ಬಂಡಾಯಕ್ಕೆ ಸುಸ್ತು: ರಾಣೆಬೆನ್ನೂರಿನಲ್ಲಿ ತೀವ್ರವಾದ ಭಿನ್ನಮತ

ವಿಜಯನಗರದಲ್ಲೂ ಬಂಡಾಯದ ತಲೆನೋವು

Team Udayavani, Nov 17, 2019, 6:10 AM IST

nn-37

ರಮೇಶ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅಶೋಕ್‌ ಪೂಜಾರಿ ಅವರ ಮನೆಗೆ ತೆರಳಿ ಮನವೊಲಿಸಲು ಮಾತುಕತೆ ನಡೆಸಿದರು.

ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದ ಬಂಡಾಯ ಶಮನಗೊಳಿಸಿ ನಿಟ್ಟುಸಿರು ಬಿಟ್ಟಿದ್ದ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಈಗ ವಿಜಯನಗರ, ರಾಣೆಬೆನ್ನೂರು, ಗೋಕಾಕ್‌ನಲ್ಲಿ ಮೂಡಿಸುವ ಭಿನ್ನಮತ ತಲೆನೋವು ತಂದಿದೆ.

ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಸೋಮವಾರ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಣಕ್ಕಿಳಿಯದಂತೆ ತಡೆಯಲು ಬಿಜೆಪಿ ನಾಯಕರು, ಚುನಾವಣ ಉಸ್ತುವಾರಿಗಳು ಇನ್ನಿಲ್ಲದ ಕಸರತ್ತು ಮುಂದು ವರಿಸಿದ್ದಾರೆ. ಟಿಕೆಟ್‌ ಸಿಗದ ಕಾರಣ ಅಸಮಾಧಾನಗೊಂಡ ಕೆಲವರೊಂದಿಗೆ ಯಡಿ ಯೂರಪ್ಪ ಖುದ್ದಾಗಿ ಮಾತುಕತೆ ನಡೆಸಿ ಮನವೊಲಿಸುತ್ತಿದ್ದು, ಕೆಲವೆಡೆ ಫ‌ಲ ನೀಡಿದೆ. ಆದರೆ ಮೂರ್‍ನಾಲ್ಕು ಕ್ಷೇತ್ರಗಳಲ್ಲಿ ಸಮಸ್ಯೆ ನಿವಾರಣೆಯಾಗಿಲ್ಲ. ಬಂಡಾಯ ಉಪಶಮನದ ಜತೆಗೆ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರಕ್ಕೂ ಬಿಜೆಪಿ ಸಿದ್ಧತೆ ನಡೆಸಿದ್ದು, ಸೋಮವಾರದಿಂದ ಯಡಿ ಯೂರಪ್ಪ ಆದಿಯಾಗಿ ಹಿರಿಯ ನಾಯಕರು ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ.

ಟಿಕೆಟ್‌ ಸಿಗದ ಕಾರಣ ಅಸಮಾಧಾನಗೊಂಡಿದ್ದ ಡಿಸಿಎಂ ಲಕ್ಷ್ಮಣ ಸವದಿ, ಅನರ್ಹ ಶಾಸಕ ಆರ್‌. ಶಂಕರ್‌ ಅವರೊಂದಿಗೆ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಶುಕ್ರವಾರ ನಡೆಸಿದ ಸಂಧಾನ ಯಶಸ್ವಿಯಾಗಿದ್ದರಿಂದ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು. ಆದರೆ ರಾಣೆಬೆನ್ನೂರು ಕ್ಷೇತ್ರದಲ್ಲಿ ಅರುಣ್‌ಕುಮಾರ್‌ ಪೂಜಾರ್‌ಗೆ ಟಿಕೆಟ್‌ ನೀಡಿ ರುವುದಕ್ಕೆ ಸಿಟ್ಟುಗೊಂಡಿರುವ ಕಾರ್ಯ ಕರ್ತರು ಕಳೆದ ಚುನಾವಣೆಯಲ್ಲಿ ಸೋತಿದ್ದ ಬಸವರಾಜ್‌ ಕೇಲ್ಗಾರ್‌ಗೆ ಟಿಕೆಟ್‌ ನೀಡು ವಂತೆ ಒತ್ತಾಯಿಸ ಲಾರಂಭಿಸಿದ್ದಾರೆ.

ಬಂಡಾಯವಾಗಿ ಸ್ಪರ್ಧಿಸುವೆ
ವಿಜಯಪುರದ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಸಹಿತ ಹಿರಿಯ ನಾಯಕರು ಮನವೊಲಿಕೆ ನಡೆಸಿದರೂ ಕವಿರಾಜ್‌ ಮುನಿಸು ಶಮನವಾಗಿಲ್ಲ. ರವಿವಾರ ನಾಮಪತ್ರ ಸಲ್ಲಿಕೆಗೆ ಅವಕಾಶವಿಲ್ಲದ ಕಾರಣ ಮತ್ತೂಂದು ಸುತ್ತಿನ ಮಾತುಕತೆ ಮೂಲಕ ಮನವೊಲಿಕೆಗೆ ಪ್ರಯತ್ನ ಮುಂದುವರಿಸಿದ್ದಾರೆ.

