ಡಿವೈಡರ್ಗೆ ಬೈಕ್ ಢಿಕ್ಕಿಯಾಗಿ ಮೂವರು ಯುವಕರ ದುರ್ಮರಣ
Team Udayavani, May 8, 2019, 10:35 AM IST
ತುಮಕೂರು: ಬೈಕೊಂದು ಡಿವೈಡರ್ಗೆ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ರಾಷ್ಟ್ರೀಯ ಹೆದ್ದಾರಿ 4 ರ ನೆಲಹಾಳ್ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮೃತರು ಹಿರಿಯೂರಿನ ಕಂಡೆನಹಳ್ಳಿ ಪಾಳ್ಯದ ಪೃಥ್ವಿರಾಜ್ (24), ರಾಮಜೋಗಿಹಳ್ಳಿಯ ಹನುಮಂತರಾಯ (24) ಮತ್ತು ಚಳ್ಳಕೆರೆ ಯ ಚಿಕ್ಕಚೆಲ್ಲೂರು ಗ್ರಾಮದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮ ಮುಗಿಸಿ ಚಿತ್ರದುರ್ಗದತ್ತ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಅತೀ ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.
ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.