ಮತ ಹಂಚಿಕೆಯಲ್ಲೂ ಬಿಜೆಪಿಯದ್ದೇ ಮೇಲುಗೈ


Team Udayavani, Mar 11, 2022, 6:55 AM IST

ಮತ ಹಂಚಿಕೆಯಲ್ಲೂ ಬಿಜೆಪಿಯದ್ದೇ ಮೇಲುಗೈ

ಉತ್ತರಪ್ರದೇಶದಲ್ಲಿ ಬಹುಮತ ಗಳಿಸಿರುವ ಬಿಜೆಪಿ, ಮತ ಹಂಚಿಕೆಯಲ್ಲೂ ಮೇಲುಗೈ ಸಾಧಿಸಿದೆ. 2017ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಮತ ಹಂಚಿಕೆ ಶೇ.2.13ರಷ್ಟು ಹೆಚ್ಚಳವಾಗಿದೆ. 2017ರಲ್ಲಿ ಶೇ.39.67ರಷ್ಟು ಮತಗಳನ್ನು ಪಡೆದಿದ್ದ ಕೇಸರಿ ಪಕ್ಷ, ಈ ಬಾರಿ ಶೇ.41.8 ಮತಗಳನ್ನು ತನ್ನದಾಗಿಸಿಕೊಂಡಿದೆ. ಆದರೆ, ಕಳೆದ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ ಇಳಿಮುಖವಾಗಿದೆ.

ಇನ್ನು, ಸಮಾಜವಾದಿ ಪಕ್ಷದ ಮತ ಹಂಚಿಕೆಯೂ ಹೆಚ್ಚಳವಾಗಿದೆ. 2017ರಲ್ಲಿ ಶೇ.21.82ರಷ್ಟು ಮತಗಳನ್ನು ಪಡೆದಿದ್ದ ಎಸ್‌ಪಿ, ಈ ಬಾರಿ ಶೇ.32.02ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ರಾಜ್ಯದ ಪ್ರಮುಖ ಪ್ರತಿಪಕ್ಷ ಎಂಬ ಪಟ್ಟವನ್ನು ಉಳಿಸಕೊಂಡಿದೆ.

ಮಾಯಾವತಿಯ ಬಿಎಸ್ಪಿ 2017ರ ಚುನಾವಣೆಯಲ್ಲಿ ಶೇ. 22.23 ಮತ ಗಳಿಸಿತ್ತು. ಪ್ರಸಕ್ತ ಚುನಾವಣೆಯಲ್ಲಿ ಇದು ಶೇ. 12.66ಕ್ಕೆ ಕುಸಿದಿದೆ. ಇದೇ ವೇಳೆ, ಹಿಂದಿನ ಚುನಾವಣೆಯಲ್ಲಿ ಶೇ.6.25 ಮತ ಪಡೆದಿದ್ದ ಕಾಂಗ್ರೆಸ್‌, ಈಗ ಶೇ.2.4ಕ್ಕೆ ತೃಪ್ತಿ ಪಟ್ಟಿದೆ. ಪಂಚರಾಜ್ಯಗಳಲ್ಲಿ ಉತ್ತರಾಖಂಡದ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್‌ನ ಮತ ಹಂಚಿಕೆ ಕುಸಿದಿದೆ.

