ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಏರುವ ಭೀತಿ! ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ನದಿ ತೀರದ ಗ್ರಾಮಗಳ ಜನ ಜಾನುವಾರುಗಳಿಗೆ ನದಿ ಪಾತ್ರಕ್ಕೆ ತೆರಳದಿರಲು ಎಚ್ಚರಿಕೆ
Team Udayavani, Oct 15, 2020, 5:20 PM IST
ಯಾದಗಿರಿ : ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 3 ಲಕ್ಷ ಕ್ಯೂಸೆಕ್ ನಷ್ಟು ನೀರು ಹರಿಯುವ ಸಾಧ್ಯತೆಯಿದ್ದು ಜನ ಜಾನುವಾರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತ ಕ್ರಮವಹಿಸಲು ಸಹಾಯಕ ಆಯುಕ್ತರು ಯಾದಗಿರಿ ಹಾಗೂ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ , ತಾಲೂಕ ಪಂಚಾಯತ್ ಕಾರ್ಯಾನಿರ್ವಾಣಾಧಿಕಾರಿಗಳಿಗೆ , ನೋಡಲ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ .
ಸಂಭವನೀಯ ಪ್ರವಾಹ ಪೀಡಿತ ಗ್ರಾಮಗಳ ನೋಡಲ್ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ .
ಅಗತ್ಯ ಬಿದ್ದಲ್ಲಿ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ:ಕಲಬುರಗಿ: ಭಾರಿ ಮಳೆಗೆ ಕೆಬಿಎನ್ ದರ್ಗಾದಲ್ಲಿ 600 ವರ್ಷಗಳ ಪುರಾತನ ಬೃಹತ್ ಗೋಡೆ ಕುಸಿತ
ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು ಜನರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ , ಯಾವದೇ ತುರ್ತು ಸಂದರ್ಭದಲ್ಲಿ ನದಿ ಪಾತ್ರ ಮತ್ತು ಹಳ್ಳಗಳ ಕಡೆಗೆ ಜನ ಮತ್ತು ಜಾನುವಾರುಗಳು ಹೊಗದಂತೆ ಎಚ್ಚರವಹಿಸಲು ತಿಳಿಸಿದ್ದಾರೆ.
ಈಗಾಗಲೇ ಮುಂಜಾಗ್ರತ ಕ್ರಮವಾಗಿ ಗ್ರಾಮ ಪಂಚಾಯತ ಮೂಲಕ ಡಂಗೂರ ಸಾರಿಸಲಾಗಿದೆ , ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253771 ಸಂಖ್ಯೆಗೆ ಕರೆ ಮಾಡಲು ಸಾರ್ವಜನಿಕರಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