ಭಟ್ಕಳ : ಕೊಟ್ಟಿಗೆಗೆ ನುಗ್ಗಿ ದನವನ್ನೇ ಹೊತ್ತೊಯ್ದ ಚಿರತೆ : ಮತ್ತೆ ಆತಂಕದಲ್ಲಿ ಗ್ರಾಮದ ಜನ
Team Udayavani, Jun 14, 2022, 8:36 PM IST
ಭಟ್ಕಳ : ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಯಾವುದೇ ತಂಟೆಯನ್ನು ಮಾಡದ ಚಿರತೆ ಮತ್ತೆ ತನ್ನ ಕರಾಮತ್ತನ್ನು ತೋರಿಸಿದ್ದು ಬೆಳಕೆಯ ಕಾನ್ಮದ್ಲುವಿನಲ್ಲಿ ಒಂದು ಗೋವನ್ನು ತಿಂದು ಹಾಕಿದ ಘಟನೆ ವರದಿಯಾಗಿದೆ.
ಕಾನ್ಮದ್ಲುವಿನ ನಾರಾಯಣ ಸೋಮಯ್ಯ ಗೊಂಡ ಎನ್ನುವವರಿಗೆ ಸೇರಿದ ದನವನ್ನು ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದು ಕೊಟ್ಟಿಗೆಗೆ ನುಗ್ಗಿದ ಚಿರತೆ ದನವನ್ನು ಅರ್ಧ ತಿಂದು ಹಾಕಿದ ಘಟನೆ ಎಲ್ಲರಲ್ಲಿಯೂ ಆತಂಕ ಮೂಡಿಸಿದೆ.
ಕಳೆದೊಂದು ವಾರದಿಂದ ಚಿರತೆ ಈ ಭಾಗದಲ್ಲಿ ರಾತ್ರಿ ವೇಳೆ ಓಡಾಡಿ ದನಕರುಗಳು ಹಾಗೂ ನಾಯಿಗಳ ಮೇಲೆ ದಾಳಿ ಮಾಡುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ತೀವ್ರ ಬಡತನದಲ್ಲಿರುವ ನಾರಾಯಣ ಗೊಂಡ ಅವರು ತಮ್ಮ ದನವನ್ನು ಕಳೆದುಕೊಂಡು ಸಾವಿರಾರು ರೂಪಾಯಿ ನಷ್ಟಕ್ಕೊಳಗಾಗಿದ್ದು ಪರಿಹಾರ ನೀಡುವಮತೆ ನಾಗರೀಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಶ್ರೀಕಾಂತ್ ಪವಾರ್, ಅರಣ್ಯ ರಕ್ಷಕ ವಿರೇಶ ಭೇಟಿ ನೀಡಿ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಾರ ಹುಣ್ಣಿಮೆಯ ಕರಿ ಸ್ಪರ್ಧೆಯ ವೇಳೆ ದಿಕ್ಕೆಟ್ಟು ಓದಿದ ಹೋರಿ : ಚಿಂತೆಯಲ್ಲಿ ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