ಇಂದು ಭಾರತ್ ಬಂದ್; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ
Team Udayavani, Sep 27, 2021, 6:30 AM IST
ಹೊಸದಿಲ್ಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ದೇಶಾ ದ್ಯಂತ ಸೋಮವಾರ 10 ಗಂಟೆಗಳ ಕಾಲ ಭಾರತ್ ಬಂದ್ ನಡೆಸಲಿದೆ.
ಭಾರತ್ ಬಂದ್ ವೇಳೆ ಕೇಂದ್ರ, ರಾಜ್ಯ ಸರಕಾರಿ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿ-ಮುಂಗಟ್ಟುಗಳು, ಫ್ಯಾಕ್ಟರಿಗಳು, ಶಾಲೆ-ಕಾಲೇಜುಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವುದಾಗಿ ಮೋರ್ಚಾ ತಿಳಿಸಿದೆ. ಆ್ಯಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ಹೊರತುಪಡಿಸಿ ಇತರ ಸರಕಾರಿ ಮತ್ತು ಖಾಸಗಿ ಸಾರಿಗೆಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದೂ ಹೇಳಿದೆ.
ಈಗಾಗಲೇ ಅನ್ನದಾತರು ಕರೆ ನೀಡಿರುವ ಭಾರತ್ ಬಂದ್ಗೆ ಕಾಂಗ್ರೆಸ್, ಆಪ್, ವೈಎಸ್ಸಾರ್ ಕಾಂಗ್ರೆಸ್, ಡಿಎಂಕೆ, ತೆಲುಗು ದೇಶಂ ಪಕ್ಷ, ಎಡಪಕ್ಷಗಳು, ಬಿಎಸ್ಪಿ, ಆರ್ಜೆಡಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸರಕಾರಗಳೂ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಬೆಂಬಲ ಘೋಷಿಸಿವೆ. ಆಂಧ್ರ ಸರಕಾರವು ರವಿವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯಾಹ್ನದವರೆಗೆ ಎಪಿಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸುವುದಾಗಿ ತಿಳಿಸಿದೆ.
ಇದನ್ನೂ ಓದಿ: ಐಪಿಎಲ್: ಆರ್ಸಿಬಿಗೆ ಗೆಲುವಿನ ಹರ್ಷ
ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವೂ ಬೆಂಬಲ ಘೋಷಿಸಿದ್ದು, ರೈತರೊಂದಿಗೆ ತಾವೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದೆ. ಇನ್ನೊಂದೆಡೆ, ವ್ಯಾಪಾರಿಗಳು, ಸಣ್ಣ ಉದ್ದಿಮೆಗಳು, ಮಳಿಗೆಗಳಿಗೂ ಬಂದ್ಗೂ ಸಂಬಂಧವಿಲ್ಲ ಎಂದು ಭಾರತೀಯ ಉದ್ಯೋಗ್ ವ್ಯಾಪಾರ್ ಮಂಡಲ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’