ಯುಪಿ, ಉತ್ತರಾಖಾಂಡ, ಗೋವಾದಲ್ಲಿ ಬಿಜೆಪಿ ಸೇಫ್ : ಸಿ-ವೋಟರ್ ಸಮೀಕ್ಷೆ
ಪಂಜಾಬ್, ಮಣಿಪುರದಲ್ಲಿ ಅತಂತ್ರ ಸ್ಥಿತಿ ಸಾಧ್ಯತೆ
Team Udayavani, Nov 13, 2021, 9:45 PM IST
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಾಂಡ, ಮಣಿಪುರ ಹಾಗೂ ಗೋವಾ ರಾಜ್ಯಗಳಲ್ಲಿ ವಿಧಾನಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ಚುನಾವಣಾ ವಿಶೇಷಣಾ ಸಂಸ್ಥೆಯಾದ ಸಿ-ವೋಟರ್, ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ.
ಅದರಲ್ಲಿ ಉತ್ತರ ಪ್ರದೇಶ, ಉತ್ತರಾಖಾಂಡ, ಗೋವಾಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಮುಂದುವರಿಯುತ್ತದೆ. ಪಂಜಾಬ್ ಹಾಗೂ ಮಣಿಪುರದಲ್ಲಿ ಅತಂತ್ರಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿತೆ ಎಂದು ಹೇಳಿದೆ.
ಉತ್ತರ ಪ್ರದೇಶ :
ಇಡೀ ದೇಶದ ಗಮನವನ್ನು ಸೆಳೆದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಆದರೆ, ಈ ಹಿಂದಿನ ಚುನಾವಣೆಗೆ ಹೋಲಿಸಿದರೆ ಬಿಜೆಪಿಯು ಈ ಬಾರಿ ಹೆಚ್ಚು ಸೀಟುಗಳನ್ನು ಕಳೆದುಕೊಳ್ಳುತ್ತದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಬಿಜೆಪಿಯು 217 ಸ್ಥಾನ, ಎಸ್ಪಿ ಹಾಗೂ ಮಿತ್ರ ಪಕ್ಷಗಳು 156 ಸ್ಥಾನ, ಬಿಎಸ್ಪಿ 18 ಸ್ಥಾನ ಹಾಗೂ ಕಾಂಗ್ರೆಸ್ 8 ಸ್ಥಾನ ಗಳಿಸುವ ಸಾಧ್ಯತೆಗಳಿವ ಎಂದು ಹೇಳಲಾಗಿದೆ.
ಪಂಜಾಬ್ :
ಈ ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿ (ಆಪ್) ಹಾಗೂ ಕಾಂಗ್ರೆಸ್ ನಡುವೆ ನೇರ ಮುಖಾಮುಖೀ ಸೃಷ್ಟಿಯಾಗುತ್ತದೆ. ಆದರೆ, ಎರಡೂ ಪಕ್ಷಗಳು ಅಧಿಕಾರ ಗದ್ದುಗೆ ಹಿಡಿಯುವಲ್ಲಿ ವಿಫಲವಾಗುತ್ತವೆ ಎಂದು ಹೇಳಲಾಗಿದೆ. ಕಾಂಗ್ರೆಸ್ಗೆ 46, ಆಪ್ ಪಕ್ಷಕ್ಕೆ 51, ಶಿರೋಮಣಿ ಅಕಾಲಿ ದಳಕ್ಕೆ 20 ಸ್ಥಾನ ಸಿಕ್ಕರೆ, ಬಿಜೆಪಿಗೆ ಶೂನ್ಯ ಸಂಪಾದನೆಯಾಗಲಿದೆ ಎಂದು ಹೇಳಲಾಗಿದೆ.
ಉತ್ತರಾಖಾಂಡ :
ಇಲ್ಲಿ ಬಿಜೆಪಿ ಸರ್ಕಾರ ಮುಂದುವರಿಯುವ ಅವಕಾಶಗಳಿವೆ. ಆದರೆ, ಕಾಂಗ್ರೆಸ್ ತೀರಾ ಹತ್ತಿರದ ಪೈಪೋಟಿ ನೀಡಬಲ್ಲದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಬಿಜೆಪಿಗೆ 38 ಸ್ಥಾನ, ಕಾಂಗ್ರೆಸ್ಗೆ 32 ಸ್ಥಾನ ಸಿಗಬಲ್ಲದು ಎನ್ನಲಾಗಿದೆ.
ಮಣಿಪುರ :
ಈ ರಾಜ್ಯದಲ್ಲಿ ಅಧಿಕಾರ ಗದ್ದುಗೆಯಲ್ಲಿರುವ ಎನ್ಡಿಎ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಅನುಮಾನಗಳಿವೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಆದರೆ, ಎರಡೂ ಪಕ್ಷಗಳಿಗೆ ಬಹುಮತ ಗಳಿಸುವಲ್ಲಿ ವಿಫಲವಾಗುವುದಂತೂ ಸ್ಪಷ್ಟ ಎಂದು ಹೇಳಲಾಗಿದೆ. ಇಲ್ಲಿ ಬಿಜೆಪಿಗೆ 27, ಕಾಂಗ್ರೆಸ್ಗೆ 22, ಎನ್ಪಿಎಫ್ಗೆ 6 ಸ್ಥಾನ ಸಿಗುವ ಸಾಧ್ಯತೆಗಳಿವೆ.
ಗೋವಾ :
ಇಲ್ಲಿಯೂ ಆಡಳಿತಾರೂಢ ಬಿಜೆಪಿ ಪುನಃ ಅಧಿಕಾರಕ್ಕೆ ಬರಬಹುದು. ಸರ್ಕಾರ ರಚನೆಗೆ ಎಷ್ಟು ಬೇಕೋ ಅಷ್ಟು ಸ್ಥಾನಗಳು ಲಭ್ಯವಾಗುವ ಸಾಧ್ಯತೆಗಳಿವೆ. ಬಿಜೆಪಿಗೆ 21 ಸ್ಥಾನ, ಆಮ್ ಆದ್ಮಿ ಪಾರ್ಟಿಗೆ (ಆಪ್) 5, ಕಾಂಗ್ರೆಸ್ಗೆ 4 ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್