ಬಸ್ ಮತ್ತು ಲಾರಿ ನಡುವೆ ಅಪಘಾತ : 75 ಕ್ಕೂ ಅಧಿಕ ಕಾರ್ಮಿಕರು ಬಚಾವ್
ಮಾನವೀಯತೆ ಮೆರೆದ ಮಾಜಿ ಶಾಸಕ ಸುಧಾಕರಲಾಲ್
Team Udayavani, Feb 20, 2023, 10:11 PM IST
ಕೊರಟಗೆರೆ : ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಬಸ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, 75 ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಯಾವುದೇ ಪ್ರಾಣಹಾನಿ ಇಲ್ಲದೇ ಬಚಾವ್ ಆಗಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಮಾಜಿ ಜೆಡಿಎಸ್ ಶಾಸಕ ಡಾ.ಪಿ ಸುಧಾಕರ ಲಾಲ್ ಗಾಯಾಳುಗಳ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ರಸ್ತೆ ಪಕ್ಕ ಬಿದ್ದವರನ್ನು ಸುಧಾಕರಲಾಲ್ ರವರು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿ ಮಹಿಳಾ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಅಲ್ಲದೇ ಸಣ್ಣ ಪುಟ್ಟ ಗಾಯ ಆಗಿದ್ದವರನ್ನು ತಮ್ಮದೇ ವಾಹನವನ್ನು ನೀಡಿ ಆಸ್ಪತ್ರೆಗೆ ಕಳುಹಿಸಿಸಿಕೊಟ್ಟಿದ್ದಾರೆ. ಗಾಬರಿಯಾಗದಂತೆ ತಿಳಿಸಿ, ನೀರಿನ ಬಾಟಲ್ ಗಳನ್ನ ನೌಕರರಿಗೆ ನೀಡಿ ಪ್ರತೇಕ ವಾಹನಗಳ ವ್ಯವಸ್ಥೆ ಮಾಡಿ ಅವರವರ ಮನೆಗೆ ಕಳಿಸಿಕೊಟ್ಟು ಮಾನವಿಯತೆ ಮೆರೆದಿದ್ದಾರೆ.
ಗಾರ್ಮೆಂಟ್ಸ್ ಬಸ್ ನಲ್ಲಿದ್ದ 75ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಪಾಯದಿಂದ ಪಾರಾಗಿದ್ದು, ಜಲ್ಲಿ ತುಂಬಿದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬಂದ ಗೌರ್ಮೆಂಟ್ಸ್ ಬಸ್ ಢಿಕ್ಕಿ ಹೊಡೆದು ಅಪಘಾತವಾಗಿದೆ ಎನ್ನಲಾಗಿದೆ. ತುಮಕೂರಿನ ಗೋಕುಲ್ ದಾಸ್ ಗಾರ್ಮೆಂಟ್ಸ್ ನಿಂದ ಬರುತ್ತಿದ್ದ ಬಸ್ ಗಾರ್ಮೆಂಟ್ಸ್ ಬಸ್ ಚಾಲಕನ ಓವರ್ ಸ್ಪೀಡ್ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಟಿಪ್ಪರ್ ಕಂಟ್ರೋಲ್ ಮಾಡಲು ಸಾಧ್ಯವಾಗದೆ ಬೈಪಾಸ್ ರಸ್ತೆಯಿಂದ ಚಾಲಕನ ಸಮೇತ ಕೆಳಗೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್