ಕೇಂದ್ರ ಸಚಿವರ ಮಾತುಕತೆ
ಗೋಕಾಕ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಶೋಕ್‌ ಪೂಜಾರಿ ಟಿಕೆಟ್‌ ಪಡೆಯಲು ಕೊನೆಯ ಹಂತದ ಪ್ರಯತ್ನ ನಡೆಸಿದಂತಿದೆ. ಅವರನ್ನೂ ಮನವೊಲಿಸಿ ವಿಶ್ವಾಸದಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಮನವೊಲಿಕೆಗೆ ಮುಂದುವರಿದ ಯತ್ನ ಹೊಸಕೋಟೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿ ಯಾಗಿ ಶರತ್‌ ಬಚ್ಚೇಗೌಡ ನಾಮಪತ್ರ ಸಲ್ಲಿಸಿರು ವುದು ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್‌ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ಹೊಸಕೋಟೆ ಚುನಾವಣ ಉಸ್ತುವಾರಿ ಡಿಸಿಎಂ ಡಾ| ಅಶ್ವತ್ಥ ನಾರಾಯಣ ಮಾತುಕತೆ ನಡೆಸಿದ್ದಾರೆ.

2 ಕ್ಷೇತ್ರಗಳಲ್ಲಿ ಬಂಡಾಯ ಉಪಶಮನ
ಯಶವಂತಪುರ ಕ್ಷೇತ್ರದಿಂದ ಎಸ್‌.ಟಿ. ಸೋಮಶೇಖರ್‌ ಅವರಿಗೆ ಟಿಕೆಟ್‌ ನೀಡಿರುವುದರಿಂದ ಬೇಸರಗೊಂಡಿದ್ದ ಜಗ್ಗೇಶ್‌ ಮತ್ತು ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಟಿಕೆಟ್‌ ಅನ್ನು ಕೆ.ಗೋಪಾಲಯ್ಯ ಅವರಿಗೆ ನೀಡಿರುವುದರಿಂದ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಅವರೊಂದಿಗೆ ಯಡಿಯೂರಪ್ಪ ಅವರೇ ಖುದ್ದಾಗಿ ಮಾತುಕತೆ ನಡೆಸಿದ್ದು, ಬಂಡಾಯ ಉಪಶಮನಗೊಂಡಂತಾಗಿದೆ.

ಕ್ರಮಕ್ಕೆ ಹಿಂದೇಟು
ಹಲವೆಡೆ ಪಕ್ಷದ ಮುಖಂಡರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರು ಬಂಡಾಯವೆದ್ದಿದ್ದರೂ ಬಿಜೆಪಿ ಶಿಸ್ತು ಕ್ರಮ ಜರುಗಿಸಲು ಸದ್ಯಕ್ಕೆ ಮುಂದಾಗಿಲ್ಲ. ಪ್ರತಿ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿ ಗೆಲ್ಲುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕಿಂತ ಮನವೊಲಿಕೆಗೆ ರಾಜ್ಯ ನಾಯಕರು ಒತ್ತು ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಅನಂತರ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿ ಸಮನ್ವಯ ಸಭೆ
ಒಂದೆಡೆ ಯಡಿಯೂರಪ್ಪ ಬಂಡಾಯ ವೆದ್ದಿರುವ ನಾಯಕರು, ಮುಖಂಡರ ಮನ ವೊಲಿಸುತ್ತಿದ್ದರೆ, ಮತ್ತೂಂದೆಡೆ ಸಂಘಟನ ಪ್ರಮುಖರು, ಹಿರಿಯ ನಾಯಕರು ಅನರ್ಹ ಶಾಸಕರ ಬೆಂಬಲಿಗರು ಮತ್ತು ಪಕ್ಷದ ಕಾರ್ಯ ಕರ್ತರ ನಡುವೆ ಸಮನ್ವಯ ಸಾಧಿಸುವ ಪ್ರಯತ್ನ ನಡೆಸಿದ್ದಾರೆ. ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಶುಕ್ರವಾರ, ಶನಿವಾರ ಪಕ್ಷದ ಕಾರ್ಯಕರ್ತರು, ಅನರ್ಹ ಶಾಸಕರ ಬೆಂಬಲಿಗರ ಸಭೆ ನಡೆಸಿ ಒಟ್ಟುಗೂಡಿಸುವ ಕಾರ್ಯ ನಡೆದಿದೆ. ರವಿವಾರವೂ ಕೆಲವು ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಘಟಿಸಲಾಗುವುದು. ಆ ಮೂಲಕ ಸೋಮವಾರದಿಂದ ಉಪ ಚುನಾ ವಣೆ ನಡೆಯಲಿರುವ ಎಲ್ಲ 15 ಕ್ಷೇತ್ರ ಗಳಲ್ಲೂ ಪಕ್ಷದ ಕಾರ್ಯಕರ್ತರು, ಅನರ್ಹ ಶಾಸಕರ ಬೆಂಬಲಿಗರು ಒಟ್ಟಾಗಿ ಪ್ರಚಾರಕ್ಕಿಳಿಯಲು ವೇದಿಕೆ ಸಜ್ಜುಗೊಳಿಸಿ ದಂತಾಗುತ್ತದೆ. ಸರಕಾರ ವನ್ನು ಸುಭದ್ರ ವಾಗಿಸುವ ನಿಟ್ಟಿನಲ್ಲಿ ಸಂಘ ಟನೆಯು ಸಂಪೂರ್ಣ ತೊಡಗಿಸಿ ಕೊಂಡಿದ್ದು, ಬಂಡಾಯವನ್ನು ಬಹುತೇಕ ಉಪ ಶಮನ ಗೊಳಿಸುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.