BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್ ಸಿಂಗ್ ಆಗಮನ
Team Udayavani, Jun 7, 2023, 8:35 AM IST
ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವೂ ಸೇರಿ ಕೆಲವು ಸಂಘಟನಾತ್ಮಕ ನಿರ್ಧಾರಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂ. 8ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಅನಂತರ ಇದುವರೆಗೆ ಕೇಂದ್ರದ ಯಾವುದೇ ನಾಯಕರೂ ಕರ್ನಾಟಕದತ್ತ ತಲೆ ಹಾಕಿರಲಿಲ್ಲ. ಪಕ್ಷದ ವೇದಿಕೆಯಲ್ಲಿ ಒಮ್ಮೆ ಮಾತ್ರ ಪರಾಮರ್ಶೆ ಸಭೆ ನಡೆದಿತ್ತು. ಆದರೆ ಇದು ರಾಷ್ಟ್ರೀಯ ನಾಯಕರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.
ಅರುಣ್ ಸಿಂಗ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮೊದಲು ಗೆದ್ದ ಶಾಸಕರಿಗೆ ಅಭಿನಂದನೆ, ಅನಂತರ ಸೋತ ಕ್ಷೇತ್ರಗಳ ಬಗ್ಗೆ ಅವಲೋಕನ ನಡೆಯಲಿದೆ. ಆ ಬಳಿಕ ಸಂಘಟನಾತ್ಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಣೆ ನಡೆಯಲಿದೆ. ಬಿಜೆಪಿ ಮೂಲಗಳ ಪ್ರಕಾರ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುವ ಮೊದಲ ಹಂತದ ಸಭೆ ಇದಾಗಿರಲಿದೆ.
ವಿಪಕ್ಷ ನಾಯಕ ಯಾರಾಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲೇ ಸಾಕಷ್ಟು ಗೊಂದಲಗಳಿವೆ. ಕೆಲವು ಶಾಸಕರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನೇ ಮುಂದುವರಿಸುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಯಕರ್ತರ ಮಟ್ಟದಲ್ಲಿ ಈ ಬಗ್ಗೆ ಭಾರೀ ವಿರೋಧವಿದೆ. ಸಂಸದರು ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರು ಬೊಮ್ಮಾಯಿ ಬದಲು ಬೇರೆ ಲಿಂಗಾಯತ ಮುಖಂಡರಿಗೆ ಅವಕಾಶ ನೀಡಬೇಕೆಂದು ಪ್ರತಿಪಾದಿಸುತ್ತಿವೆ. ಆದರೆ ಹೈಕಮಾಂಡ್ ಈ ವಿಚಾರದಲ್ಲಿ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.
ರಾಜ್ಯಾಧ್ಯಕ್ಷರ ನೇಮಕ ವಿಚಾರ ಇನ್ನಷ್ಟು ವಿಳಂಬವಾಗಬಹುದು ಎಂದು ಹೇಳಲಾಗುತ್ತಿದೆ. ನರೇಂದ್ರ ಮೋದಿ ಸರಕಾರದ 9ನೇ ವರ್ಷದ ಕಾರ್ಯಕ್ರಮ, ರಾಜ್ಯ ಪ್ರವಾಸ ಮುಕ್ತಾಯವಾಗುವವರೆಗೂ ನಳಿನ್ ಕುಮಾರ್ ಕಟೀಲು ಅವರೇ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