ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಅರವಿಂದ ಕುಮಾರ್ ಶರ್ಮಾ ನೇಮಕ
ಮೋದಿ ಆಪ್ತ ಶರ್ಮಾಗೆ ಹೊಸ ಜವಾಬ್ದಾರಿ
Team Udayavani, Jun 19, 2021, 9:26 PM IST
ನವದೆಹಲಿ/ಲಕ್ನೋ: ವಿಧಾನ ಪರಿಷತ್ ಸದಸ್ಯರಾಗಿರುವ ನಿವೃತ್ತ ಐಎಎಸ್ ಅಧಿಕಾರಿ, ಪ್ರಧಾನಿ ನರೇಂದ್ರ ಮೋದಿ ಆಪ್ತ ಅರವಿಂದ ಕುಮಾರ್ ಶರ್ಮಾರನ್ನು ಉತ್ತರ ಪ್ರದೇಶ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ಶನಿವಾರ ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿರುವ ಸಂಪುಟ ಪುನಾರಚನೆ ವೇಳೆ ಅವರಿ ಸ್ಥಾನವೂ ಸಿಗುವ ಸಾಧ್ಯತೆ ಇದೆ.
1988ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶರ್ಮಾ, ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಿಎಂ ಕಚೇರಿಯಲ್ಲಿ ಅವರಿಗೆ ಕಾರ್ಯದರ್ಶಿಯಾಗಿದ್ದರು. 2014ರಲ್ಲಿ ಮೋದಿ ಪ್ರಧಾನಿಯಾದಾಗ ಪ್ರಧಾನಮಂತ್ರಿ ಕಚೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇರ್ಪಡೆಗೊಂಡಿದ್ದರು. ಅವರು ಉ.ಪ್ರ.ದ ಮೌ ಜಿಲ್ಲೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದಾರೆ.
21ಕ್ಕೆ ಸಂತೋಷ್ ಭೇಟಿ
ಕಳೆದ 15 ದಿನಗಳ ಹಿಂದಷ್ಟೇ ಲಕ್ನೋಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಲ್. ಸಂತೋಷ್, ಜೂ. 21ರಂದು ಲಕ್ನೋಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಉತ್ತರ ಪ್ರದೇಶ ರಾಜ್ಯ ಉಸ್ತುವಾರಿ ಹೊಂದಿರುವ ರಾಧಾ ಮೋಹನ್ ಸಿಂಗ್ ಅವರೂ ಸಂತೋಷ್ ಜೊತೆಗೆ ಆಗಮಿಸಲಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಹಾಗೂ ಸ್ಥಳೀಯ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ :ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು
ದಿಲ್ಲಿಗೆ ಸೊನೊವಾಲ್:
ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ವದಂತಿಗಳ ನಡುವೆಯೇ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಅವರು ನವದೆಹಲಿಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್