ಬಿಜೆಪಿ ಸಿ.ಡಿ. ಸಂಕಲ್ಪ ಯಾತ್ರೆ ಮಾಡಲಿ: ಕುಮಾರಸ್ವಾಮಿ


Team Udayavani, Feb 5, 2023, 6:40 AM IST

ಬಿಜೆಪಿ ಸಿ.ಡಿ. ಸಂಕಲ್ಪ ಯಾತ್ರೆ ಮಾಡಲಿ: ಕುಮಾರಸ್ವಾಮಿ

ಬೆಂಗಳೂರು: ಪಂಚರತ್ನ ರಥಯಾತ್ರೆ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು “ವಿಜಯ ಸಂಕಲ್ಪ’ ಯಾತ್ರೆ ಮಾಡುವ ಬದಲು “ಸಿ.ಡಿ. ಸಂಕಲ್ಪ ಯಾತ್ರೆ’ ಮಾಡಿದರೆ ಲೇಸು ಎಂದು ಕುಟುಕಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೇಂದ್ರ ಸಚಿವರು ತಾವು ಕೂತಿರುವ ಹುದ್ದೆಯ ಘನತೆಯನ್ನು ಮರೆತು ಮಾತನಾಡಿದ್ದಾರೆ. ಅವರಿಗೆ ಅವರದೇ ಭಾಷೆಯಲ್ಲಿ ಪ್ರತಿಕ್ರಿಯಿಸ ಬೇಕಾಗುತ್ತಿದೆ ಎಂದರು.

ಬಿಜೆಪಿಯವರು ಸಿ.ಡಿ. ಸಂಕಲ್ಪ ಅಂತ ಹೆಸರಿಟ್ಟು ಹೋದರೆ ನಾನು ನವಗ್ರಹ ಅಂತ ಹೆಸರು ಬದಲಾಯಿಸುತ್ತೇವೆ. ಕೇಂದ್ರದ ಮಂತ್ರಿಯಾಗಿ ಅವರು ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಿದ್ದಾರೆ. ಅದೇ ಧೂಳು ಮಿಶ್ರಿತ ರಸ್ತೆಗಳು, ಸ್ವತ್ಛತೆ ಇಲ್ಲದ ಗ್ರಾಮಗಳನ್ನು ಅವರು ನೋಡಿಲ್ಲವೇ? ಅವರ ಸರಕಾರದ ಸ್ವತ್ಛ ಭಾರತದ ಹಣೆಬರಹ ಏನಾಗಿದೆ ಎನ್ನುವುದನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಿಗೆ ಬಂದು ನೋಡಲಿ ಎಂದರು.

ದೇವೇಗೌಡರ ಕುಟುಂಬ ಏನು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಹಾಗೆಯೇ ನಿಮ್ಮ ಕುಟುಂಬದ ಹಣೆಬರಹ ಏನು ಎನ್ನುವುದು ಜನತೆಗೆ ಗೊತ್ತಿದೆ. ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದಿರುವ ನಿಮ್ಮ ಸಹೋದರನ ಕಥೆ ಯಾರಿಗೆ ಗೊತ್ತಿಲ್ಲ? ಅಂಥ ವಂಚನೆಯ ಕೆಲಸವನ್ನು ನಮ್ಮ ಕುಟುಂಬ ಮಾಡಿಲ್ಲ ಎಂದು ಜೋಷಿ ವಿರುದ್ಧ ಗುಡುಗಿದರು.

ಜೆಡಿಎಸ್‌ ಸೇರಿದ ನ್ಯಾಯಾಧೀಶರು
ಚಿತ್ತಾಪುರದಲ್ಲಿ ಸಿವಿಲ್‌ ನ್ಯಾಯಾಧೀಶರಾಗಿ ಆಗಿ ಸ್ವಯಂ ನಿವೃತ್ತಿ ಹೊಂದಿದ ಸುಭಾಷ್‌ ಚಂದ್ರ ರಾಥೋಡ್‌ ಅವರು ಇಂದು ಪಕ್ಷದ ಕಚೇರಿಯಲ್ಲಿ ಜೆಡಿಎಸ್‌ ಪಕ್ಷ ಸೇರಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ರಾಥೋಡ್‌ ಅವರಿಗೆ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರ ಮಾಡಿಕೊಂಡರು. ರಾಥೋಡ್‌ ಅವರಿಗೆ ಇನ್ನೂ ಸೇವಾವಧಿ ಇತ್ತು. ಆದರೂ ಜನಸೇವೆ ಮಾಡಲು ಮುಂದೆ ಬಂದಿದ್ದಾರೆ. ಅವರಿಗೆ ಚಿತ್ತಾಪುರ ಟಿಕೆಟ್‌ ನೀಡಲಾಗುವುದು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಅರಕಲಗೂಡು ಎ. ಮಂಜುಗೆ ಹಾಲಿ ಶಾಸಕರಾದ ಎ.ಟಿ.ರಾಮಸ್ವಾಮಿ, ಶಿವಲಿಂಗೇ ಗೌಡರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಸಭೆ ಕರೆದಾಗ ಅವರು ಬಂದಿಲ್ಲ. ಎರಡು ವರ್ಷಗಳಿಂದ ಅವರು ಪಕ್ಷದಿಂದ ದೂರ ಇದ್ದಾರೆ. ಅರಕಲಗೂಡು ಕ್ಷೇತ್ರದ ವಿಚಾರದಲ್ಲಿ ಈಗಾಗಲೇ ಎ.ಮಂಜು ಜತೆ ಮಾತಾಡಿದ್ದೇನೆ. ರೇವಣ್ಣ ಅವರು ಕೂಡ ಮಂಜು ಜತೆ ಮಾತಾಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.