ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್‌

ದೆಹಲಿ ಮೇಯರ್‌ ಚುನಾವಣೆ

Team Udayavani, Feb 3, 2023, 5:49 PM IST

kejriwal-2

ನವದೆಹಲಿ: 2022 ರ ಡಿ.4ರಂದು ನಡೆದಿದ್ದ ದೆಹಲಿ ಪಾಲಿಕೆ ಚುನಾವಣೆಯ 250 ಸ್ಥಾನಗಳಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್‌ ಆದ್ಮಿ ಪಾರ್ಟಿ ಬಿಜೆಪಿ ಪಾಳಯವನ್ನು ನಡುಗಿಸಿತ್ತು. ಆದರೆ ಇದೀಗ ಈ ಕಿಚ್ಚು ಮೇಯರ್‌ ಚುನಾವಣೆಗೂ ತಟ್ಟಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ದೆಹಲಿ ಲೆಫ್ಟಿನಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ನಡುವಿನ ಭಾರೀ ಕೆಸರೆರಚಾಟದಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ದೆಹಲಿ ಪಾಲಿಕೆ ಮೇಯರ್‌ ಚುನಾವಣೆ ಫೆ.6 ಕ್ಕೆ ನಡೆಯಲಿದೆ. ಈ ಮಧ್ಯೆ ಬಿಜೆಪಿ- ಆಪ್‌ ನಾಯಕರ ವಾಕ್ಸಮರ ಜೋರಾಗಿದ್ದು ಈಗ ಸ್ವತಃ ಕೇಜ್ರೀವಾಲ್‌ ಅವರೇ ರಣಾಂಗಣಕ್ಕೆ ಇಳಿದಿದ್ಧಾರೆ. ಹೊಸ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಕೇಜ್ರೀವಾಲ್‌ ಅವರು ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಅನ್ನುವ ಮೂಲಕ ಬಿಜೆಪಿಗೆ ನೇರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಗದ್ದಲವೆಬ್ಬಿಸುವ ಮೂಲಕ ಮೇಯರ್‌ ಚುನಾವಣೆ ಮಾಡಲು ಬಿಟ್ಟಿರಲಿಲ್ಲ ಎಂದು ದೆಹಲಿ ಸಿಎಂ ಕಿಡಿಕಾರಿದ್ದಾರೆ. ನಾವು ಚುನಾವಣೆಯನ್ನು ಮಾಡಬೇಕಾಗಿದೆ. ಆದರೆ ಬಿಜೆಪಿ ನಾಯಕರು ಗದ್ದಲಗಳನ್ನು ಮಾಡುವುದರೊಂದಿಗೆ ಚುನಾವಣೆಗೆ ಅಡ್ಡಿಪಡಿಸಿದ್ರು. ಈಗ ಬಿಜೆಪಿ ಬೇರೆ ದಾರಿಯಿಲ್ಲದೆ ಅವರ ಸೋಲನ್ನು ಒಪ್ಪಬೇಕಾಗಿದೆ ಅಂತ ಕೇಜ್ರಿವಾಲ್‌ ಹೇಳಿದ್ದಾರೆ.

ಆಪರೇಷನ್‌ ಕಮಲವನ್ನು ಟೀಕಿಸಿದ ಕೇಜ್ರಿವಾಲ್‌, ಬಿಜೆಪಿಯವರು ಮಾರುವುದು ಮತ್ತು ಕೊಳ್ಳುವುದರಲ್ಲಿ ಎತ್ತಿದ ಕೈ. ಆದ್ರೆ ನಮ್ಮ ಅಭ್ಯರ್ಥಿಗಳನ್ನು ಕೊಳ್ಳುವುದಕ್ಕೆ ಅವರಿಗೆ ಸಾಧ್ಯವಾಗದೇ ಹತಾಶರಾಗಿ ಗದ್ದಲವೆಬ್ಬಿಸುತ್ತಿದ್ದಾರೆ ಎಂದರು. ಈ ನಡುವೆ ಫೆ.6 ರಂದು ಮೇಯರ್‌ ಚುನಾವಣೆ ನಡೆಸುತ್ತಿರುವುದು ಬಿಜೆಪಿ ಪಿತೂರಿಯ ಭಾಗವಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಆರೋಪಿಸಿದ್ದಾರೆ.

ದೆಹಲಿಯ ಜನ ಬಿಜೆಪಿಯ ಆಡಳಿತದಿಂದ ಹತಾಶರಾಗಿದ್ದಾರೆ. ಜನ ಕೇಜ್ರಿವಾಲ್‌ರನ್ನು ನಂಬಿ ಆಪ್‌ ಪಕ್ಷಕ್ಕೆ ಮತ ಹಾಕಿದ್ಧಾರೆ. 15 ವರ್ಷಗಳ ಬಳಿಕ ಬಿಜೆಪಿಯನ್ನು ಬಿಜೆಪಿಯ ಕಾರ್ಯಕರ್ತರೇ ಸೋಲಿಸಿದ್ದಾರೆ. ಆದರೂ ಈಗ ಬಿಜೆಪಿಯವರೇ ಮೇಯರ್‌ ಚುನಾವಣೆಯಲ್ಲಿ ಭಾರೀ ಪಿತೂರಿ ನಡೆಸುತ್ತಿದ್ದಾರೆ . ಭಾರತೀಯ ಜನತಾ ಪಾರ್ಟಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟು ಫೆ.6 ರ ಮೇಯರ್‌ ಚುನಾವಣೆಯಲ್ಲಿ ಭಾಗಿಯಾಗುವ ನಂಬಿಕೆಯಿದೆ ಎಂದು ಮನೀಷ್‌ ಸಿಸೋಡಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.