ಬಿಜೆಪಿಯವರು ಅಹಂಕಾರದಲ್ಲಿ ಸರ್ಕಾರ ನಡೆಸುತ್ತಿದ್ದಾರೆ: ದಿನೇಶ್ ಗುಂಡೂರಾವ್
Team Udayavani, Oct 11, 2019, 11:07 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಅಹಂಕಾರದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ವಿಪಕ್ಷಗಳ ಅಧಿಕಾರ ಮೊಟಕು ಮಾಡುವುದು, ನಾವು ಹೇಳಿದ್ದೇ ಆಗಬೇಕು ಎಂಬ ದಾಷ್ಟ್ಯ ಅವರದ್ದು. ಕೇಂದ್ರದಲ್ಲೂ ಹಾಗೇ ಇದೆ, ರಾಜ್ಯದಲ್ಲೂ ಹಾಗೇ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಧಿವೇಶನ ಮೂರು ದಿನ ಯಾಕೆ ಕರೆದಿದ್ದಾರೆ. ರಾಜ್ಯದ ಪ್ರವಾಹ, ಬರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕು. ನೂರೆಂಟು ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು. ಆದರೆ ಸರ್ಕಾರದ ನಡೆ ಬೇಸರತರಿಸುತ್ತಿದೆ. ಜನತಂತ್ರ ವ್ಯವಸ್ಥೆಯೇ ಕುಸಿಯುತ್ತಿದೆ ಎಂದು ಟೀಕಿಸಿದರು.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಮೇಲೆ ಐಟಿ ದಾಳಿ ವಿಚಾರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಸರ್ಕಾರ ಏಜೆನ್ಸಿಯನ್ನ ಬಳಸಿಕೊಂಡು ದಾಳಿ ಮಾಡಿಸಿದೆ. ಪ್ರತಿಪಕ್ಷಗಳನ್ನು ಮುಗಿಸುವ ಕೆಲಸ ನಡೆಯುತ್ತಿದೆ. ಜನ ಇದನ್ನ ಯಾವತ್ತೂ ಒಪ್ಪುವುದಿಲ್ಲ ಎಂದರು. ಬಿಜೆಪಿಯಲ್ಲಿ ಎಷ್ಟು ಭ್ರಷ್ಟರಿದ್ದಾರೆ. ಅವರ ಮಂತ್ರಿಗಳ ಮೇಲೆ ಸಾಕಷ್ಟು ಆರೋಪಗಳಿವೆ. ರಿವೇಂಜ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ ಎಂದು ಟೀಕೆ ಮಾಡಿದರು.
ದೇಶದ ಅರ್ಥ ವ್ಯವಸ್ಥೆ ಕುಸಿದಿದೆ. 5.8 ಪರ್ಸೆಂಟ್ ಜಿಡಿಪಿ ದರ ಇಳಿದಿದೆ. ಸುಳ್ಳು ವದಂತಿ ಹಬ್ಬಿಸಿ ಸರ್ಕಾರ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!