ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ


Team Udayavani, May 9, 2019, 3:10 AM IST

bjp-logo

ಬೆಂಗಳೂರು: ಲೋಕಸಭಾ ಚುನಾವಣೆ ಹಾಗೂ ಕುಂದಗೋಳ, ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫ‌ಲಿತಾಂಶದ ಜತೆಗೆ ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಕುರಿತೂ ಸದ್ಯ ಬಿಜೆಪಿಯಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಫ‌ಲಿತಾಂಶದ ಬಳಿಕ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಸನ್ನಿಹಿತವೆನಿಸಿದ್ದರೂ ಆ ಪ್ರಕ್ರಿಯೆ ಆಗಸ್ಟ್‌ ಹೊತ್ತಿಗೆ ನಡೆಯುವ ನಿರೀಕ್ಷೆ ಇದೆ.

ಎಲ್ಲವೂ ಸದ್ಯ ಸಾರ್ವತ್ರಿಕ ಲೋಕಸಭಾ ಚುನಾವಣೆ ಫ‌ಲಿತಾಂಶದ ಮೇಲೆ ಅವಲಂಬಿತವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅಧಿಕಾರಾವಧಿಯೂ ಪೂರ್ಣಗೊಂಡಿದ್ದು, ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸೇರಿದಂತೆ ನಾನಾ ಹಂತದ ಪದಾಧಿಕಾರಿಗಳ ಬದಲಾವಣೆಯೂ ಆಗಬೇಕಿದೆ. ಹಾಗಾಗಿ, ಇದೊಂದು ರಾಷ್ಟ್ರೀಯ ಮಟ್ಟದ ಪ್ರಕ್ರಿಯೆ ಎನಿಸಿದೆ. ಕೇಂದ್ರದಲ್ಲಿ ಸರ್ಕಾರ ರಚನೆ ಬಳಿಕವಷ್ಟೇ ಉಳಿದ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್‌.ಯಡಿಯೂರಪ್ಪ ಅವರ ಮೂರು ವರ್ಷಗಳ ಅಧಿಕಾರಾವಧಿ ಕಳೆದ ಏ.14ಕ್ಕೆ ಪೂರ್ಣಗೊಂಡಿದೆ. ಸದ್ಯ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿ ಇನ್ನೂ ಕೆಲ ಕಾಲ ಮುಂದುವರಿಯಲಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನ ತೊರೆಯುವ ಮುನ್ಸೂಚನೆ ನೀಡಿದ್ದಾರೆ.

ಆ ಹಿನ್ನೆಲೆಯಲ್ಲಿ ರಾಜ್ಯದ ಇತರ ನಾಯಕರು ಜಾತಿ, ಸಮುದಾಯ, ನಾಯಕತ್ವ, ಹಿರಿತನ, ವೈಯಕ್ತಿಕ ವರ್ಚಸ್ಸು, ಸಂಘಟನಾ ಚಾತುರ್ಯ, ಪಕ್ಷದ ಎಲ್ಲ ನಾಯಕರೊಂದಿಗೆ ಉತ್ತಮ ಸಂಬಂಧ, ಈವರೆಗೆ ನಿರ್ವಹಿಸಿರುವ ಜವಾಬ್ದಾರಿ ಆಧಾರದ ಮೇಲೆ ರಾಜ್ಯಾಧ್ಯಕ್ಷ ಸ್ಥಾನ ಪಡೆಯಲು ತೆರೆಮರೆಯಲ್ಲೇ ಕಸರತ್ತು ನಡೆಸಿದ್ದಾರೆ. ಇದಕ್ಕೆ ಅವರ ಮಾರ್ಗದರ್ಶಕರು, ಪ್ರಭಾವಿ ನಾಯಕರು ಸಹ ಬೆನ್ನು ತಟ್ಟುತ್ತಿದ್ದಾರೆ.

ಎಲ್ಲ ಹಂತದ ಪದಾಧಿಕಾರಿಗಳು ಬದಲು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲದೆ, ಎಲ್ಲ ಹಂತಗಳ ಪದಾಧಿಕಾರಿಗಳ ಬದಲಾವಣೆ ಸಹ ನಡೆಯಲಿದೆ. ಮುಖ್ಯವಾಗಿ ಜಿಲ್ಲೆ, ತಾಲೂಕು, ಮಂಡಲ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬದಲಾವಣೆಯಾಗಲಿದ್ದಾರೆ. ರಾಜ್ಯಾಧ್ಯಕ್ಷರು ಬದಲಾಗುತ್ತಿದ್ದಂತೆ ರಾಜ್ಯ ಪದಾಧಿಕಾರಿಗಳ ಬದಲಾವಣೆಯೂ ಸಹಜ. ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸದೃಢವಾಗಿ ಸಂಘಟಿಸಿ ಬೆಳೆಸಲು ಪೂರಕವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಯುವ ಮುಖಂಡರಿಗೆ ಹೆಚ್ಚು ಆದ್ಯತೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಪ್ರಕ್ರಿಯೆ: ಮೂರು ವರ್ಷದ ಹಿಂದೆ ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರು ಆಯ್ಕೆಯಾದ ಸಂದರ್ಭದಲ್ಲೇ ಇತರ ನಾಲ್ಕು ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕವೂ ನಡೆದಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಎರಡು ಅವಧಿಗೆ ಅಂದರೆ, ಆರು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ್ದಾರೆ. ಹಾಗಾಗಿ, ರಾಷ್ಟ್ರೀಯ ಅಧ್ಯಕ್ಷರು ಬದಲಾಗಬೇಕಿದೆ.

