![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
ನಾನು ಕೇಂದ್ರ ಸಚಿವನಾಗುತ್ತೇನೆ. ಇದು ಮೋದಿ ಅವರ ಗ್ಯಾರಂಟಿ...
Team Udayavani, Jun 10, 2024, 12:30 PM IST
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-620x331.jpg)
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇರಳದ ತ್ರಿಶ್ಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿತ್ತು. ಇದರೊಂದಿಗೆ ಸುರೇಶ್ ಗೋಪಿ ಭಾನುವಾರ ಮೋದಿ 3.0 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗತ ವ್ಯಕ್ತಪಡಿಸುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.
ಇದನ್ನೂ ಓದಿ:Belagavi; ಒಂದು ತಿಂಗಳ ಮಗುವನ್ನು ಒಂದೂವರೆ ಲಕ್ಷ ರೂ.ಗೆ ಮಾರಾಟ! ಐವರ ಬಂಧನ
ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್ ಗೋಪಿ, ನಾನು ಸಂಸದನಾಗಿ ಕಾರ್ಯನಿರ್ವಹಿಸಲು ಬಯಸುತ್ತೇನೆ ವಿನಃ, ಸಚಿವ ಸ್ಥಾನಮಾನ ಬೇಡ ಎಂಬುದಾಗಿ ತಿಳಿಸಿದ್ದಾರೆ.
ತಕ್ಷಣವೇ ನನ್ನ ರಾಜ್ಯ ಖಾತೆ ಸಚಿವ ಸ್ಥಾನಮಾನ ಹೊಣೆಗಾರಿಕೆಯಿಂದ ಬಿಡುಗಡೆಗೊಳಿಸುತ್ತಾರೆಂಬ ನಂಬಿಕೆ ಇರುವುದಾಗಿ ಸುರೇಶ್ ಗೋಪಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಯಾಕೆ ಬೇಡ:
ತ್ರಿಶ್ಶೂರ್ ಜನತೆಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ. ಸಂಸದನಾಗಿ ನಾನು ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂಬುದು ಜನತೆಗೆ ತಿಳಿದಿದೆ. ನನಗೆ ಸಿನಿಮಾದಲ್ಲಿ ನಟಿಸಬೇಕಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಾಗಿದೆ. ಇನ್ನು ಈ ಬಗ್ಗೆ ಪಕ್ಷ ನಿರ್ಧರಿಸಲಿ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡುತ್ತ ತಿಳಿಸಿದ್ದಾರೆ.
2024ರ ಲೋಕಸಭೆ ಚುನಾವಣ ಪ್ರಚಾರದ ಸಂದರ್ಭದಲ್ಲಿ ಸುರೇಶ್ ಗೋಪಿ ಅವರು, ಒಂದು ವೇಳೆ ನಾನು ಚುನಾವಣೆಯಲ್ಲಿ ಜಯ ಸಾಧಿಸಿದರೆ, ನಾನು ಕೇಂದ್ರ ಸಚಿವನಾಗುತ್ತೇನೆ. ಇದು ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ಬಹಿರಂಗವಾಗಿ ಹೇಳಿದ್ದರು.
ಪ್ರಚಾರದಲ್ಲಿ ಸುರೇಶ್ ಗೋಪಿ ಅವರು “ತ್ರಿಶ್ಶೂರ್ ನ ಕೇಂದ್ರ ಸಚಿವ, ಇದು ಮೋದಿ ಗ್ಯಾರಂಟಿ” ಎಂಬ ಸ್ಲೋಗನ್ ಮೊಳಗಿಸಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದು, ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾನು ಸಿನಿಮಾ ಇಂಡಸ್ಟ್ರೀಯನ್ನು ಬಿಡಲಾರೆ, ನಟನೆ ನನ್ನ ಹವ್ಯಾಸವಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ ಸಚಿವ ಸ್ಥಾನ ಬೇಡ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.