ಪಕ್ಷಗಳ ಹಿಂದಿಕ್ಕಿದ ನೋಟಾ
ಉತ್ತರಪ್ರದೇಶದಲ್ಲಿ ಕೆಲವು ಪ್ರಮುಖ ರಾಜಕೀಯ ಪಕ್ಷಗಳನ್ನೂ ಹಿಮ್ಮೆಟ್ಟಿಸಿ “ನೋಟಾ’ ಮುಂದೆ ಸಾಗಿರುವುದು ಕಂಡುಬಂದಿದೆ! ಈ ಚುನಾವಣೆಯಲ್ಲಿ ನೋಟಾ(ಮೇಲಿನ ಯಾವುದೂ ಅಲ್ಲ) ಆಯ್ಕೆಯ ಮತ ಹಂಚಿಕೆಯು ಶೇ.0.69 ಎಂದು ಚುನಾವಣಾ ಆಯೋಗ ಹೇಳಿದೆ. ಆಮ್‌ ಆದ್ಮಿ ಪಕ್ಷ(ಶೇ.0.35) ಮತ್ತು ಜೆಡಿಯು(ಶೇ.0.11)ಗೆ ಹೋಲಿಸಿದರೆ ನೋಟಾದ ಮತ ಹಂಚಿಕೆ ಹೆಚ್ಚಾಗಿದೆ. ಇನ್ನು, ಅಸಾದುದ್ದೀನ್‌ ಒವೈಸಿ ಅವರ ಎಐಎಂಐಎಂ ಪಕ್ಷವು ಶೇ.0.47ರಷ್ಟು ಮತಗಳನ್ನಷ್ಟೇ ಪಡೆದಿದೆ. ಸಿಪಿಐ ಶೇ.0.07, ಎನ್‌ಸಿಪಿ ಶೇ.0.05, ಶಿವಸೇನೆ ಶೇ.0.03 ಮತಗಳನ್ನು ಗಳಿಸಿದರೆ, ಸಿಪಿಎಂ, ಸಿಪಿಐಎಂಎಲ್‌ ಮತ್ತು ಎಲ್‌ಜೆಪಿ(ಆರ್‌ವಿ) ಪಕ್ಷಗಳ ಮತ ಹಂಚಿಕೆ ತಲಾ ಶೇ.0.01ರಷ್ಟಿವೆ ಎಂದೂ ಆಯೋಗ ತಿಳಿಸಿದೆ. ವಿಶೇಷವೆಂದರೆ, ಎಐಎಫ್ಬಿ, ಐಯುಎಂಎಲ್‌ ಮತ್ತು ಎಲ್‌ಜೆಪಿ ಪಕ್ಷಗಳು ಒಂದೇ ಒಂದು ಮತ ಗಳಿಸುವಲ್ಲೂ ಸೋತಿದ್ದು, ಇವುಗಳು ಮತ ಹಂಚಿಕೆಯಲ್ಲಿ ಶೂನ್ಯ ಸಾಧನೆ ಮಾಡಿವೆ.

ವಾರಾಣಸಿಯಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌
ಪ್ರಧಾನಿ ನರೇಂದ್ರ ಮೋದಿಯವರ ಲೋಕ­ಸಭಾ ಕ್ಷೇತ್ರವಾಗಿರುವ ವಾರಾಣಸಿಯಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಿದೆ. 2017­ರಂತೆಯೇ ಈ ಬಾರಿಯ ಚುನಾವಣೆಯಲ್ಲೂ ವಾರಾಣಸಿಯ ಎಲ್ಲ 8 ಕ್ಷೇತ್ರಗಳಲ್ಲೂ ಕಮಲ ಪಕ್ಷವು ಭರ್ಜರಿ ಜಯ ಗಳಿಸಿದೆ. 7 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ, 1 ಕ್ಷೇತ್ರದಲ್ಲಿ ಮಿತ್ರಪಕ್ಷ ಅಪ್ನಾ ದಳ ಗೆಲುವು ಸಾಧಿಸಿದೆ. ವಾರಾಣಸಿಯ ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿತ್ತು. ಕಳೆದ ವರ್ಷವಷ್ಟೇ ಮೋದಿ ಅವರು ಇಲ್ಲಿ ಕಾಶಿ ವಿಶ್ವನಾಥ ಕಾರಿಡಾರ್‌ ಲೋಕಾ­ರ್ಪಣೆ ಮಾಡಿದ್ದರು. ಸ್ಥಳೀಯ ಶಾಸಕರ ವಿರುದ್ಧ ಆಡಳಿತ ವಿರೋಧಿ ಅಲೆಯಿದ್ದ ಕಾರಣ ಬಿಜೆಪಿ ಯ ಗೆಲುವು ಸುಲಭವಾಗಿರಲಿಲ್ಲ. ಆದರೆ, ಮೋದಿ ಅವರ ನಿರಂತರ ಪ್ರಚಾರ ರ್ಯಾಲಿ, ರೋಡ್‌ಶೋಗಳು ಕೊನೆಯ ಹಂತದಲ್ಲಿ ಪಕ್ಷದ ಪರ ಗಾಳಿ ಬೀಸಲು ಕಾರಣವಾಯಿತು.

