ಭೀಮಾ ನದಿಯಲ್ಲಿ ನೀರಿನ ಹರಿವು ಇಳಿದರೂ ಜನರಲ್ಲಿ ತಗ್ಗದ ಪ್ರವಾಹ ಭೀತಿ !

ಮಧ್ಯರಾತ್ರಿ 8 ಲಕ್ಷ ಕ್ಯೂಸೆಕ್‌ ಹರಿವು ಹೆಚ್ಚುವ ಸಾಧ್ಯತೆ

Team Udayavani, Oct 17, 2020, 10:42 PM IST

ಭೀಮಾ ನದಿಯಲ್ಲಿ ನೀರಿನ ಹರಿವು ಇಳಿದರೂ ಜನರಲ್ಲಿ ತಗ್ಗದ ಪ್ರವಾಹ ಭೀತಿ !

ಯಾದಗಿರಿ; ಸದ್ಯಕ್ಕೆ ಭೀಮಾನದಿಯಲ್ಲಿ ಒಳಹರಿವು 2.70 ಲಕ್ಷ ಕ್ಯೂಸೆಕ್‌ಗೆ ಇಳಿಕೆಯಾದರೂ ಜಿಲ್ಲೆಯ ಜನರಲ್ಲಿ ಪ್ರವಾಹದ ಭೀತಿ ಆವರಿಸಿದೆ. ಸನ್ನತಿ ಬ್ಯಾರೇಜ್‌ಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ರಾತ್ರಿವೇಳೆ ಪ್ರವಾಹ ಹೆಚ್ಚಾದರೂ ಆಗಬಹುದು ಎಂದು ಸುಳಿವು ನೀಡಿದ್ದಾರೆ.

ಕಳೆದರೆಡು ದಿನಗಳಿಂದ ಭೀಮಾನದಿ ಪಾತ್ರಕ್ಕೆ 3.70 ಲಕ್ಷ ಕ್ಯೂಸೆಕ್ ವರೆಗೆ ನೀರು ಹರಿಸಲಾಗಿದೆ. ಗುರುವಾರ ಮಧ್ಯರಾತ್ರಿಯಿಂದಲೇ 7 ಲಕ್ಷ ಕ್ಯೂಸೆಕ್ ಒಳಹರಿವು ಹೆಚ್ಚಳವಾಗುವ ಸಾಧ್ಯತೆಯ ಕುರಿತು ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿತ್ತು. ಆದರೇ, ಪ್ರಸ್ತುತ ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ ಸಂಜೆ ವೇಳೆಗೆ ಕೊಂಚಮಟ್ಟಿಗೆ ಪ್ರವಾಹ ಇಳಿಕೆ ಕಂಡಿದ್ದು ಶನಿವಾರ ಸಂಜೆ ವೇಳೆಗೆ ನೀರಿನ ಪ್ರಮಾಣ ಮತ್ತಷ್ಟು ಇಳಿಕೆಯಾಗಿದೆ.