ಬಳಿಕ ನಿಯಮಾನುಸಾರ ಕೇಂದ್ರ ಚುನಾವಣಾ ಸಮಿತಿ, ಸಂಸದೀಯ ಮಂಡಳಿ, ಇತರ ಪದಾಧಿಕಾರಿಗಳ ಬದಲಾವಣೆ ಪ್ರಕ್ರಿಯೆಯೂ ನಡೆಯಲಿದೆ. ಹಾಗಾಗಿ, ಇದೊಂದು ರಾಷ್ಟ್ರೀಯ ಪ್ರಕ್ರಿಯೆಯಾಗಿದ್ದು, ಕಾಲಾವಕಾಶ ಹಿಡಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್‌ನಲ್ಲಿ ಆಯ್ಕೆ ಪ್ರಕ್ರಿಯೆ ಸಾಧ್ಯತೆ: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ತಕ್ಷಣ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ಕಡಿಮೆ. ಏಕೆಂದರೆ ಕೇಂದ್ರದಲ್ಲಿ ಸರ್ಕಾರ ರಚನೆ ಮೊದಲ ಆದ್ಯತೆಯಾಗಲಿದೆ. ನಿಯಮಾನುಸಾರ ಪ್ರಕ್ರಿಯೆಗಳೆಲ್ಲಾ ನಡೆದು ಸರ್ಕಾರ ರಚನೆಗೆ ಒಂದಿಷ್ಟು ದಿನ ಬೇಕಾಗಲಿದೆ. ಅಲ್ಲಿ ರಚನೆಯಾಗುವ ಸರ್ಕಾರದ ಆಧಾರದ ಮೇಲೆ ಇತರ ಬೆಳವಣಿಗೆಗಳು ಆಗಲಿವೆ. ಮೊದಲಿಗೆ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ನಡೆಯಲಿದೆ.

ಆನಂತರ ರಾಷ್ಟ್ರೀಯ ಪದಾಧಿಕಾರಿಗಳ ಪೈಕಿ ಕೆಲ ಬದಲಾವಣೆಗಳಾಗಲಿದ್ದು, ಬಳಿಕ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಪಕ್ಷದ ಸಂವಿಧಾನದ ಪ್ರಕಾರವೇ ಎಲ್ಲ ಪ್ರಕ್ರಿಯೆಗಳು ನಡೆಯಬೇಕಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ಕಾರ್ಯ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಹೆಚ್ಚು ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.

300 ಸ್ಥಾನ ಗೆದ್ದರೆ ಭಾರೀ ಬದಲಾವಣೆ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಂಘಟನೆ ದೃಷ್ಟಿಯಿಂದ ಭಾರೀ ಬದಲಾವಣೆಗಳಾಗಲಿವೆ. ಭವಿಷ್ಯದಲ್ಲಿ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಹಾಗೂ ದೇಶಾದ್ಯಂತ ಬಿಜೆಪಿಯನ್ನು ತಳಮಟ್ಟದಿಂದ ಇನ್ನಷ್ಟು ಸದೃಢವಾಗಿ ಸಂಘಟಿಸುವ ಉದ್ದೇಶದಿಂದ ಮಹತ್ತರ ಬದಲಾವಣೆಗಳಾಗಲಿವೆ.

ಮುಖ್ಯವಾಗಿ ಯುವ ಮುಖಂಡರು, ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆ ಇದೆ. ಯುವ ನಾಯಕತ್ವ ಆಧಾರಿತವಾಗಿ ಸಂಘಟನೆ ಬೆಳೆಸುವ ಪ್ರಕ್ರಿಯೆಗಳಾಗಲಿವೆ. ಹಾಗಾಗಿ, ಚುನಾವಣಾ ಫ‌ಲಿತಾಂಶವು ದೇಶದಲ್ಲಿ ಮಾತ್ರವಲ್ಲದೆ ಪಕ್ಷದಲ್ಲೂ ಹೊಸ ಬದಲಾವಣೆ ತರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕ್ಷೇತ್ರದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.