ಲಖೀಂಪುರದಲ್ಲೂ ಬಿಜೆಪಿ
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಾದ ಜಿಲ್ಲೆ ಲಖೀಂಪುರ ಖೇರಿ. ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಯ ಹೋರಾಟದ ರ್ಯಾಲಿ ನಡೆಯುತ್ತಿದ್ದಾಗ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಅವರು ರೈತರ ಮೇಲೆಯೇ ಜೀಪು ಹರಿಸಿ, 8 ಮಂದಿಯ ಸಾವಿಗೆ ಕಾರಣರಾಗಿ­ದ್ದರು ಎಂಬ ಆರೋಪವಿದೆ. ಈ ಘಟನೆಯು ಬಿಜೆಪಿ ವಿರುದ್ಧ ರೈತರ ಆಕ್ರೋಶ ಭುಗಿಲೇಳುವಂತೆ ಮಾಡಿದ್ದು, ಲಖೀಂಪುರ ಜಿಲ್ಲೆಯಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟುಮಾಡಬಹುದು ಎಂದು ಊಹಿಸಲಾಗಿತ್ತು. ಆದರೆ, ಆಶ್ಚರ್ಯವೆಂಬಂತೆ ಲಖೀಂಪುರದಲ್ಲಿರುವ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಪಾಲಿಯಾ, ನಿಘಸನ್‌, ಘೋಲಾ ನಿಘಸನ್‌, ಶ್ರೀನಗರ, ಧೌರ್ಹರಾ, ಲಖೀಂಪುರ, ಕಾಸ್ತಾ ಮತ್ತು ಮೊಹಮ್ಮದಿ ಕ್ಷೇತ್ರಗಳಲ್ಲಿ ಸಮಾಜವಾದಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬಿಜೆಪಿ ಅಭ್ಯರ್ಥಿಗಳು ಮಣಿಸಿದ್ದಾರೆ.

ಸರಕಾರಿ ಕೆಲಸ ಬಿಟ್ಟು ಸ್ಪರ್ಧೆ ಗೆದ್ದರು!
ಉತ್ತರ ಪ್ರದೇಶದ ಚುನಾವಣೆಯಲ್ಲಿ ಸ್ಪರ್ಧಿಸಲೆಂದು ಪೊಲೀಸ್‌ ಕೆಲಸ ಮತ್ತು ಜಾರಿ ನಿರ್ದೇಶನಾಲಯದ ಕೆಲಸವನ್ನು ಬಿಟ್ಟು, ಬಿಜೆಪಿ ಸೇರಿದ್ದ ಇಬ್ಬರೂ ನಾಯ­ಕರು ಗೆಲುವಿನ ನಗೆ ಬೀರಿದ್ದಾರೆ. ಪೊಲೀಸ್‌ ಅಧಿಕಾರಿ­ಯಾಗಿದ್ದ ಆಸಿಮ್‌ ಅರುಣ್‌ ಕನೌ°ಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಜಾರಿ ನಿರ್ದೇಶನಾಲಯದಲ್ಲಿ ಅಧಿಕಾರಿಯಾಗಿದ್ದ ರಾಜೇಶ್ವರ ಸಿಂಗ್‌ ಅವರು ಸರೋಜಿನಿ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸಮಾಜವಾದಿ ಪಕ್ಷದ ಅನಿಲ್‌ ದೊಹರೆ ಅವರನ್ನು ಸೋಲಿಸಿದ್ದಾರೆ. ಆಸಿಮ್‌ ಅರುಣ್‌ ಅವರು 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ರಾಜೇಶ್ವರ್‌ ಸಿಂಗ್‌ ಅವರು 1996ನೇ ಪ್ರಾಂತೀಯ ಪೊಲೀಸ್‌ ಪಡೆ (ಪಿಪಿಎಸ್‌)ಯೊಂದಿಗೆ ವೃತ್ತಿ ಆರಂಭಿಸಿದವರಾಗಿದ್ದಾರೆ.

