ ಸಚಿವರು ನೋಟಿಸ್ ಜಾರಿಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್