ಕಲಬುರಗಿಯ ಸೊನ್ನ ಬ್ಯಾರೇಜ್‌ನಿಂದ 8 ಲಕ್ಷ ಕ್ಯೂಸೆಕ್ ನೀರು ಹರಿದು ಬರುವ ಕುರಿತು ಅಲ್ಲಿನ ಜಿಲ್ಲಾಡಳಿತ ಎಚ್ಚರಿಕೆ ನೀಡುತ್ತಿದ್ದಂತೆ ಯಾದಗಿರಿಯಲ್ಲಿ ಜನರು ತೀವ್ರ ಆತಂಕದ ಸ್ಥಿತಿಗೆ ಸಿಲುಕಿದ್ದಾರೆ. ಪ್ರವಾಹ 3 ಲಕ್ಷ ಕ್ಯೂಸೆಕ್ ಆಸುಪಾಸಿನಲ್ಲಿಯೇ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಇನ್ನೂ 8 ಲಕ್ಷ ಕ್ಯೂಸೆಕ್ ನೀರು ಬಂದರೆ ನಮ್ಮ ಪಾಡೇನು ಎಂದು ರೈತರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ, ಶಿರವಾಳ, ರೋಜಾ ಎಸ್, ಅಣಬಿ, ಹಬ್ಬಳ್ಳಿ, ತಂಗಡಗಿ, ಮರಮಕಲ್, ಬಲಕಲ್, ನಾಲವಡಗಿ, ಯಾದಗಿರಿ ತಾಲೂಕಿನ ಗೂಡೂರು, ಗೊಂದಡಗಿ, ಭೀಮನಳ್ಳಿ, ಬೆಳಗುಂದಿ, ಆನೂರು(ಬಿ)ಮತ್ತು (ಕೆ),ಸಾವೂರ, ಮಲ್ಹಾರ, ಲಿಂಗೇರಿ, ಕೌಳೂರು, ಮುಷ್ಟೂರು, ಎಮ್.ಹೊಸಳ್ಳಿ, ಯಾದಗಿರಿ(ಬಿ), ಅಬ್ಬೆತುಮಕೂರು, ಠಾಣಗುಂದಿ, ಹೆಡಗಿಮದ್ರಾ, ತಳಕ್ ಮತ್ತು ವಡಗೇರಾ ತಾಲೂಕಿ ಹಾಲಗೇರಾ, ಗೋಡಿಹಾಳ, ಕಂದಹಳ್ಳಿ, ಕುಮನೂರು, ಅರ್ಜುನಗಿ, ಬಿಳ್ಹಾರ, ಬೂದಿಹಾಳ, ಬೆನಕನಹಳ್ಳಿ, ಶಿವನೂರು, ಸೂಗೂರು, ಜೋಳದಡಗಿ, ಸಂಗಮ್, ಮಾಚನೂರು, ನಾಯ್ಕಲ್, ಗಡ್ಡೆಸೂಗೂರ, ಬೀರನಾಳ, ಬಬಲಾದ್ ಹಾಗೂ ಹುಲಕಲ್ ಗ್ರಾಮ ಸೇರಿದಂತೆ 45ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ನೀರು ನುಗ್ಗುವ ಆತಂಕವಿದೆ.

ಈಗಾಗಲೇ ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ 14ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಕಾಳಜಿ ಕೇಂದ್ರಗಳಲ್ಲಿ ಇರಿಸಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಿ ಅಗತ್ಯ ಮುನ್ನೆಚ್ಚರಿಕೆಯನ್ನುವಹಿಸಿದೆ. ಸನ್ನತಿ ಬ್ಯಾರೇಜ್‌ನಿಂದ ಹೆಚ್ಚಿನ ನೀರು ಬರುವ ಸಾಧ್ಯತೆಯಿಂದ ಯಾದಗಿರಿಯ ಹೊರವಲಯದ ಗುರುಸಣಿಗಿ ಬ್ರಿಡ್ಜ್ ಕಂ ಬ್ಯಾರೇಜ್ ನ 14 ಗೇಟ್ ಗಳನ್ನು ತೆರೆದು ಭೀಮಾ ತೀರಕ್ಕೆ ನೀರು ಹರಿಸಲಾಗುತ್ತಿದೆ.

ಯಾದಗಿರಿ ಹೊರವಲಯದ ಭೀಮಾ ನದಿ ತೀರದಲ್ಲಿರುವ ಕುಡಿಯುವ ನೀರು ಸರಬರಾಜು ಘಟಕ ಶುಕ್ರವಾರ ಪ್ರವಾಹದಲ್ಲಿ ಜಲಾವೃತಗೊಂಡಿತ್ತು. ಶನಿವಾರ ಸಂಜೆ ವೇಳೆ ಪ್ರವಾಹ ನೀರು ಸಂಪೂರ್ಣ ಇಳಿಕೆಯಾಗಿದ್ದು ಕಂಡು ಬಂತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.