ಮತಗಟ್ಟೆ ಸಮೀಕ್ಷೆಗೆ ಜಯ
ಉತ್ತರಪ್ರದೇಶದ ಏಳು ಹಂತದ ಚುನಾವಣೆ ಮುಗಿ­ಯುತ್ತಿದ್ದಂ­ತೆಯೇ ಎಲ್ಲ ಸಂಸ್ಥೆಗಳು ಚುನಾವ­ಣೋ­ತ್ತರ ಮತಗಟ್ಟೆ ಸಮೀಕ್ಷೆಯ ವರದಿಯನ್ನು ಪ್ರಕಟಿಸಿದ್ದವು. ಬಹುತೇಕ ಎಲ್ಲ ಸಮೀಕ್ಷೆಗಳ ಅಂಕಿ ಅಂಶ ನಿಜವಾಗಿದ್ದು, ಸಮೀಕ್ಷೆಗಳು ಜಯ ಗಳಿಸಿದಂತಾಗಿದೆ.

ಅತಿ ಹತ್ತಿರದ ವರದಿ ಕೊಟ್ಟಿರುವ ಜೀ ನ್ಯೂಸ್‌, ತನ್ನ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಗೆ 245-267 ಸ್ಥಾನ ಸಿಗಲಿದೆ ಎಂದಿತ್ತು. ಅದರಂತೆಯೇ ಬಿಜೆಪಿಯು 260ಕ್ಕೂ ಅಧಿಕ ಸ್ಥಾನ ಗೆದ್ದಿದೆ. ಹಾಗೆಯೇ ವರದಿಯಲ್ಲಿ ಸಮಾಜವಾದಿ ಪಕ್ಷವು 125-148 ಗೆಲ್ಲಲಿದೆ ಎಂದಿದ್ದು, ಅದೂ ಕೂಡ ಫ‌ಲಿತಾಂಶದಲ್ಲಿ ಸತ್ಯವಾಗಿದೆ. ಈವರೆಗೆ ಆಡಳಿತದ­ಲ್ಲಿದ್ದ ಕಾಂಗ್ರೆಸ್‌ 3-7 ಸ್ಥಾನಗಳಿಗೆ ತೃಪ್ತಿ ಪಡಬೇಕಾಗುತ್ತದೆ ಎಂದು ಅಂದಾ­­ಜಿಸಲಾಗಿದ್ದು, ಅದೂ ಸತ್ಯ­ವಾಗಿದೆ. ಬಿಎಸ್‌ಪಿ 5-9 ಸ್ಥಾನ ಗೆಲ್ಲುತ್ತದೆ ಎಂದು ಅಂದಾಜಿಸಲಾ­ಗಿತ್ತಾದರೂ ಫ‌ಲಿ­ತಾಂಶದಲ್ಲಿ ಬಿಎಸ್‌ಪಿ ಕೇವಲ 1 ಸ್ಥಾನವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ ಬಹುತೇಕ ಎಲ್ಲ ಸಮೀಕ್ಷೆಗಳ ಆಸು­ಪಾಸಿ­ನಲ್ಲೇ ಫ‌ಲಿತಾಂಶ ಕಂಡುಬಂದಿದೆ. ಎಲ್ಲ ಸಮೀಕ್ಷೆ­ಗಳು ಬಿಜೆಪಿ, ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ಸ್ಥಾನ­ಗಳನ್ನು ಅಂದಾ­ಜಿಸುವಲ್ಲಿ ಯಶಸ್ವಿಯಾಗಿ­ವೆಯಾ­ದರೂ ಬಿಎಸ್‌ಪಿ ಬಗ್ಗೆ ಹೆಚ್ಚಿನ ನಿರೀಕ್ಷೆಯಿಟ್ಟುಕೊಂಡು ಸೋತಿವೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.