ಬೀದರ್ ಕೋವಿಡ್ ಸೋಂಕಿಗೆ 3 ಬಲಿ! 74 ಮಂದಿಗೆ ಸೋಂಕು ದೃಢ


Team Udayavani, Jul 22, 2020, 8:38 PM IST

ಬೀದರ್ ಕೋವಿಡ್ ಸೋಂಕಿಗೆ 3 ಬಲಿ! 74 ಮಂದಿಗೆ ಸೋಂಕು ದೃಢ

ಬೀದರ್: ಗಡಿ ನಾಡು ಬೀದರ್ ನಲ್ಲಿ ಸತತ ಐದು ದಿನಗಳಿಂದ ಕೋವಿಡ್ ಸೋಂಕು ಸಾವಿನ ರಣಕೇಕೆ ಹಾಕುತ್ತಿದ್ದು, ಬುಧವಾರ ಮತ್ತೆ ವೈರಸ್‌ನಿಂದ ಮೂವರು ಬಲಿಯಾಗಿದ್ದಾರೆ. ಜತೆಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು 74 ಪಾಸಿಟಿವ್ ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಮತ್ತಷ್ಟು ವೇಗ ಪಡೆದುಕೊಂಡು ಜನರನ್ನು ಬೆಚ್ಚಿ ಬಿಳಿಸುತ್ತಿದೆ.

ಸಾರಿ ಲಕ್ಷಣಗಳಿಂದ ಬಳಲುತ್ತಿದ್ದ ಬೀದರ ತಾಲೂಕಿನ 67, 58 ವರ್ಷದ ಪುರುಷರು ಹಾಗೂ 57 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ಮತ್ತು ಜ್ವರ ತೊಂದರೆ ಹಿನ್ನಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಈ ರೋಗಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಎಲ್ಲರಲ್ಲೂ ವೈರಾಣು ದೃಢಪಟ್ಟಿತ್ತು. ಜಿಲ್ಲೆಯಲ್ಲಿ ಕೇವಲ 5 ದಿನಗಳಲ್ಲಿ 13 ಜನ ಸಾವಿನ ಕದ ತಟ್ಟಿದ್ದು, ಮೃತರ ಸಂಖ್ಯೆ 66ಕ್ಕೆ ಏರಿಕೆ ಕಂಡಿದೆ. ಇನ್ನೊಂದೆಡೆ ಬುಧವಾರ ಒಂದೇ ದಿನ 186 ಜನರು ಗುಣಮುಖರಾಗಿದ್ದು ಕೊಂಚ ನೆಮ್ಮದಿ ತಂದಂತಾಗಿದೆ.

ಒಟ್ಟು 74 ಪಾಸಿಟವ್ ಕೇಸ್‌ಗಳಲ್ಲಿ ಅತಿ ಹೆಚ್ಚು ಬೀದರ್ ತಾಲೂಕಿನಲ್ಲೇ 25 ಪ್ರಕರಣ ಸೇರಿವೆ. ಹುಮನಾಬಾದ 15, ಬಸವಕಲ್ಯಾಣ 13, ಭಾಲ್ಕಿ 9, ಕಮಲನಗರ 5, ಚಿಟಗುಪ್ಪ ಮತ್ತು ಔರಾದ ತಲಾ 3 ಮತ್ತು ಹುಲಸೂರು ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿವೆ. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 1542ಕ್ಕೆ ಏರಿಕೆಯಾಗಿದೆ. 63 ಮಂದಿ ಸಾವನ್ನಪ್ಪಿದ್ದರೆ, 1029 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 445 ಜನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ 47,002 ಜನರ ವರದಿ ತಪಾಸಣೆ ಮಾಡಲಾಗಿದ್ದು, 44,883 ಮಂದಿಯದ್ದು ನೆಗೆಟಿವ್ ಬಂದಿದೆ. ಇನ್ನು 577 ಜನರ ವರದಿ ಬರುವುದು ಬಾಕಿ ಇದೆ.

ಬೀದರ ನಗರ-4, ಗೋಲೇಖಾನಾ, ಮುಲ್ತಾನಿ ಕಾಲೊನಿ, ಪ್ರತಾಪ ನಗರ ತಹಸೀಲ್ ಕಚೇರಿ, ಮಂಗಲಪೇಟ್, ಸಾಯಿ ಕಾಲೋನಿ, ಅಮಲಾಪುರ, ದೀನ್ ದಯಾಳ ನಗರ ಸಿಎಂಸಿ, ಶಕ್ತಿ ನಗರ ಚಿಟ್ಟಾ ಕ್ರಾಸ್ ಮುಸ್ತೈದಪುರ, ಏಡೇನ್ ಕಾಲೊನಿ, ಮುಲ್ತಾನಿ ಕಾಲೋನಿ, , ಮೈಲೂರ, ತಹಸೀಲ್ ಕಚೇರಿ, ಪ್ರಯಾವಿ ಆಸ್ಪತ್ರೆ, ಶಿವನಗರ ಮತ್ತು ಗುಂಪಾದಲ್ಲಿ ತಲಾ 1 ಕೇಸ್, ತಳವಾಡ 2, ಜನವಾಡಾ 3 ಕೇಸ್‌ಗಳು ಪತ್ತೆಯಾಗಿವೆ.

ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) 6, ತಾಳಮಡಗಿ, ಹುಣಸಗೇರಾ, ಕನಕಟ್ಟಾ, ನೂರ್‌ಖಾ ಅಖಾಡಾ, ಭವಾನಿ ಮಂದಿರ ಬಳಿ, ವಾಂಜರಿ ಮತ್ತು ಜಲಸಂಗಿಯಲ್ಲಿ ತಲಾ 1, ಬಸವಕಲ್ಯಾಣ ತಾಲೂಕಿನ ಬೆಟಬಾಲಕುಂದಾ 3, ಧನ್ನೂರಾ (ಎಸ್) 2, ಲಾಡವಂತಿ, ಶಾಪುರಗಲ್ಲಿ ತಲಾ 1, ಬಸವಕಲ್ಯಾಣ 2, ನಾರಾಯಣಪುರ, ತ್ರಿಪುರಾಂತ, ಕಾಂಬಳೇವಾಡಿ, ಗೋರ್ಟಾ ಗ್ರಾಮದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್