ಕೋವಿಡ್ ನಿಂದ ಮಕ್ಕಳ ರಕ್ಷಣೆ : ಇರಲಿ ಎಚ್ಚರಿಕೆ


Team Udayavani, Jun 21, 2021, 6:55 AM IST

ಕೋವಿಡ್ ನಿಂದ ಮಕ್ಕಳ ರಕ್ಷಣೆ : ಇರಲಿ ಎಚ್ಚರಿಕೆ

ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳೇ ಹೆಚ್ಚಾಗಿ ಬಾಧಿತರಾಗುತ್ತಾರೆ ಎಂಬ ತಜ್ಞರ ಅಭಿಪ್ರಾಯಗಳು ರಾಜ್ಯವನ್ನು ಆತಂಕಕ್ಕೆ ದೂಡಿದ್ದು ಸುಳ್ಳಲ್ಲ. ಇದಕ್ಕೆ ಪೂರಕವಾಗಿ ಎರಡನೇ ಅಲೆಯಲ್ಲೇ ಬಹಳಷ್ಟು ಮಕ್ಕಳು ಕೊರೊನಾಗೆ ಬಾಧಿತರಾಗಿದ್ದಾರೆ. ಜತೆಗೆ ಈಗ 18 ವರ್ಷ ಮೀರಿದವರಿಗೆ ಮಾತ್ರ ಲಸಿಕೆ ನೀಡುತ್ತಿರುವುದರಿಂದ ಈ ಪ್ರಕ್ರಿಯೆ ಪೂರ್ತಿಯಾದ ಮೇಲೆ ಮಕ್ಕಳಷ್ಟೇ ಬಾಕಿ ಉಳಿಯಲಿದ್ದಾರೆ. ಇವರ ಮೇಲೆ ಮೂರನೇ ಅಲೆ ಹೆಚ್ಚು ಬಾಧಿಸಲಿದೆ ಎಂದೇ ಹೇಳುತ್ತಿದ್ದರು.

ಈ ನಡುವೆಯೇ ಮೂರನೇ ಅಲೆ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ ರಾಜ್ಯದಲ್ಲಿ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ| ದೇವಿಪ್ರಸಾದ್‌ ಶೆಟ್ಟಿ ಅವರ ನೇತೃತ್ವದಲ್ಲಿ ಮಕ್ಕಳ ತಜ್ಞ ವೈದ್ಯರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಸರಕಾರಕ್ಕೆ ಪ್ರಾಥಮಿಕ ವರದಿಯೊಂದನ್ನು ನೀಡಿದ್ದು, ಮೂರನೇ ಅಲೆಯಲ್ಲಿ ಒಂದರಿಂದ ಒಂದೂವರೆ ಲಕ್ಷ ಮಕ್ಕಳಿಗೆ ಕೊರೊನಾ ತಗಲಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 1.75 ಕೋಟಿ ಮಕ್ಕಳಿದ್ದಾರೆ. ಇವರಲ್ಲಿ ಒಂದರಿಂದ ಒಂದೂವರೆ ಲಕ್ಷ ಎಂದರೆ, ಕೇವಲ ಶೇ.1ರಷ್ಟಾಗುತ್ತದೆ. ಅಲ್ಲದೆ ಒಂದರಿಂದ ಒಂದೂವರೆ ಲಕ್ಷ ಮಕ್ಕಳು ಎಂದಾಕ್ಷಣ ಭಯ ಮೂಡುವುದು ಸಹಜ. ಆದರೆ ಇಲ್ಲಿ ಬೇರೆ ವಿಚಾರಗಳೂ ಇವೆ. ಈ ಎಲ್ಲ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುವುದಿಲ್ಲ. ಅರ್ಧದಷ್ಟು ಮಕ್ಕಳಿಗೆ ಮಾತ್ರ ಕೊರೊನಾ ಸೋಂಕು ಕಾಣಿಸಿಕೊಳ್ಳಬಹುದು. ಉಳಿದವರಲ್ಲಿ ಯಾವುದೇ ಲಕ್ಷಣಗಳು ಇಲ್ಲದೆಯೇ ಬಂದು ಹೋಗಬಹುದು. ಈ ಅರ್ಧದಷ್ಟು ಮಕ್ಕಳಲ್ಲಿ 5 ಸಾವಿರ ಮಕ್ಕಳಿಗೆ ಮಾತ್ರ ಗಂಭೀರ ಪ್ರಮಾಣದ ಸೋಂಕು ಕಾಣಿಸಿಕೊಳ್ಳಬಹುದು. ಅಂದರೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಾಣಿಸಬಹುದು. ಇವರಲ್ಲಿ ಕೆಲವರಿಗೆ ಐಸಿಯು ಚಿಕಿತ್ಸೆ ಬೇಕಾಗಬಹುದು. ಜತೆಗೆ ಮಕ್ಕಳ ಆರೋಗ್ಯವನ್ನು ಪರೀಕ್ಷಿಸಿ, ರೋಗ ಲಕ್ಷಣ ಮತ್ತು ತೀವ್ರತೆ ಆಧಾರದ ಮೇಲೆ ಆಸ್ಪತ್ರೆ, ಕೊರೊನಾ ಆರೈಕೆ ಕೇಂದ್ರ, ಐಸಿಯುಗೆ ರವಾನಿಸಲು ಟ್ರಯಾಜ್‌ ಕೇಂದ್ರಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ದೇವಿಪ್ರಸಾದ್‌ ಶೆಟ್ಟಿ ಅವರ ಸಮಿತಿ ಹೇಳಿದೆ. ಆಸ್ಪತ್ರೆಯಲ್ಲಿ ಮಕ್ಕಳ ಜತೆ ಹೆತ್ತವರು ಇರಲೂ ಅವಕಾಶ ಮಾಡಿಕೊಡಬೇಕು ಎಂದು ಹೇಳಿದೆ ಈ ಸಮಿತಿ. ಸೋಂಕು ಗುಣಮುಖವಾಗಬೇಕು ಎಂದರೆ, ಮಕ್ಕಳ ಜತೆ ಹೆತ್ತವರು ಇರಲೇಬೇಕು ಎಂದು ಹೇಳಿದೆ.

ತಜ್ಞರ ಸಮಿತಿ ವರದಿ ಆಧಾರದ ಮೇಲೆ ಹೇಳುವುದಾದರೆ, ಮಕ್ಕಳಿಗೆ ಭಾರೀ ಪ್ರಮಾಣದಲ್ಲಿ ಕೊರೊನಾ ಬರುವುದಿಲ್ಲ. ಹಾಗಂತ ಜನ ಮೈಮರೆಯುವುದು ಸಲ್ಲದು. ತಜ್ಞರು ಅಧ್ಯಯನ ವರದಿ ನೀಡುವುದು ಈಗಿನ ಸೋಂಕಿನ ಆಧಾರದ ಮೇಲೆ ಹಾಗೂ ಪರಿಸ್ಥಿತಿ ಅವಲೋಕಿಸಿ. ಆದರೆ ಮೂರನೇ ಅಲೆಯಲ್ಲಿ ಬೇರೆ ಯಾವ ಪರಿಸ್ಥಿತಿ ಬರುತ್ತದೆ ಎಂಬುದನ್ನು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಾಗಿ ಜನರು ಯಾವುದೇ ಕಾರಣಕ್ಕೂ ಕೊರೊನಾ ನಿಯಂತ್ರಣಕ್ಕಾಗಿ ಇರುವ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸರಕಾರದ ಮಾರ್ಗಸೂಚಿಗಳನ್ನೂ ಪಾಲನೆ ಮಾಡಬೇಕು. ಗುಂಪು ಸೇರಬಾರದು, ದೊಡ್ಡ ದೊಡ್ಡ ಸಮಾರಂಭಗಳಿಂದ ಸಾಕಷ್ಟು ದೂರವೇ ಉಳಿದು ಮಕ್ಕಳ ರಕ್ಷಣೆಗೆ ಮುಂದಾಗಬೇಕು. ಮಕ್ಕಳಿಗೆ ಕೊರೊನಾ ಬರಬಹುದು ಎಂದರೆ ಅದು ಹೆತ್ತವರಿಂದಲೇ ಎನ್ನುವುದನ್ನು ಮರೆಯಬಾರದು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.